<p><strong>ಕಾರವಾರ:</strong> ಪರಿಶಿಷ್ಟ ಸಮುದಾಯಗಳಲ್ಲಿರುವ ಉಪ ಪಂಗಡಗಳಿಗೆ ಒಳಮೀಸಲಾತಿಗೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ಮಿತ್ರ ಸಮಾಜ ಮೈದಾನದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು. ಪರಿಶಿಷ್ಟ ಸಮುದಾಯಗಳಲ್ಲಿನ 106ಕ್ಕೂ ಹೆಚ್ಚು ಉಪ ಪಂಗಡಗಳಿಗೆ ಸರ್ಕಾರ ಸೂಕ್ತ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.</p>.<p>‘ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರಿಂಕೋರ್ಟ್ ಈಗಾಗಲೆ ಆದೇಶಿಸಿದೆ. ಈವರೆಗೂ ರಾಜ್ಯದಲ್ಲಿ ಆದೇಶ ಪಾಲನೆ ಆಗಿಲ್ಲ. ಇದರಿಂದ ಹಲವು ಉಪ ಪಂಗಡಗಳು ಮೀಸಲಾತಿ ಸೌಲಭ್ಯದಿಂದ ವಂಚಿತವಾಗುವಂತಾಗಿದೆ. ಕೇವಲ ಬಲಾಢ್ಯ ಗುಂಪುಗಳಿಗೆ ಮಾತ್ರ ಮೀಸಲಾತಿ ಸೌಲಭ್ಯ ದೊರೆಯುತ್ತಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>‘ಒಳಮೀಸಲಾತಿ ಸೌಲಭ್ಯ ಇಲ್ಲದ ಪರಿಣಾಮ ಸರ್ಕಾರದ ಸೌಲಭ್ಯಗಳನ್ನು ಬಲಸಿಕೊಳ್ಳುವಲ್ಲಿ ಉಪಜಾತಿಗಳು ಹಿಂದೆ ಬಿದ್ದಿವೆ. ಆರ್ಥಿಕವಾಗಿ, ಸಾಮಾಜಿಕವಾಗಿಯೂ ತೀರಾ ಹಿಂದುಳಿದಿವೆ. ಈ ಜಾತಿಗಳ ಜನರನ್ನು ಮುನ್ನೆಲೆಗೆ ತರಲು ಒಳಮೀಸಲಾತಿ ಅಗತ್ಯವಿದೆ’ ಎಂದು ಒತ್ತಾಯಿಸಿದರು.</p>.<p>ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಗೋಪಾಲ ನಡಕಿನಮನಿ, ಸಂತೋಷ ಕಟ್ಟಿಮನಿ, ನಾಗರಾಜ ದೊಡ್ಡಮನಿ, ಹನುಮಂತ ಮೇತ್ರಿ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಪರಿಶಿಷ್ಟ ಸಮುದಾಯಗಳಲ್ಲಿರುವ ಉಪ ಪಂಗಡಗಳಿಗೆ ಒಳಮೀಸಲಾತಿಗೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.</p>.<p>ಮಿತ್ರ ಸಮಾಜ ಮೈದಾನದಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು. ಪರಿಶಿಷ್ಟ ಸಮುದಾಯಗಳಲ್ಲಿನ 106ಕ್ಕೂ ಹೆಚ್ಚು ಉಪ ಪಂಗಡಗಳಿಗೆ ಸರ್ಕಾರ ಸೂಕ್ತ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.</p>.<p>‘ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರಿಂಕೋರ್ಟ್ ಈಗಾಗಲೆ ಆದೇಶಿಸಿದೆ. ಈವರೆಗೂ ರಾಜ್ಯದಲ್ಲಿ ಆದೇಶ ಪಾಲನೆ ಆಗಿಲ್ಲ. ಇದರಿಂದ ಹಲವು ಉಪ ಪಂಗಡಗಳು ಮೀಸಲಾತಿ ಸೌಲಭ್ಯದಿಂದ ವಂಚಿತವಾಗುವಂತಾಗಿದೆ. ಕೇವಲ ಬಲಾಢ್ಯ ಗುಂಪುಗಳಿಗೆ ಮಾತ್ರ ಮೀಸಲಾತಿ ಸೌಲಭ್ಯ ದೊರೆಯುತ್ತಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.</p>.<p>‘ಒಳಮೀಸಲಾತಿ ಸೌಲಭ್ಯ ಇಲ್ಲದ ಪರಿಣಾಮ ಸರ್ಕಾರದ ಸೌಲಭ್ಯಗಳನ್ನು ಬಲಸಿಕೊಳ್ಳುವಲ್ಲಿ ಉಪಜಾತಿಗಳು ಹಿಂದೆ ಬಿದ್ದಿವೆ. ಆರ್ಥಿಕವಾಗಿ, ಸಾಮಾಜಿಕವಾಗಿಯೂ ತೀರಾ ಹಿಂದುಳಿದಿವೆ. ಈ ಜಾತಿಗಳ ಜನರನ್ನು ಮುನ್ನೆಲೆಗೆ ತರಲು ಒಳಮೀಸಲಾತಿ ಅಗತ್ಯವಿದೆ’ ಎಂದು ಒತ್ತಾಯಿಸಿದರು.</p>.<p>ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಗೋಪಾಲ ನಡಕಿನಮನಿ, ಸಂತೋಷ ಕಟ್ಟಿಮನಿ, ನಾಗರಾಜ ದೊಡ್ಡಮನಿ, ಹನುಮಂತ ಮೇತ್ರಿ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>