<p><strong>ಜೊಯಿಡಾ:</strong>ತಾಲ್ಲೂಕಿನ ಆಖೇತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೇವುಳ್ಳಿಯಲ್ಲಿ ನೀರುಗಂಟಿ ಸರಿಯಾಗಿ ನೀರು ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಗ್ರಾಮ ಪಂಚಾಯ್ತಿಗೆ ಗುರುವಾರ ಮುತ್ತಿಗೆ ಹಾಕಿದರು.</p>.<p>ಗ್ರಾಮಕ್ಕೆ ನೀರು ಪೂರೈಕೆ ಮಾಡುವ ಕೊಳವೆಬಾವಿಯಲ್ಲಿನೀರಿನ ಕೊರತೆಯಾಗಿಲ್ಲ. ಆದರೆ,ಗ್ರಾಮ ಪಂಚಾಯ್ತಿಯ ಸರಬರಾಜು ಹಾಗೂ ನಿರ್ವಹಣೆಯ ಸಮಸ್ಯೆಯಿಂದಾಗಿ ಹಲವು ದಿನಗಳಿಂದ ಪೂರೈಕೆಯಾಗಿಲ್ಲ. ಈ ಬಗ್ಗೆ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಹೇಳಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.</p>.<p>ದೇವುಳ್ಳಿಗ್ರಾಮದಲ್ಲಿ ಸುಮಾರು 50ಮನೆಗಳಿದ್ದು 500ರಷ್ಟು ಜನರು ವಾಸಿಸುತ್ತಿದ್ದಾರೆ. ಆಖೇತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪಾಯಸವಾಡಿ ಹಾಗೂ ಬರಲಕೊಟ ಗ್ರಾಮದಲ್ಲೂ ಜನರು ಕುಡಿಯುವ ನೀರಿಗೆ ಕಷ್ಟಪಡುವಂತಹ ಸ್ಥಿತಿಯಿದೆ ಎಂದು ಸ್ಥಳೀಯ ಮುಖಂಡ ಗುರಪ್ಪಾ ಹಣಬರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಈ ಸಂಬಂಧ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಯೋಗಿತಾ, ‘ಗ್ರಾಮಸ್ಥರಿಂದ ದೂರು ಬಂದಿದ್ದು, ಸ್ಥಳಕ್ಕೆ ಹೋಗಿ ಪರಿಶೀಲಿಸಲಾಗಿದೆ. ಪುನಃ ನೀರಿನ ಸಮಸ್ಯೆಉಂಟಾಗದಂತೆ ಎಚ್ಚರದಿಂದ ಕಾರ್ಯನಿರ್ವಹಿಸಲು ನೀರುಗಂಟಿಗೆ ತಿಳಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೊಯಿಡಾ:</strong>ತಾಲ್ಲೂಕಿನ ಆಖೇತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೇವುಳ್ಳಿಯಲ್ಲಿ ನೀರುಗಂಟಿ ಸರಿಯಾಗಿ ನೀರು ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಗ್ರಾಮ ಪಂಚಾಯ್ತಿಗೆ ಗುರುವಾರ ಮುತ್ತಿಗೆ ಹಾಕಿದರು.</p>.<p>ಗ್ರಾಮಕ್ಕೆ ನೀರು ಪೂರೈಕೆ ಮಾಡುವ ಕೊಳವೆಬಾವಿಯಲ್ಲಿನೀರಿನ ಕೊರತೆಯಾಗಿಲ್ಲ. ಆದರೆ,ಗ್ರಾಮ ಪಂಚಾಯ್ತಿಯ ಸರಬರಾಜು ಹಾಗೂ ನಿರ್ವಹಣೆಯ ಸಮಸ್ಯೆಯಿಂದಾಗಿ ಹಲವು ದಿನಗಳಿಂದ ಪೂರೈಕೆಯಾಗಿಲ್ಲ. ಈ ಬಗ್ಗೆ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಹೇಳಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.</p>.<p>ದೇವುಳ್ಳಿಗ್ರಾಮದಲ್ಲಿ ಸುಮಾರು 50ಮನೆಗಳಿದ್ದು 500ರಷ್ಟು ಜನರು ವಾಸಿಸುತ್ತಿದ್ದಾರೆ. ಆಖೇತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪಾಯಸವಾಡಿ ಹಾಗೂ ಬರಲಕೊಟ ಗ್ರಾಮದಲ್ಲೂ ಜನರು ಕುಡಿಯುವ ನೀರಿಗೆ ಕಷ್ಟಪಡುವಂತಹ ಸ್ಥಿತಿಯಿದೆ ಎಂದು ಸ್ಥಳೀಯ ಮುಖಂಡ ಗುರಪ್ಪಾ ಹಣಬರ ಅಸಮಾಧಾನ ವ್ಯಕ್ತಪಡಿಸಿದರು.</p>.<p>ಈ ಸಂಬಂಧ ಪ್ರತಿಕ್ರಿಯಿಸಿದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಯೋಗಿತಾ, ‘ಗ್ರಾಮಸ್ಥರಿಂದ ದೂರು ಬಂದಿದ್ದು, ಸ್ಥಳಕ್ಕೆ ಹೋಗಿ ಪರಿಶೀಲಿಸಲಾಗಿದೆ. ಪುನಃ ನೀರಿನ ಸಮಸ್ಯೆಉಂಟಾಗದಂತೆ ಎಚ್ಚರದಿಂದ ಕಾರ್ಯನಿರ್ವಹಿಸಲು ನೀರುಗಂಟಿಗೆ ತಿಳಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>