ಸಾರ್ವಜನಿಕರು ಪ್ರತಿಭಟನೆ ನಡೆಸುವ ವೇಳೆ ಆಸ್ತಿ–ಪಾಸ್ತಿಗೆ ಧಕ್ಕೆಯಾಗದಂತೆ ವರ್ತಿಸಬೇಕು. ಸರ್ಕಾರ ಕಾನೂನು ಸುವ್ಯವಸ್ಥೆಗೆ ಒತ್ತು ನೀಡಬೇಕು. ಗೋಲಿಬಾರ್ನಲ್ಲಿ ಮೃತಪಟ್ಟ ಅಮಾಯಕರ ಕುಟುಂಬಕ್ಕೆ ಪರಿಹಾರ ನೀಡಬೇಕು. ಬೆಂಗಳೂರಿನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಇತಿಹಾಸ ತಜ್ಞ ರಾಮಚಂದ್ರ ಗುಹಾ, ಯೋಗೇಂದ್ರ ಯಾದವ್ ಅವರನ್ನು ಬಂಧಿಸಿರುವ ಕ್ರಮ ಖಂಡನೀಯ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.