<p>ಅಂಕೋಲಾ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾಗಿದ್ದ ಸುಮಾರು ₹15 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ತಾಲ್ಲೂಕಿನ ಬೊಗ್ರಿಬೈಲಿನ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶುಕ್ರವಾರ ನಾಶ ಪಡಿಸಲಾಯಿತು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಉಪಸ್ಥಿತಿಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮಾದಕ ವಸ್ತುಗಳನ್ನು ಹಂತ ಹಂತವಾಗಿ ನಾಶಪಡಿಸಿದರು. ಘಟಕದಲ್ಲಿರುವ ವೈದ್ಯಕೀಯ ತ್ಯಾಜ್ಯ ವಿಲೇವಾರಿ ವಿಭಾಗದಲ್ಲಿರುವ ಉಪಕರಣದ ಸಹಾಯದಿಂದ ಸುಡಲಾಯಿತು.</p>.<p>‘ಜಿಲ್ಲೆಯಲ್ಲಿ 32 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ₹5.06 ಲಕ್ಷ ಮೌಲ್ಯದ 14.22 ಕೆ.ಜಿ ಗಾಂಜಾ, ಪ್ರಕರಣವೊಂದರಲ್ಲಿ ವಶಪಡಿಸಿಕೊಳ್ಳಲಾಗಿದ್ದ ₹10 ಲಕ್ಷ ಮೌಲ್ಯದ 1.5 ಕೆ.ಜಿ ಚರಸ್ ಮತ್ತು ಒಂದು ಪ್ರಕರಣದಲ್ಲಿ ವಶಪಡಿಸಿಕೊಳ್ಳಲಾಗಿದ್ದ ₹10 ಸಾವಿರ ಮೌಲ್ಯದ 48 ಗ್ರಾಂ ಗಾಂಜಾ ಗಿಡ ಸೇರಿದಂತೆ ಒಟ್ಟು 34 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ₹15.16 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಪರಿಸರಕ್ಕೆ ಹಾನಿಯಾಗದಂತೆ ನಾಶಪಡಿಸಲಾಯಿತು’ ಎಂದು ಎನ್.ವಿಷ್ಣುವರ್ಧನ ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಜಗದೀಶ, ಕಾರವಾರ ಡಿಎಸ್ಪಿಗಳಾದ ವೆಲೆಂಟೈನ್ ಡಿಸೋಜಾ, ಮಹೇಶ, ಕೆ.ಎಲ್.ಗಣೇಶ, ಪಿಐಗಳಾದ ಶ್ರೀಕಾಂತ ತೋಟಗಿ, ಎನ್.ರಂಗನಾಥ, ನೇಹಾಲಕಾಂತ, ರಾಮಚಂದ್ರ ನಾಯಕ, ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಂಕೋಲಾ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಪಡಿಸಿಕೊಳ್ಳಲಾಗಿದ್ದ ಸುಮಾರು ₹15 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ತಾಲ್ಲೂಕಿನ ಬೊಗ್ರಿಬೈಲಿನ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶುಕ್ರವಾರ ನಾಶ ಪಡಿಸಲಾಯಿತು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಉಪಸ್ಥಿತಿಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮಾದಕ ವಸ್ತುಗಳನ್ನು ಹಂತ ಹಂತವಾಗಿ ನಾಶಪಡಿಸಿದರು. ಘಟಕದಲ್ಲಿರುವ ವೈದ್ಯಕೀಯ ತ್ಯಾಜ್ಯ ವಿಲೇವಾರಿ ವಿಭಾಗದಲ್ಲಿರುವ ಉಪಕರಣದ ಸಹಾಯದಿಂದ ಸುಡಲಾಯಿತು.</p>.<p>‘ಜಿಲ್ಲೆಯಲ್ಲಿ 32 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ₹5.06 ಲಕ್ಷ ಮೌಲ್ಯದ 14.22 ಕೆ.ಜಿ ಗಾಂಜಾ, ಪ್ರಕರಣವೊಂದರಲ್ಲಿ ವಶಪಡಿಸಿಕೊಳ್ಳಲಾಗಿದ್ದ ₹10 ಲಕ್ಷ ಮೌಲ್ಯದ 1.5 ಕೆ.ಜಿ ಚರಸ್ ಮತ್ತು ಒಂದು ಪ್ರಕರಣದಲ್ಲಿ ವಶಪಡಿಸಿಕೊಳ್ಳಲಾಗಿದ್ದ ₹10 ಸಾವಿರ ಮೌಲ್ಯದ 48 ಗ್ರಾಂ ಗಾಂಜಾ ಗಿಡ ಸೇರಿದಂತೆ ಒಟ್ಟು 34 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ₹15.16 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಪರಿಸರಕ್ಕೆ ಹಾನಿಯಾಗದಂತೆ ನಾಶಪಡಿಸಲಾಯಿತು’ ಎಂದು ಎನ್.ವಿಷ್ಣುವರ್ಧನ ತಿಳಿಸಿದರು.</p>.<p>ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಜಗದೀಶ, ಕಾರವಾರ ಡಿಎಸ್ಪಿಗಳಾದ ವೆಲೆಂಟೈನ್ ಡಿಸೋಜಾ, ಮಹೇಶ, ಕೆ.ಎಲ್.ಗಣೇಶ, ಪಿಐಗಳಾದ ಶ್ರೀಕಾಂತ ತೋಟಗಿ, ಎನ್.ರಂಗನಾಥ, ನೇಹಾಲಕಾಂತ, ರಾಮಚಂದ್ರ ನಾಯಕ, ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>