ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಟೊ ಚಾಲಕರಿಗೆ ಸಮವಸ್ತ್ರ ವಿತರಣೆ

Published 1 ಅಕ್ಟೋಬರ್ 2023, 14:42 IST
Last Updated 1 ಅಕ್ಟೋಬರ್ 2023, 14:42 IST
ಅಕ್ಷರ ಗಾತ್ರ

ಕುಮಟಾ: ಶಿರಸಿಯ ಅನಂತಮೂರ್ತಿ ಹೆಗಡೆ ಚಾರಿಟೆಬಲ್ ಟ್ರಸ್ಟ್‌ನಿಂದ ಭಾನುವಾರ ಕುಮಟಾ ಹಾಗೂ ಹೊನ್ನಾವರ ತಾಲ್ಲೂಕು ಪ್ಯಾಸೆಂಜರ್ ಹಾಗೂ ಗೂಡ್ಸ್ ರಿಕ್ಷಾ ಚಾಲಕರಿಗೆ ಉಚಿತ ಸಮವಸ್ತ್ರ ನೀಡಿ  ಗೌರವಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ದಿನಕರ ಶೆಟ್ಟಿ, ‘ನಿತ್ಯ ದುಡಿಮೆ ಮಾಡಿ ಜೀವನ ನಿಭಾಯಿಸುವ ರಿಕ್ಷಾ ಚಾಲಕರನ್ನು ಗುರುತಿಸಿ ಗೌರವಿಸಿ ನೆರವು ನೀಡುತ್ತಿರುವ ಶಿರಸಿಯ ಅನಂತಮೂರ್ತಿ ಹೆಗಡೆ ಟ್ರಸ್ಟ್ ಕಾರ್ಯ ಮಾದರಿ’  ಎಂದರು.

ಟ್ರಸ್ಟ್ ಮುಖ್ಯಸ್ಥ ಅನಂತಮೂರ್ತಿ ಹೆಗಡೆ, ‘ದುಡಿಮೆಯ ಒಂದು ಭಾಗವನ್ನು ಸಮಾಜದಲ್ಲಿ ಶ್ರಮ ಜೀವನ ನಡೆಸುವವರನ್ನು ಗುರುತಿಸಿ ಕೈಲಾದ ನೆರವು ನೀಡುತ್ತಿದ್ದೇನೆ. ಸಮಾಜದಲ್ಲಿ ಎಲ್ಲ ವರ್ಗದವರೂ ನೆಮ್ಮದಿಯ ಜೀವನ ಸಾಗಿಸುತ್ತಿದ್ದರೆ ಒಬ್ಬರಿಂದ ಇನ್ನೊಬ್ಬರಿಗೆ ಸಹಜವಾಗಿ ನೆರವು ಸಿಗುತ್ತದೆ’ ಎಂದರು.

ಮುಖ್ಯ ಅತಿಥಿಯಾಗಿದ್ದ ಕುಮಟಾ ಹಾಗೂ ಹೊನ್ನಾವರ ತಾಲ್ಲೂಕು ಆಟೊ ರಿಕ್ಷಾ ಸಂಘದ ಅಧ್ಯಕ್ಷರಾದ ಆರ್.ಜಿ.ನಾಯ್ಕ, ಶಿವರಾಜ ಮೇಸ್ತ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT