<p><strong>ಕಾರವಾರ: </strong>ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಸೌಕರ್ಯಗಳ ಆಸ್ಪತ್ರೆ ಆರಂಭಿಸುವಂತೆ ಒತ್ತಾಯಿಸಿ, ಸಾಮಾಜಿಕ ಜಾಲತಾಣಗಳ ಬಳಕೆದಾರರು ಭಾನುವಾರ ಆರಂಭಿಸಿದ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾನುವಾರ ಟ್ವಿಟರ್ನಲ್ಲಿ ಈ ವಿಷಯವು ದೇಶದ ಮಟ್ಟಿಗೆ ಅತಿ ಹೆಚ್ಚು ಚರ್ಚಿತ 35ನೇ ವಿಷಯವಾಗಿತ್ತು.</p>.<p>ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವೀಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಟ್ಯಾಗ್ ಮಾಡಿ ಸಂಜೆ 5 ಗಂಟೆಗೆ ಟ್ವೀಟ್ ಮಾಡಲಾಗಿತ್ತು. ರಾತ್ರಿ 8ರವರೆಗೆ 14 ಸಾವಿರ ಟ್ವೀಟ್ಗಳು ಪ್ರಕಟವಾಗಿದ್ದವು ಎಂದು ಟ್ವಿಟರ್ನ ಅಂಕಿ ಅಂಶಗಳು ತಿಳಿಸಿವೆ.</p>.<p>ವಿಧಾನಸಭೆ ಪ್ರತಿಪ್ರಕ್ಷದ ನಾಯಕ ಸಿದ್ದರಾಮಯ್ಯ ಕೂಡ ಉತ್ತರ ಕನ್ನಡದಲ್ಲಿ ಸುಸಜ್ಜಿತ ಆಸ್ಪತ್ರೆಯ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಅವರೂ ಟ್ವೀಟ್ ಮತ್ತು ಫೇಸ್ಬುಕ್ನಲ್ಲಿ ‘ಪೋಸ್ಟ್’ ಮಾಡಿದ್ದಾರೆ.</p>.<p>‘ಸುಸಜ್ಜಿತ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆಗ್ರಹಿಸಿ ಉತ್ತರ ಕನ್ನಡದ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಅಹವಾಲನ್ನು ಮುಕ್ತ ಮನಸಿನಿಂದ ಆಲಿಸಿ, ಸಮಸ್ಯೆ ಬಗೆಹರಿಸುವತ್ತ ಕಾರ್ಯಪ್ರವೃತ್ತವಾಗಬೇಕು ಎಂದು ಒತ್ತಾಯಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.</p>.<p>ಚಲನಚಿತ್ರ ನಿರ್ದೇಶಕರು, ಸಾಮಾಜಿಕ ಕಾರ್ಯಕರ್ತರು, ರಾಜಕಾರಣಿಗಳು, ವಿವಿಧ ಸಂಘ ಸಂಸ್ಥೆಗಳು ಜಿಲ್ಲೆಯ ಬೇಡಿಕೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಸೌಕರ್ಯಗಳ ಆಸ್ಪತ್ರೆ ಆರಂಭಿಸುವಂತೆ ಒತ್ತಾಯಿಸಿ, ಸಾಮಾಜಿಕ ಜಾಲತಾಣಗಳ ಬಳಕೆದಾರರು ಭಾನುವಾರ ಆರಂಭಿಸಿದ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭಾನುವಾರ ಟ್ವಿಟರ್ನಲ್ಲಿ ಈ ವಿಷಯವು ದೇಶದ ಮಟ್ಟಿಗೆ ಅತಿ ಹೆಚ್ಚು ಚರ್ಚಿತ 35ನೇ ವಿಷಯವಾಗಿತ್ತು.</p>.<p>ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವೀಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಟ್ಯಾಗ್ ಮಾಡಿ ಸಂಜೆ 5 ಗಂಟೆಗೆ ಟ್ವೀಟ್ ಮಾಡಲಾಗಿತ್ತು. ರಾತ್ರಿ 8ರವರೆಗೆ 14 ಸಾವಿರ ಟ್ವೀಟ್ಗಳು ಪ್ರಕಟವಾಗಿದ್ದವು ಎಂದು ಟ್ವಿಟರ್ನ ಅಂಕಿ ಅಂಶಗಳು ತಿಳಿಸಿವೆ.</p>.<p>ವಿಧಾನಸಭೆ ಪ್ರತಿಪ್ರಕ್ಷದ ನಾಯಕ ಸಿದ್ದರಾಮಯ್ಯ ಕೂಡ ಉತ್ತರ ಕನ್ನಡದಲ್ಲಿ ಸುಸಜ್ಜಿತ ಆಸ್ಪತ್ರೆಯ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಅವರೂ ಟ್ವೀಟ್ ಮತ್ತು ಫೇಸ್ಬುಕ್ನಲ್ಲಿ ‘ಪೋಸ್ಟ್’ ಮಾಡಿದ್ದಾರೆ.</p>.<p>‘ಸುಸಜ್ಜಿತ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆಗ್ರಹಿಸಿ ಉತ್ತರ ಕನ್ನಡದ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಅಹವಾಲನ್ನು ಮುಕ್ತ ಮನಸಿನಿಂದ ಆಲಿಸಿ, ಸಮಸ್ಯೆ ಬಗೆಹರಿಸುವತ್ತ ಕಾರ್ಯಪ್ರವೃತ್ತವಾಗಬೇಕು ಎಂದು ಒತ್ತಾಯಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.</p>.<p>ಚಲನಚಿತ್ರ ನಿರ್ದೇಶಕರು, ಸಾಮಾಜಿಕ ಕಾರ್ಯಕರ್ತರು, ರಾಜಕಾರಣಿಗಳು, ವಿವಿಧ ಸಂಘ ಸಂಸ್ಥೆಗಳು ಜಿಲ್ಲೆಯ ಬೇಡಿಕೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>