<p><strong>ಯಲ್ಲಾಪುರ</strong>: ಮದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹ 3.90 ಕೋಟಿ ವೆಚ್ಚದಲ್ಲಿ ಉತ್ತಮ ಸೇತುವೆ, ಕಾಂಕ್ರೀಟ್ ರಸ್ತೆ, ಸೇರಿದಂತೆ ಎಲ್ಲ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ. ಹೀಗಿರುವಾಗ ಕೇಲವ ಭಾಷಣಕ್ಕೆ ಮರುಳಾಗಿ ಕೆಲಸ ಮಾಡಿಕೊಟ್ಟವರನ್ನು ಮರೆಯಬಾರದು ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ತಾಲ್ಲೂಕಿನ ಮದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡೊಳ್ಳಿಯಲ್ಲಿ ಸೋಮವಾರ ನೂತನವಾಗಿ ಆರಂಭಿಸಲಾದ ಕರಡೊಳ್ಳಿ-ಯಲ್ಲಾಪುರ ಬಸ್ಸಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕರಡೊಳ್ಳಿ ಸುತ್ತಮುತ್ತಲ ಪ್ರದೇಶದಿಂದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಿದ್ದು ಅವರ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದು ಹುಣಶೆಟ್ಟಿಕೊಪ್ಪದ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ ಎಂದರು.</p>.<p>ಸರ್ಕಾರ ಮಹಿಳೆಯರಿಗೆ ಎಲ್ಲ ರೀತಿಯ ಉಚಿತ ಭಾಗ್ಯ ನೀಡಿ ಅವರ ಭವಿಷ್ಯಕ್ಕೆ ಅನುಕೂಲ ಕಲ್ಪಿಸಿರುವುದನ್ನು ಕೂಡ ಜನ ನೆನಪಿಟ್ಟುಕೊಳ್ಳಬೇಕು ಎಂದರು.</p>.<p>ನಂತರ ಬಸ್ ಚಾಲನೆ ನೀಡಿ, ಕರಡೊಳ್ಳಿಯಿಂದ ಯಲ್ಲಾಪುರದವರೆಗೂ ಬಸ್ಸಿನಲ್ಲೇ ಪ್ರಯಾಣ ಬೆಳೆಸಿದರು. ಪ್ರಮುಖರಾದ ವಿಜಯಮಿರಾಶಿ, ವಿನಾಯಕ ತಿನೇಕರ, ಸಾಂದು ಪಟಕಾರೆ, ಡಿಪೋ ವ್ಯವಸ್ಥಾಪಕ ಸಂತೋಷ ವೆರ್ಣೇಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ</strong>: ಮದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹ 3.90 ಕೋಟಿ ವೆಚ್ಚದಲ್ಲಿ ಉತ್ತಮ ಸೇತುವೆ, ಕಾಂಕ್ರೀಟ್ ರಸ್ತೆ, ಸೇರಿದಂತೆ ಎಲ್ಲ ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ. ಹೀಗಿರುವಾಗ ಕೇಲವ ಭಾಷಣಕ್ಕೆ ಮರುಳಾಗಿ ಕೆಲಸ ಮಾಡಿಕೊಟ್ಟವರನ್ನು ಮರೆಯಬಾರದು ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ತಾಲ್ಲೂಕಿನ ಮದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡೊಳ್ಳಿಯಲ್ಲಿ ಸೋಮವಾರ ನೂತನವಾಗಿ ಆರಂಭಿಸಲಾದ ಕರಡೊಳ್ಳಿ-ಯಲ್ಲಾಪುರ ಬಸ್ಸಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಕರಡೊಳ್ಳಿ ಸುತ್ತಮುತ್ತಲ ಪ್ರದೇಶದಿಂದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಿದ್ದು ಅವರ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದು ಹುಣಶೆಟ್ಟಿಕೊಪ್ಪದ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ ಎಂದರು.</p>.<p>ಸರ್ಕಾರ ಮಹಿಳೆಯರಿಗೆ ಎಲ್ಲ ರೀತಿಯ ಉಚಿತ ಭಾಗ್ಯ ನೀಡಿ ಅವರ ಭವಿಷ್ಯಕ್ಕೆ ಅನುಕೂಲ ಕಲ್ಪಿಸಿರುವುದನ್ನು ಕೂಡ ಜನ ನೆನಪಿಟ್ಟುಕೊಳ್ಳಬೇಕು ಎಂದರು.</p>.<p>ನಂತರ ಬಸ್ ಚಾಲನೆ ನೀಡಿ, ಕರಡೊಳ್ಳಿಯಿಂದ ಯಲ್ಲಾಪುರದವರೆಗೂ ಬಸ್ಸಿನಲ್ಲೇ ಪ್ರಯಾಣ ಬೆಳೆಸಿದರು. ಪ್ರಮುಖರಾದ ವಿಜಯಮಿರಾಶಿ, ವಿನಾಯಕ ತಿನೇಕರ, ಸಾಂದು ಪಟಕಾರೆ, ಡಿಪೋ ವ್ಯವಸ್ಥಾಪಕ ಸಂತೋಷ ವೆರ್ಣೇಕರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>