‘ತೀವ್ರ ಬರಗಾಲದ ಸ್ಥಿತಿಯಿಂದ ರೈತರು ಚಿಂತಾಕ್ರಾಂತರಾಗಿದ್ದು ಆರ್ಥಿಕ ನಷ್ಟ ಎದುರಿಸುತ್ತಿದ್ದರೆ ಸರ್ಕಾರಗಳು ಪರಿಹಾರ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿವೆ. ಕೇಂದ್ರ ಸರ್ಕಾರದಿಂದ ನಯಾಪೈಸೆ ಪರಿಹಾರ ಬಂದಿಲ್ಲ. ರಾಜ್ಯ ಸರ್ಕಾರ ಪ್ರತಿ ರೈತರಿಗೆ ₹2 ಸಾವಿರ ಪರಿಹಾರ ಮೊತ್ತ ನೀಡಿ ರೈತರ ಜೀವನವನ್ನೇ ಲೇವಡಿ ಮಾಡಿದೆ. ಬೆಳೆನಷ್ಟಕ್ಕೆ ಸೂಕ್ತ ಪರಿಹಾರ ನೀಡಲಾಗದ ದಿವಾಳಿ ಸ್ಥಿತಿಯಲ್ಲಿ ಸರ್ಕಾರ ಇದೆ ಎಂದಾದರೆ ರೈತರೇ ಸರ್ಕರ ನೀಡಿರುವ ಪರಿಹಾರ ಮೊತ್ತಕ್ಕೆ ₹100 ಸೇರಿಸಿ ಮರಳಿಸುತ್ತೇವೆ. ಈ ಮೂಲಕ ರೈತ ವಿರೋಧಿ ನೀತಿ ಖಂಡಿಸುತ್ತೇವೆ’ ಎಂದು ರೈತ ಸಂಘ ಹಸಿರು ಸೇನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಕಿರವತ್ತಿ ಆಕ್ರೋಶ ವ್ಯಕ್ತಪಡಿಸಿದರು.