<p>ಯಲ್ಲಾಪುರ: ವಿವಿಧ ಇಲಾಖೆಗಳ ಮುಖ್ಯಸ್ಥರು ತಮ್ಮ ಇಲಾಖೆಯಲ್ಲಿ ಆಗಬೇಕಾದ ಕಾಮಗಾರಿಗಳ ಕುರಿತು ಸ್ಥಳೀಯ ಆಡಳಿತಕ್ಕೆ ಬೇಡಿಕೆಯ ಪ್ರಸ್ತಾವ ಸಲ್ಲಿಸುವಂತೆ ತಾಲ್ಲೂಕು ಯೋಜನಾಧಿಕಾರಿ ರಾಘವ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆ ಮತ್ತು ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ರಾಜೇಶ ಧನವಾಡಕರ ಮಾತನಾಡಿ, ಪಧವೀಧರರ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರ ನೋಂದಣಿ ನಡೆದಿದ್ದು ಎಲ್ಲ ಅರ್ಹ ಮತದಾರರು ನೋಂದಣಿ ಮಾಡಿಕೊಳ್ಳಬೇಕು’ ಎಂದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ನರೇಂದ್ರ ಪವಾರ ಮಾತನಾಡಿ, ‘ತಾಲ್ಲೂಕಿನಲ್ಲಿ ಎರಡು ಇಲಿ ಜ್ವರ ಪ್ರಕರಣಗಳು ವರದಿಯಾಗಿದ್ದು ಈ ಕುರಿತು ಜಾಗೃತಿ ನೀಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಬಿಇಒ ರೇಖಾ ನಾಯಕ ಮಾತನಾಡಿ, ‘ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ಈಗಾಗಲೇ ಪೂರೈಸಲಾಗಿದೆ. ಆದರೆ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಅಗತ್ಯ ಶೂ ಪೂರೈಕೆ ಆಗಿಲ್ಲ. ಅನೇಕ ಕಡೆ ಅತಿಥಿ ಶಿಕ್ಷಕರ ಬೇಡಿಕೆ ಇದೆ’ ಎಂದರು.</p>.<p>ತೋಟಗಾರಿಕಾ ಅಧಿಕಾರಿ ಸತೀಶ ಹೆಗಡೆ ಮಾತನಾಡಿ,ʻಅಡಿಕೆ ಬೆಳೆಗೆ ಎಲೆಚುಕ್ಕಿ ರೋಗ ಕಂಡುಬರುತ್ತಿದೆ. ಹೊಸದಾಗಿ ಗದ್ದೆಯನ್ನು ತೋಟವನ್ನಾಗಿ ಪರಿವರ್ತಿಸುವವರು ತಾಳೆ ಬೆಳೆ ಬೆಳೆದಲ್ಲಿ ಸಹಾಯಧನ ದೊರೆಯುತ್ತದೆ’ ಎಂದು ತಿಳಿಸಿದರು.</p>.<p>ಸಿಡಿಪಿಒ ಶ್ರೀದೇವಿ ಪಾಟೀಲ ಮಾತನಾಡಿ, ‘ತಾಲ್ಲೂಕಿನಲ್ಲಿ ಒಟ್ಟು 3 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ’ ಎಂದರು.</p>.<p>ಸಹಾಯಕ ಕೃಷಿ ನಿರ್ದೇಶಕ ನಾಗರಾಜ ನಾಯ್ಕ ಮಾತನಾಡಿ, ʻಅಸಮಪ೯ಕ ಮಳೆಯಿಂದಾಗಿ ಈ ಸಲ ಮುಸುಕಿನ ಜೋಳಕ್ಕೆ ಹಾನಿಯಾಗಿದೆ. ಇಳುವರಿ ಕಡಿಮೆ ಆಗಲಿದೆ. ಕಿರವತ್ತಿ, ಮದನೂರು ಭಾಗದಲ್ಲಿ ಬೆಳೆಗೆ ಆನೆ, ಹಂದಿ ಮೊದಲಾದ ಕಾಡು ಪ್ರಾಣಿಗಳ ಹಾವಳಿ ಇದೆʼ ಎಂದು ಹೇಳಿದರು.</p>.<p>ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದಾಕ್ಷಾಯಣಿ ನಾಯಕ ಮಾತನಾಡಿ, ‘ಹಾಸ್ಟೇಲ್ ಪ್ರವೇಶ ಕೋರಿ ಹೆಚ್ಚಿನ ಅರ್ಜಿ ಬಂದಿದೆ. ಆದರೆ ಬೇಡಿಕೆ ತಕ್ಕಷ್ಟು ಸ್ಥಳಾವಕಾಶ ಇಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲ್ಲಾಪುರ: ವಿವಿಧ ಇಲಾಖೆಗಳ ಮುಖ್ಯಸ್ಥರು ತಮ್ಮ ಇಲಾಖೆಯಲ್ಲಿ ಆಗಬೇಕಾದ ಕಾಮಗಾರಿಗಳ ಕುರಿತು ಸ್ಥಳೀಯ ಆಡಳಿತಕ್ಕೆ ಬೇಡಿಕೆಯ ಪ್ರಸ್ತಾವ ಸಲ್ಲಿಸುವಂತೆ ತಾಲ್ಲೂಕು ಯೋಜನಾಧಿಕಾರಿ ರಾಘವ ಅಧಿಕಾರಿಗಳಿಗೆ ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆ ಮತ್ತು ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ರಾಜೇಶ ಧನವಾಡಕರ ಮಾತನಾಡಿ, ಪಧವೀಧರರ ಚುನಾವಣೆಯ ಹಿನ್ನೆಲೆಯಲ್ಲಿ ಮತದಾರರ ನೋಂದಣಿ ನಡೆದಿದ್ದು ಎಲ್ಲ ಅರ್ಹ ಮತದಾರರು ನೋಂದಣಿ ಮಾಡಿಕೊಳ್ಳಬೇಕು’ ಎಂದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ನರೇಂದ್ರ ಪವಾರ ಮಾತನಾಡಿ, ‘ತಾಲ್ಲೂಕಿನಲ್ಲಿ ಎರಡು ಇಲಿ ಜ್ವರ ಪ್ರಕರಣಗಳು ವರದಿಯಾಗಿದ್ದು ಈ ಕುರಿತು ಜಾಗೃತಿ ನೀಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಬಿಇಒ ರೇಖಾ ನಾಯಕ ಮಾತನಾಡಿ, ‘ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ಈಗಾಗಲೇ ಪೂರೈಸಲಾಗಿದೆ. ಆದರೆ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಅಗತ್ಯ ಶೂ ಪೂರೈಕೆ ಆಗಿಲ್ಲ. ಅನೇಕ ಕಡೆ ಅತಿಥಿ ಶಿಕ್ಷಕರ ಬೇಡಿಕೆ ಇದೆ’ ಎಂದರು.</p>.<p>ತೋಟಗಾರಿಕಾ ಅಧಿಕಾರಿ ಸತೀಶ ಹೆಗಡೆ ಮಾತನಾಡಿ,ʻಅಡಿಕೆ ಬೆಳೆಗೆ ಎಲೆಚುಕ್ಕಿ ರೋಗ ಕಂಡುಬರುತ್ತಿದೆ. ಹೊಸದಾಗಿ ಗದ್ದೆಯನ್ನು ತೋಟವನ್ನಾಗಿ ಪರಿವರ್ತಿಸುವವರು ತಾಳೆ ಬೆಳೆ ಬೆಳೆದಲ್ಲಿ ಸಹಾಯಧನ ದೊರೆಯುತ್ತದೆ’ ಎಂದು ತಿಳಿಸಿದರು.</p>.<p>ಸಿಡಿಪಿಒ ಶ್ರೀದೇವಿ ಪಾಟೀಲ ಮಾತನಾಡಿ, ‘ತಾಲ್ಲೂಕಿನಲ್ಲಿ ಒಟ್ಟು 3 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ’ ಎಂದರು.</p>.<p>ಸಹಾಯಕ ಕೃಷಿ ನಿರ್ದೇಶಕ ನಾಗರಾಜ ನಾಯ್ಕ ಮಾತನಾಡಿ, ʻಅಸಮಪ೯ಕ ಮಳೆಯಿಂದಾಗಿ ಈ ಸಲ ಮುಸುಕಿನ ಜೋಳಕ್ಕೆ ಹಾನಿಯಾಗಿದೆ. ಇಳುವರಿ ಕಡಿಮೆ ಆಗಲಿದೆ. ಕಿರವತ್ತಿ, ಮದನೂರು ಭಾಗದಲ್ಲಿ ಬೆಳೆಗೆ ಆನೆ, ಹಂದಿ ಮೊದಲಾದ ಕಾಡು ಪ್ರಾಣಿಗಳ ಹಾವಳಿ ಇದೆʼ ಎಂದು ಹೇಳಿದರು.</p>.<p>ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ದಾಕ್ಷಾಯಣಿ ನಾಯಕ ಮಾತನಾಡಿ, ‘ಹಾಸ್ಟೇಲ್ ಪ್ರವೇಶ ಕೋರಿ ಹೆಚ್ಚಿನ ಅರ್ಜಿ ಬಂದಿದೆ. ಆದರೆ ಬೇಡಿಕೆ ತಕ್ಕಷ್ಟು ಸ್ಥಳಾವಕಾಶ ಇಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>