<p><strong>ಕಾರವಾರ: ‘</strong>ಸಾರ್ವಜನಿಕ ಗಣೇಶೋತ್ಸವದ ವೇಳೆ ಮೂರ್ತಿ ಪ್ರತಿಷ್ಠಾಪನೆ ಸ್ಥಳ ಮತ್ತು ವಿಸರ್ಜನೆ ಮಾಡುವ ಸಮಯದಲ್ಲಿ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡದಂತೆ ಎಚ್ಚರವಹಿಸಿ’ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.</p><p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಗಣೇಶೋತ್ಸವ ಆಚರಣೆ ಪೂರ್ವಭಾವಿ ಸಿದ್ಧತೆಗಳ ಕುರಿತು ಸಭೆ ನಡೆಸಿದ ಅವರು, ‘ಪರಿಸರಕ್ಕೆ ಮಾರಕವಾಗುವ ರಾಸಾಯನಿಕ ಬಣ್ಣ, ಪಟಾಕಿ, ಪ್ಲಾಸ್ಟರ್ ಆಫ್ ಪ್ಯಾರಿಸ್ ತಯಾರಿತ ಮೂರ್ತಿಗಳ ಬಳಕೆ ಮಾಡದಂತೆ ನಿಗಾ ಇಡಬೇಕು’ ಎಂದರು.</p><p>‘ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಮತ್ತು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆಯಾಗುವಂತೆ ಎಲ್ಲ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಮುತುವರ್ಜಿವಹಿಸಬೇಕು’ ಎಂದರು.</p><p>‘ಸಾರ್ವಜನಿಕ ಗಣೇಶೋತ್ಸವ ಸಮಿತಿಯವರಿಗೆ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಾಗ ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿ ಪಾಲನೆ ಆಗಿರುವ ಕುರಿತು ಪರಿಶೀಲನೆ ನಡೆಸಬೇಕು. ಪ್ಲೆಕ್ಸ್ಗಳನ್ನು ಬಳಸಬಾರದು, ಪೆಂಡಾಲ್ಗಳ ನಿರ್ಮಾಣ ಮತ್ತು ಅಲಂಕಾರದಲ್ಲಿಯೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ನಿರ್ದೇಶಿಸಬೇಕು’ ಎಂದರು.</p><p>‘ಭಕ್ತರಿಗೆ ಪ್ರಸಾದದ ರೂಪದಲ್ಲಿ ವಿತರಿಸುವ ಆಹಾರ ಪದಾರ್ಥಗಳ ಬಗ್ಗೆ ಆಯೋಜಕರು ಮುತುವರ್ಜಿ ವಹಿಸಬೇಕು. ಆಸ್ಪತ್ರೆ, ಶಾಲೆ, ನ್ಯಾಯಾಲಯ ಇರುವ ಪ್ರದೇಶದಲ್ಲಿ ಧ್ವನಿವರ್ಧಕ ಬಳಸದಂತೆ ಎಚ್ಚರಿಸಬೇಕು’ ಎಂದರು.</p><p>ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ, ಪ್ರಾದೇಶಿಕ ಪರಿಸರ ಅಧಿಕಾರಿ ಸಂತೋಷ್ ಬಿ.ಕೆ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಉಪಪ್ರಾದೇಶಿಕ ಪರಿಸರ ಅಧಿಕಾರಿ ಗಣಪತಿ ಹೆಗಡೆ ಪಾಲ್ಗೊಂಡಿದ್ದರು.</p>.<div><blockquote>ಸಾರ್ವಜನಿಕ ಗಣೇಶೋತ್ಸವ ಆಚರಣೆ ವೇಳೆ ಡಿಜೆ ಬಳಕೆ ನಿಷೇಧಿಸಲಾಗಿದೆ. ರಾತ್ರಿ 10 ಗಂಟೆಯ ಬಳಿಕ ಧ್ವನಿವರ್ಧಕ ಬಳಸುವಂತಿಲ್ಲ ದೀಪನ್ ಎಂ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ </blockquote><span class="attribution"></span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: ‘</strong>ಸಾರ್ವಜನಿಕ ಗಣೇಶೋತ್ಸವದ ವೇಳೆ ಮೂರ್ತಿ ಪ್ರತಿಷ್ಠಾಪನೆ ಸ್ಥಳ ಮತ್ತು ವಿಸರ್ಜನೆ ಮಾಡುವ ಸಮಯದಲ್ಲಿ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡದಂತೆ ಎಚ್ಚರವಹಿಸಿ’ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದರು.</p><p>ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಗಣೇಶೋತ್ಸವ ಆಚರಣೆ ಪೂರ್ವಭಾವಿ ಸಿದ್ಧತೆಗಳ ಕುರಿತು ಸಭೆ ನಡೆಸಿದ ಅವರು, ‘ಪರಿಸರಕ್ಕೆ ಮಾರಕವಾಗುವ ರಾಸಾಯನಿಕ ಬಣ್ಣ, ಪಟಾಕಿ, ಪ್ಲಾಸ್ಟರ್ ಆಫ್ ಪ್ಯಾರಿಸ್ ತಯಾರಿತ ಮೂರ್ತಿಗಳ ಬಳಕೆ ಮಾಡದಂತೆ ನಿಗಾ ಇಡಬೇಕು’ ಎಂದರು.</p><p>‘ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಮತ್ತು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆಯಾಗುವಂತೆ ಎಲ್ಲ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಮುತುವರ್ಜಿವಹಿಸಬೇಕು’ ಎಂದರು.</p><p>‘ಸಾರ್ವಜನಿಕ ಗಣೇಶೋತ್ಸವ ಸಮಿತಿಯವರಿಗೆ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡುವಾಗ ಕಡ್ಡಾಯವಾಗಿ ಸರ್ಕಾರದ ಮಾರ್ಗಸೂಚಿ ಪಾಲನೆ ಆಗಿರುವ ಕುರಿತು ಪರಿಶೀಲನೆ ನಡೆಸಬೇಕು. ಪ್ಲೆಕ್ಸ್ಗಳನ್ನು ಬಳಸಬಾರದು, ಪೆಂಡಾಲ್ಗಳ ನಿರ್ಮಾಣ ಮತ್ತು ಅಲಂಕಾರದಲ್ಲಿಯೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ನಿರ್ದೇಶಿಸಬೇಕು’ ಎಂದರು.</p><p>‘ಭಕ್ತರಿಗೆ ಪ್ರಸಾದದ ರೂಪದಲ್ಲಿ ವಿತರಿಸುವ ಆಹಾರ ಪದಾರ್ಥಗಳ ಬಗ್ಗೆ ಆಯೋಜಕರು ಮುತುವರ್ಜಿ ವಹಿಸಬೇಕು. ಆಸ್ಪತ್ರೆ, ಶಾಲೆ, ನ್ಯಾಯಾಲಯ ಇರುವ ಪ್ರದೇಶದಲ್ಲಿ ಧ್ವನಿವರ್ಧಕ ಬಳಸದಂತೆ ಎಚ್ಚರಿಸಬೇಕು’ ಎಂದರು.</p><p>ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ, ಪ್ರಾದೇಶಿಕ ಪರಿಸರ ಅಧಿಕಾರಿ ಸಂತೋಷ್ ಬಿ.ಕೆ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಉಪಪ್ರಾದೇಶಿಕ ಪರಿಸರ ಅಧಿಕಾರಿ ಗಣಪತಿ ಹೆಗಡೆ ಪಾಲ್ಗೊಂಡಿದ್ದರು.</p>.<div><blockquote>ಸಾರ್ವಜನಿಕ ಗಣೇಶೋತ್ಸವ ಆಚರಣೆ ವೇಳೆ ಡಿಜೆ ಬಳಕೆ ನಿಷೇಧಿಸಲಾಗಿದೆ. ರಾತ್ರಿ 10 ಗಂಟೆಯ ಬಳಿಕ ಧ್ವನಿವರ್ಧಕ ಬಳಸುವಂತಿಲ್ಲ ದೀಪನ್ ಎಂ.ಎನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ </blockquote><span class="attribution"></span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>