<p><strong>ಭಟ್ಕಳ:</strong> ಈದ್ ಉಲ್ ಫಿತ್ರ್ ಹಬ್ಬದಂದು ಫಿತ್ರ್ ಕಮಿಟಿಯಿಂದ ಭಟ್ಕಳ ತಾಲ್ಲೂಕು ಸೇರಿದಂತೆ ಕುಂದಾಪುರ ತಾಲ್ಲೂಕಿನ ಕೆಲ ಗ್ರಾಮದ 1,914 ಬಡ ಕುಟುಂಬಗಳಿಗೆ 957 ಕ್ವಿಂಟಲ್ ಅಕ್ಕಿ ವಿತರಣೆ ಮಾಡಲಾಗಿದೆ ಎಂದು ಫಿತ್ರ್ ಕಮಿಟಿಯ ಸಂಚಾಲಕ ಮೌಲಾನ ಮಹಮ್ಮದ್ ಇಲ್ಯಾಸ್ ನದ್ವಿ ಹೇಳಿದರು.</p>.<p>ಜಾಮಿಯಾಬಾದ್ನ ಅಬುಲ್ ಹಸನ್ ಅಲಿ ಅಕಾಡೆಮಿ ಸಭಾಂಗಣದಲ್ಲಿ ನಡೆದ ಫಿತ್ರ್ ಕಮಿಟಿಯ ಅವಲೋಕನ ಸಭೆಯಲ್ಲಿ ಶನಿವಾರ ಅವರು ಮಾತನಾಡಿದರು.</p>.<p>‘ಫಿತ್ರ್ ಅಂದರೆ ದಾನ. ಬಡವರು ಸಹ ಈದ್ ಹಬ್ಬದ ಖುಷಿಯಲ್ಲಿ ಪಾಲ್ಗೊಳ್ಳುವಂತಾಗಲು, ಕುಟುಂಬದ ಪ್ರತಿಯೊಬ್ಬ ಸದಸ್ಯನು ಕಡ್ಡಾಯವಾಗಿ ನೀಡಲೇಬೇಕಾದ ದಾನ (ಝಕಾತ್) ಆಗಿದೆ. ಇದನ್ನು ಸಾಮೂಹಿಕವಾಗಿ ಕ್ರೋಡೀಕರಣ ಮಾಡುವ ಕೆಲಸವನ್ನು ಭಟ್ಕಳದ ಫಿತ್ರ್ ಕಮಿಟಿ 24 ವರ್ಷಗಳಿಂದ ಮಾಡುತ್ತ ಬಂದಿದೆ’ ಎಂದರು.</p>.<p>ಜಾಮಿಯಾ ಇಸ್ಲಾಮಿಯಾ ಶಿಕ್ಷಣ ಸಂಸ್ಥೆ ಪ್ರಾಂಶುಪಾಲ ಮೌಲಾನ ಮಖ್ಬೂಲ್ ಅಹಮ್ಮದ್ ಕೋಬಟ್ಟೆ ಮಾತನಾಡಿ, ‘ಭೂಮಿಯಲ್ಲಿ ವಾಸಿಸುವ ಎಲ್ಲರಿಗೂ ಹಬ್ಬವನ್ನು ಸಂತೋಷ ಸಡಗರದಿಂದ ಆಚರಿಸುವಂತಾಗಲು ಇಸ್ಲಾಂ ಧರ್ಮ ಕಂಡುಕೊಂಡ ದಾರಿ ದಾನವಾಗಿದೆ. ಈ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಹಬ್ಬದ ಸಂತೋಷದಿಂದ ವಂಚಿತನಾಗಕೂಡದು ಎಂಬುದೇ ಆಶಯ’ ಎಂದರು.</p>.<p>ತಂಝೀಮ್ ಉಪಾಧ್ಯಕ್ಷ ಮೊಹಮ್ಮದ್ ಜಾಫರ್ ಮೊಹತೆಶಮ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೌಲಾನ ಅಬ್ದುಲ್ ಮತೀನ್ ಮುನಿರಿ, ಅಂಜುಮನ್ ಶಿಕ್ಷಣ ಸಂಸ್ಥೆಯ ಸಿದ್ದೀಕ್ ಮೀರಾ, ದುಬೈ ಜಮಾಅತ್ನ ಅಬ್ದುಸ್ಸಮಿ ಕೋಲಾ, ನೋಮಾನ್ ಮಾತನಾಡಿದರು.<br />ಹಿರಿಯರಾದ ಅಬ್ದುಲ್ ಹಮೀದ್ ಸಾಬ್ ಉಪಸ್ಥಿತರಿದ್ದರು. ಎಸ್. ಎಂ ಸೈಯ್ಯದ್ ಪರ್ವೇಜ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ:</strong> ಈದ್ ಉಲ್ ಫಿತ್ರ್ ಹಬ್ಬದಂದು ಫಿತ್ರ್ ಕಮಿಟಿಯಿಂದ ಭಟ್ಕಳ ತಾಲ್ಲೂಕು ಸೇರಿದಂತೆ ಕುಂದಾಪುರ ತಾಲ್ಲೂಕಿನ ಕೆಲ ಗ್ರಾಮದ 1,914 ಬಡ ಕುಟುಂಬಗಳಿಗೆ 957 ಕ್ವಿಂಟಲ್ ಅಕ್ಕಿ ವಿತರಣೆ ಮಾಡಲಾಗಿದೆ ಎಂದು ಫಿತ್ರ್ ಕಮಿಟಿಯ ಸಂಚಾಲಕ ಮೌಲಾನ ಮಹಮ್ಮದ್ ಇಲ್ಯಾಸ್ ನದ್ವಿ ಹೇಳಿದರು.</p>.<p>ಜಾಮಿಯಾಬಾದ್ನ ಅಬುಲ್ ಹಸನ್ ಅಲಿ ಅಕಾಡೆಮಿ ಸಭಾಂಗಣದಲ್ಲಿ ನಡೆದ ಫಿತ್ರ್ ಕಮಿಟಿಯ ಅವಲೋಕನ ಸಭೆಯಲ್ಲಿ ಶನಿವಾರ ಅವರು ಮಾತನಾಡಿದರು.</p>.<p>‘ಫಿತ್ರ್ ಅಂದರೆ ದಾನ. ಬಡವರು ಸಹ ಈದ್ ಹಬ್ಬದ ಖುಷಿಯಲ್ಲಿ ಪಾಲ್ಗೊಳ್ಳುವಂತಾಗಲು, ಕುಟುಂಬದ ಪ್ರತಿಯೊಬ್ಬ ಸದಸ್ಯನು ಕಡ್ಡಾಯವಾಗಿ ನೀಡಲೇಬೇಕಾದ ದಾನ (ಝಕಾತ್) ಆಗಿದೆ. ಇದನ್ನು ಸಾಮೂಹಿಕವಾಗಿ ಕ್ರೋಡೀಕರಣ ಮಾಡುವ ಕೆಲಸವನ್ನು ಭಟ್ಕಳದ ಫಿತ್ರ್ ಕಮಿಟಿ 24 ವರ್ಷಗಳಿಂದ ಮಾಡುತ್ತ ಬಂದಿದೆ’ ಎಂದರು.</p>.<p>ಜಾಮಿಯಾ ಇಸ್ಲಾಮಿಯಾ ಶಿಕ್ಷಣ ಸಂಸ್ಥೆ ಪ್ರಾಂಶುಪಾಲ ಮೌಲಾನ ಮಖ್ಬೂಲ್ ಅಹಮ್ಮದ್ ಕೋಬಟ್ಟೆ ಮಾತನಾಡಿ, ‘ಭೂಮಿಯಲ್ಲಿ ವಾಸಿಸುವ ಎಲ್ಲರಿಗೂ ಹಬ್ಬವನ್ನು ಸಂತೋಷ ಸಡಗರದಿಂದ ಆಚರಿಸುವಂತಾಗಲು ಇಸ್ಲಾಂ ಧರ್ಮ ಕಂಡುಕೊಂಡ ದಾರಿ ದಾನವಾಗಿದೆ. ಈ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಹಬ್ಬದ ಸಂತೋಷದಿಂದ ವಂಚಿತನಾಗಕೂಡದು ಎಂಬುದೇ ಆಶಯ’ ಎಂದರು.</p>.<p>ತಂಝೀಮ್ ಉಪಾಧ್ಯಕ್ಷ ಮೊಹಮ್ಮದ್ ಜಾಫರ್ ಮೊಹತೆಶಮ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೌಲಾನ ಅಬ್ದುಲ್ ಮತೀನ್ ಮುನಿರಿ, ಅಂಜುಮನ್ ಶಿಕ್ಷಣ ಸಂಸ್ಥೆಯ ಸಿದ್ದೀಕ್ ಮೀರಾ, ದುಬೈ ಜಮಾಅತ್ನ ಅಬ್ದುಸ್ಸಮಿ ಕೋಲಾ, ನೋಮಾನ್ ಮಾತನಾಡಿದರು.<br />ಹಿರಿಯರಾದ ಅಬ್ದುಲ್ ಹಮೀದ್ ಸಾಬ್ ಉಪಸ್ಥಿತರಿದ್ದರು. ಎಸ್. ಎಂ ಸೈಯ್ಯದ್ ಪರ್ವೇಜ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>