<figcaption>""</figcaption>.<p><strong>ಕಾರವಾರ:</strong>ಶಾಲಾ ವಿದ್ಯಾರ್ಥಿಗಳು ಪ್ರವಾಸ ಬಂದಿದ್ದ ಬಸ್ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪ ಬಳಿ ಶುಕ್ರವಾರ ರಾತ್ರಿ ಕಂದಕಕ್ಕೆ ಉರುಳಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. 10ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.</p>.<p>ಆಂಧ್ರಪ್ರದೇಶದಅನಂತಪುರ ಜಿಲ್ಲೆ ಕದಿರಿ ಪಟ್ಟಣದಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳನ್ನು ಬಸ್ನಲ್ಲಿ ಪ್ರವಾಸಕ್ಕೆ ಕರೆದುಕೊಂಡು ಬರಲಾಗಿತ್ತು. ಗೇರುಸೊಪ್ಪ ಬಳಿಯ ಸೂಳೆಮರ್ಕಿಯಲ್ಲಿ ಬಸ್ ಪಲ್ಟಿಯಾಯಿತು. ಅವಘಡದಲ್ಲಿ ವಿದ್ಯಾರ್ಥಿ ಟಿ.ಬಾಷಾ ಫಕ್ರುದ್ದೀನ್ (14) ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಸಿಗಂದೂರು, ಜೋಗ, ಮುರ್ಡೇಶ್ವರ ಸೇರಿದಂತೆ ವಿವಿಧ ಐತಿಹಾಸಿಕ ಪ್ರದೇಶಗಳನ್ನು ವೀಕ್ಷಿಸಲು ಬಂದಿದ್ದರು. ಬಸ್ನಲ್ಲಿ ಒಟ್ಟು 44 ವಿದ್ಯಾರ್ಥಿಗಳು, 9 ಶಿಕ್ಷಕರು, 4 ಅಡುಗೆ ಸಿಬ್ಬಂದಿ ಇದ್ದರು. ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಮಣಿಪಾಲ, ಉಡುಪಿ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗಳಾದವರಿಗೆ ಹೊನ್ನಾವರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಘಟನಾ ಸ್ಥಳಕ್ಕೆ ತಹಶೀಲ್ದಾರ್ ವಿವೇಕ ಶೇಣ್ವಿ, ಎ.ಎಸ್.ಪಿ ನಿಖಿತಾ ಬುಳ್ಳಾವರ, ಶಾಸಕ ದಿನಕರ ಶೆಟ್ಟಿ<br />ಭೇಟಿ ನೀಡಿ ಪರಿಶೀಲಿಸಿ ರಕ್ಷಣಾ ಕಾರ್ಯಕ್ಕೆ ಮಾರ್ಗದರ್ಶನ ಮಾಡಿದರು.</p>.<div style="text-align:center"><figcaption><em><strong>ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರು ರಕ್ಷಿಸಿದರು.</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಕಾರವಾರ:</strong>ಶಾಲಾ ವಿದ್ಯಾರ್ಥಿಗಳು ಪ್ರವಾಸ ಬಂದಿದ್ದ ಬಸ್ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪ ಬಳಿ ಶುಕ್ರವಾರ ರಾತ್ರಿ ಕಂದಕಕ್ಕೆ ಉರುಳಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. 10ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.</p>.<p>ಆಂಧ್ರಪ್ರದೇಶದಅನಂತಪುರ ಜಿಲ್ಲೆ ಕದಿರಿ ಪಟ್ಟಣದಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳನ್ನು ಬಸ್ನಲ್ಲಿ ಪ್ರವಾಸಕ್ಕೆ ಕರೆದುಕೊಂಡು ಬರಲಾಗಿತ್ತು. ಗೇರುಸೊಪ್ಪ ಬಳಿಯ ಸೂಳೆಮರ್ಕಿಯಲ್ಲಿ ಬಸ್ ಪಲ್ಟಿಯಾಯಿತು. ಅವಘಡದಲ್ಲಿ ವಿದ್ಯಾರ್ಥಿ ಟಿ.ಬಾಷಾ ಫಕ್ರುದ್ದೀನ್ (14) ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಸಿಗಂದೂರು, ಜೋಗ, ಮುರ್ಡೇಶ್ವರ ಸೇರಿದಂತೆ ವಿವಿಧ ಐತಿಹಾಸಿಕ ಪ್ರದೇಶಗಳನ್ನು ವೀಕ್ಷಿಸಲು ಬಂದಿದ್ದರು. ಬಸ್ನಲ್ಲಿ ಒಟ್ಟು 44 ವಿದ್ಯಾರ್ಥಿಗಳು, 9 ಶಿಕ್ಷಕರು, 4 ಅಡುಗೆ ಸಿಬ್ಬಂದಿ ಇದ್ದರು. ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಮಣಿಪಾಲ, ಉಡುಪಿ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗಳಾದವರಿಗೆ ಹೊನ್ನಾವರ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಘಟನಾ ಸ್ಥಳಕ್ಕೆ ತಹಶೀಲ್ದಾರ್ ವಿವೇಕ ಶೇಣ್ವಿ, ಎ.ಎಸ್.ಪಿ ನಿಖಿತಾ ಬುಳ್ಳಾವರ, ಶಾಸಕ ದಿನಕರ ಶೆಟ್ಟಿ<br />ಭೇಟಿ ನೀಡಿ ಪರಿಶೀಲಿಸಿ ರಕ್ಷಣಾ ಕಾರ್ಯಕ್ಕೆ ಮಾರ್ಗದರ್ಶನ ಮಾಡಿದರು.</p>.<div style="text-align:center"><figcaption><em><strong>ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರು ರಕ್ಷಿಸಿದರು.</strong></em></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>