<p><strong>ಶಿರಸಿ</strong>: ‘ಗ್ರಾಮೀಣ ಭಾಗದ ಜನರಿಗೆ ಮಾರುಕಟ್ಟೆ ಸೌಲಭ್ಯ ಒದಗಿಸುವುದು ಹಾಗೂ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸುವುದು ಡಿಜಿಟಲ್ ಮಾರ್ಕೆಟಿಂಗ್ ಕಾರ್ಯಾಗಾರದ ಮುಖ್ಯ ಉದ್ದೇಶ’ ಎಂದು ಸಂಪನ್ಮೂಲ ವ್ಯಕ್ತಿ ಮಹಮದ್ ಅರ್ಷದ್ ಹೇಳಿದರು.</p>.<p>ಅವರು ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿ ಸಂಘದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಐದು ದಿನಗಳ ನಿರ್ವಹಣಾ ಅಭಿವೃದ್ಧಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.</p>.<p>‘ಯಾವುದೇ ಉತ್ಪನ್ನವನ್ನು ಮಾರುಕಟ್ಟೆಗೆ ಬಿಡುವ ಮೊದಲು ಬೇಕಾದ ಲೈಸೆನ್ಸ್ ಹಾಗೂ ವಿತರಣಾ ಕ್ರಮಗಳ ಬಗ್ಗೆ ಇಲ್ಲಿ ತರಬೇತಿ ನೀಡಲಾಗುತ್ತದೆ. ಹೊರಗೆ ಸಾವಿರಾರು ರೂಪಾಯಿ ವೆಚ್ಚದ ಈ ಕೋರ್ಸ್ ಅನ್ನು ಭಾರತ ಸರ್ಕಾರವು ಉಚಿತವಾಗಿ ನೀಡುತ್ತಿದ್ದು, ಪ್ರಮಾಣಪತ್ರವನ್ನೂ ವಿತರಿಸಲಿದೆ. ಇದನ್ನು ಬಳಸಿಕೊಂಡು ಪ್ರತಿಯೊಬ್ಬರೂ ಸ್ವಂತ ಉದ್ಯೋಗಿಗಳಾಗಬೇಕು’ ಎಂದು ಅವರು ಕರೆ ನೀಡಿದರು.</p>.<p>ಕದಂಬ ಮಾರ್ಕೆಟಿಂಗ್ನ ವಿಶ್ವೇಶ್ವರ ಭಟ್ ಮಾತನಾಡಿ, ‘ಸಮಾಜದ ಏಳಿಗೆಗಾಗಿ ಹಾಗೂ ಜಿಲ್ಲೆಯ ಉತ್ಪನ್ನಗಳು ದೇಶದಾದ್ಯಂತ ಗುರುತಿಸಿಕೊಳ್ಳಲಿ ಎಂಬ ಆಶಯದಿಂದ ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ಮನೆಯಲ್ಲೇ ಉತ್ಪನ್ನ ತಯಾರಿಸುವ ಮಹಿಳೆಯರಿಗೆ ಇದು ಬದುಕು ಕಟ್ಟಿಕೊಡಬಲ್ಲದು’ ಎಂದು ಅವರು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ನಿರ್ದೇಶಕ ನಾರಾಯಣ ಹೆಗಡೆ, ಎಸ್.ಆರ್.ಭಟ್, ಸುಜಯ್ ಭಟ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ‘ಗ್ರಾಮೀಣ ಭಾಗದ ಜನರಿಗೆ ಮಾರುಕಟ್ಟೆ ಸೌಲಭ್ಯ ಒದಗಿಸುವುದು ಹಾಗೂ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸುವುದು ಡಿಜಿಟಲ್ ಮಾರ್ಕೆಟಿಂಗ್ ಕಾರ್ಯಾಗಾರದ ಮುಖ್ಯ ಉದ್ದೇಶ’ ಎಂದು ಸಂಪನ್ಮೂಲ ವ್ಯಕ್ತಿ ಮಹಮದ್ ಅರ್ಷದ್ ಹೇಳಿದರು.</p>.<p>ಅವರು ಕದಂಬ ಮಾರ್ಕೆಟಿಂಗ್ ಸೌಹಾರ್ದ ಸಹಕಾರಿ ಸಂಘದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಐದು ದಿನಗಳ ನಿರ್ವಹಣಾ ಅಭಿವೃದ್ಧಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.</p>.<p>‘ಯಾವುದೇ ಉತ್ಪನ್ನವನ್ನು ಮಾರುಕಟ್ಟೆಗೆ ಬಿಡುವ ಮೊದಲು ಬೇಕಾದ ಲೈಸೆನ್ಸ್ ಹಾಗೂ ವಿತರಣಾ ಕ್ರಮಗಳ ಬಗ್ಗೆ ಇಲ್ಲಿ ತರಬೇತಿ ನೀಡಲಾಗುತ್ತದೆ. ಹೊರಗೆ ಸಾವಿರಾರು ರೂಪಾಯಿ ವೆಚ್ಚದ ಈ ಕೋರ್ಸ್ ಅನ್ನು ಭಾರತ ಸರ್ಕಾರವು ಉಚಿತವಾಗಿ ನೀಡುತ್ತಿದ್ದು, ಪ್ರಮಾಣಪತ್ರವನ್ನೂ ವಿತರಿಸಲಿದೆ. ಇದನ್ನು ಬಳಸಿಕೊಂಡು ಪ್ರತಿಯೊಬ್ಬರೂ ಸ್ವಂತ ಉದ್ಯೋಗಿಗಳಾಗಬೇಕು’ ಎಂದು ಅವರು ಕರೆ ನೀಡಿದರು.</p>.<p>ಕದಂಬ ಮಾರ್ಕೆಟಿಂಗ್ನ ವಿಶ್ವೇಶ್ವರ ಭಟ್ ಮಾತನಾಡಿ, ‘ಸಮಾಜದ ಏಳಿಗೆಗಾಗಿ ಹಾಗೂ ಜಿಲ್ಲೆಯ ಉತ್ಪನ್ನಗಳು ದೇಶದಾದ್ಯಂತ ಗುರುತಿಸಿಕೊಳ್ಳಲಿ ಎಂಬ ಆಶಯದಿಂದ ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ಮನೆಯಲ್ಲೇ ಉತ್ಪನ್ನ ತಯಾರಿಸುವ ಮಹಿಳೆಯರಿಗೆ ಇದು ಬದುಕು ಕಟ್ಟಿಕೊಡಬಲ್ಲದು’ ಎಂದು ಅವರು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ನಿರ್ದೇಶಕ ನಾರಾಯಣ ಹೆಗಡೆ, ಎಸ್.ಆರ್.ಭಟ್, ಸುಜಯ್ ಭಟ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>