<p><strong>ಸಿದ್ದಾಪುರ:</strong> ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದೆ. ಈ ಮೊದಲು ಭಾಗಶಃ ಹಾನಿಯಾದ ಮನೆಗೆ ₹4 ಸಾವಿರ ನೀಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ₹50 ಸಾವಿರಕ್ಕೆ ಹೆಚ್ಚಿಸಿದ್ದಾರೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪರಿಹಾರ ಹಾಗೂ ಮಂಜೂರಾತಿ ಪತ್ರ ಹಸ್ತಾಂತರಿಸಿ ಅವರು ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ 1 ಮನೆ ಸಂಪೂರ್ಣ ಹಾನಿಯಾಗಿದ್ದು, 3 ಮನೆಗಳಿಗೆ ತೀವ್ರ ಹಾನಿಯಾಗಿದೆ. 23 ಭಾಗಶಃ ಹಾನಿಯಾಗಿದ್ದು, ಪೂರ್ತಿ ಹಾನಿಯಾದ ಮನೆಗೆ ₹5 ಲಕ್ಷ ಪರಿಹಾರ, ಭಾಗಶಃ ಹಾನಿಯಾದ ಮನೆಗೆ ₹50 ಸಾವಿರ ಪರಿಹಾರವನ್ನು ಸರ್ಕಾರ ಘೋಷಿಸಿದೆ. ಈ ಮೊದಲು ಪೂರ್ಣ ಹಾನಿಯಾದ ಮನೆಗೆ ₹1.20 ಲಕ್ಷ ನೀಡಲಾಗುತಿತ್ತು. ಅದನ್ನು₹5 ಲಕ್ಷಕ್ಕೆ ಸೀಮಿತಗೊಳಿಸಿ ತಹಶೀಲ್ದಾರ್ ಖಾತೆಗೆ ಜಮಾ ಮಾಡಲಾಗಿದ್ದು, ಹಂತ ಹಂತವಾಗಿ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದರು.</p>.<p>ಸರ್ಕಾರ ಸಂತ್ರಸ್ತರಿಗೆ ಧೈರ್ಯ ತುಂಬಿ ನೊಂದವರ ಪರ ಇದೆ ಎನ್ನುವುದು ಸಾಬೀತಾಗಿದೆ. ಮನೆ ಯಜಮಾನಿಗೆ ₹2 ಸಾವಿರ ನೀಡುವ ಯೋಜನೆಗೆ ಸಂಬಂಧಿಸಿ ಯಾರು ಕೂಡ ತಮ್ಮ ತಾಯಿಗೆ ನೋವಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ತಾಲ್ಲೂಕು ದಂಡಾಧಿಕಾರಿ ಎಂ.ಆರ್.ಕುಲಕರ್ಣಿ, ತಾಲ್ಲೂಕು ಪಂಚಾಯಿತಿ ಇಒ ದೇವರಾಜ ಹಿತ್ತಲಕೊಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಐ.ಜಿ.ಕೊಣ್ಣೂರ, ಸಿಪಿಐ ಕುಮಾರ ಕೆ. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದೆ. ಈ ಮೊದಲು ಭಾಗಶಃ ಹಾನಿಯಾದ ಮನೆಗೆ ₹4 ಸಾವಿರ ನೀಡಲಾಗುತ್ತಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ₹50 ಸಾವಿರಕ್ಕೆ ಹೆಚ್ಚಿಸಿದ್ದಾರೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪರಿಹಾರ ಹಾಗೂ ಮಂಜೂರಾತಿ ಪತ್ರ ಹಸ್ತಾಂತರಿಸಿ ಅವರು ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ 1 ಮನೆ ಸಂಪೂರ್ಣ ಹಾನಿಯಾಗಿದ್ದು, 3 ಮನೆಗಳಿಗೆ ತೀವ್ರ ಹಾನಿಯಾಗಿದೆ. 23 ಭಾಗಶಃ ಹಾನಿಯಾಗಿದ್ದು, ಪೂರ್ತಿ ಹಾನಿಯಾದ ಮನೆಗೆ ₹5 ಲಕ್ಷ ಪರಿಹಾರ, ಭಾಗಶಃ ಹಾನಿಯಾದ ಮನೆಗೆ ₹50 ಸಾವಿರ ಪರಿಹಾರವನ್ನು ಸರ್ಕಾರ ಘೋಷಿಸಿದೆ. ಈ ಮೊದಲು ಪೂರ್ಣ ಹಾನಿಯಾದ ಮನೆಗೆ ₹1.20 ಲಕ್ಷ ನೀಡಲಾಗುತಿತ್ತು. ಅದನ್ನು₹5 ಲಕ್ಷಕ್ಕೆ ಸೀಮಿತಗೊಳಿಸಿ ತಹಶೀಲ್ದಾರ್ ಖಾತೆಗೆ ಜಮಾ ಮಾಡಲಾಗಿದ್ದು, ಹಂತ ಹಂತವಾಗಿ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದರು.</p>.<p>ಸರ್ಕಾರ ಸಂತ್ರಸ್ತರಿಗೆ ಧೈರ್ಯ ತುಂಬಿ ನೊಂದವರ ಪರ ಇದೆ ಎನ್ನುವುದು ಸಾಬೀತಾಗಿದೆ. ಮನೆ ಯಜಮಾನಿಗೆ ₹2 ಸಾವಿರ ನೀಡುವ ಯೋಜನೆಗೆ ಸಂಬಂಧಿಸಿ ಯಾರು ಕೂಡ ತಮ್ಮ ತಾಯಿಗೆ ನೋವಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ತಾಲ್ಲೂಕು ದಂಡಾಧಿಕಾರಿ ಎಂ.ಆರ್.ಕುಲಕರ್ಣಿ, ತಾಲ್ಲೂಕು ಪಂಚಾಯಿತಿ ಇಒ ದೇವರಾಜ ಹಿತ್ತಲಕೊಪ್ಪ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಐ.ಜಿ.ಕೊಣ್ಣೂರ, ಸಿಪಿಐ ಕುಮಾರ ಕೆ. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>