<p><strong>ಶಿರಸಿ: ‘</strong>ಗಾಂಧೀಜಿ ಕ್ವಿಟ್ ಇಂಡಿಯಾ ಚಳುವಳಿಗೆ ಕರೆ ಕೊಟ್ಟಾಗ ಅದನ್ನು ಬಹಿಷ್ಕರಿಸಿದ್ದ ವೀರ ಸಾವರ್ಕರ್ ಅವರನ್ನು ಆರಾಧಿಸುವ ಬಿಜೆಪಿಗೆ ಸ್ವಾತಂತ್ರ್ಯೋತ್ಸವದ ಅಮೃತ ವರ್ಷ ಆಚರಿಸುವ ನೈತಿಕತೆ ಇಲ್ಲ’ ಎಂದು ರಾಜೀವ ಗಾಂಧಿ ಪಂಚಾಯತರಾಜ್ ರಾಷ್ಟ್ರೀಯ ಸಮಿತಿ ಸದಸ್ಯ ಡಿ.ಆರ್.ಪಾಟೀಲ ಆರೋಪಿಸಿದರು.<br /><br />ಇಲ್ಲಿನ ಅಂಬೇಡ್ಕರ ಭವನದಲ್ಲಿ ಬುಧವಾರ ಸಂಘಟನೆಯ ಜಿಲ್ಲಾಮಟ್ಟದ ಸಮಾವೇಶದಲ್ಲಿ ಅವರು ಮಾತನಾಡದರು.<br /><br />‘ಬ್ರಿಟೀಷರ ಜತೆ ಕೈಜೋಡಿಸುತ್ತೇನೆ. ಮುಂದೆಂದೂ ಚಳುವಳಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ವೀರ ಸಾವರ್ಕರ್ ಪತ್ರ ಬರೆದುಕೊಟ್ಟ ಮೇಲೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಇದು ನೈಜ ಇತಿಹಾಸ. ಆದರೆ ಬಿಜೆಪಿಗರು ಸುಳ್ಳು ಇತಿಹಾಸ ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.<br /><br />‘ಸ್ವಾತಂತ್ರ್ಯೋತ್ಸವದ ಅಮೃತ ವರ್ಷ ಆಚರಿಸುವ ಹಕ್ಕು ಕಾಂಗ್ರೆಸ್ಸಿಗಿದೆ. ಜೆಡಿಎಸ್ ಗೂ ಇರಬಹುದು. ಆದರೆ ನೈತಿಕವಾಗಿ ಬಿಜೆಪಿ ಹಕ್ಕು ಕಳೆದುಕೊಂಡಿದೆ’ ಎಂದರು.<br /><br />‘ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಇತಿಹಾಸ ಬಿಂಬಿಸುವ ಬಿಜೆಪಿಗರ ಮನಸ್ಥಿತಿಯನ್ನು ಜನರಿಗೆ ಅರ್ಥ ಮಾಡಿಸಬೇಕಿದೆ. ಇಂದಿರಾಗಾಂಧಿ ಯುಗದ ಕಾಂಗ್ರೆಸ್ ಮತ್ತೆ ಆರಂಭವಾಗಬೇಕಿದೆ’ ಎಂದರು.<br /><br />ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ, ವಿಧಾನ ಪರಿಷತ ಸದಸ್ಯ ವಿಜಯ ಸಿಂಗ್, ವಿನುತಾ ಓರಾ, ವಿ.ವೈ.ಘೋರ್ಪಡೆ, ಭೀಮಣ್ಣ ನಾಯ್ಕ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ: ‘</strong>ಗಾಂಧೀಜಿ ಕ್ವಿಟ್ ಇಂಡಿಯಾ ಚಳುವಳಿಗೆ ಕರೆ ಕೊಟ್ಟಾಗ ಅದನ್ನು ಬಹಿಷ್ಕರಿಸಿದ್ದ ವೀರ ಸಾವರ್ಕರ್ ಅವರನ್ನು ಆರಾಧಿಸುವ ಬಿಜೆಪಿಗೆ ಸ್ವಾತಂತ್ರ್ಯೋತ್ಸವದ ಅಮೃತ ವರ್ಷ ಆಚರಿಸುವ ನೈತಿಕತೆ ಇಲ್ಲ’ ಎಂದು ರಾಜೀವ ಗಾಂಧಿ ಪಂಚಾಯತರಾಜ್ ರಾಷ್ಟ್ರೀಯ ಸಮಿತಿ ಸದಸ್ಯ ಡಿ.ಆರ್.ಪಾಟೀಲ ಆರೋಪಿಸಿದರು.<br /><br />ಇಲ್ಲಿನ ಅಂಬೇಡ್ಕರ ಭವನದಲ್ಲಿ ಬುಧವಾರ ಸಂಘಟನೆಯ ಜಿಲ್ಲಾಮಟ್ಟದ ಸಮಾವೇಶದಲ್ಲಿ ಅವರು ಮಾತನಾಡದರು.<br /><br />‘ಬ್ರಿಟೀಷರ ಜತೆ ಕೈಜೋಡಿಸುತ್ತೇನೆ. ಮುಂದೆಂದೂ ಚಳುವಳಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ವೀರ ಸಾವರ್ಕರ್ ಪತ್ರ ಬರೆದುಕೊಟ್ಟ ಮೇಲೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಇದು ನೈಜ ಇತಿಹಾಸ. ಆದರೆ ಬಿಜೆಪಿಗರು ಸುಳ್ಳು ಇತಿಹಾಸ ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.<br /><br />‘ಸ್ವಾತಂತ್ರ್ಯೋತ್ಸವದ ಅಮೃತ ವರ್ಷ ಆಚರಿಸುವ ಹಕ್ಕು ಕಾಂಗ್ರೆಸ್ಸಿಗಿದೆ. ಜೆಡಿಎಸ್ ಗೂ ಇರಬಹುದು. ಆದರೆ ನೈತಿಕವಾಗಿ ಬಿಜೆಪಿ ಹಕ್ಕು ಕಳೆದುಕೊಂಡಿದೆ’ ಎಂದರು.<br /><br />‘ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಇತಿಹಾಸ ಬಿಂಬಿಸುವ ಬಿಜೆಪಿಗರ ಮನಸ್ಥಿತಿಯನ್ನು ಜನರಿಗೆ ಅರ್ಥ ಮಾಡಿಸಬೇಕಿದೆ. ಇಂದಿರಾಗಾಂಧಿ ಯುಗದ ಕಾಂಗ್ರೆಸ್ ಮತ್ತೆ ಆರಂಭವಾಗಬೇಕಿದೆ’ ಎಂದರು.<br /><br />ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ, ವಿಧಾನ ಪರಿಷತ ಸದಸ್ಯ ವಿಜಯ ಸಿಂಗ್, ವಿನುತಾ ಓರಾ, ವಿ.ವೈ.ಘೋರ್ಪಡೆ, ಭೀಮಣ್ಣ ನಾಯ್ಕ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>