ದಾಂಡೇಲಿ: ತಾಲ್ಲೂಕಿನ ಅಂಬೇವಾಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನವಗ್ರಾಮದಲ್ಲಿ ಆನೆಯೊಂದು ಶನಿವಾರ ಸಂಜೆ ಕಾಣಿಸಿಕೊಂಡಿದ್ದು ಜನರು ಆತಂಕಗೊಂಡರು.
ಗ್ರಾಮದ ಜನವಸತಿ ಪ್ರದೇಶದ ಹತ್ತಿರದಲ್ಲಿರುವ ಹೊಲಕ್ಕೆ ಬಂದಿದ್ದು, ಬೆಳೆಗಳನ್ನು ನಾಶ ಪಡಿಸಿದೆ. ಭಯಗೊಂಡ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಪಟಾಕಿ ಸಿಡಿಸುವ ಮೂಲಕ ಆನೆಯನ್ನು ಅರಣ್ಯದತ್ತ ಅಟ್ಟಿಸಿದ್ದಾರೆ.
ಎ.ಸಿ.ಎಫ್ ಜಿ.ಕೆ.ಶೆಟ್, ಆರ್.ಎಫ್.ಓ ಅಪ್ಪಾಜಿರಾವ ಕಲಶೆಟ್ಟಿ, ಡಿ.ಆರ್.ಎಫ್.ಒ ಲೊಕೇಶ, ಸಂದೀಪ ಗೌಡಾ, ವೀರೇಶ, ಹುಸೇನ, ಕೆಟಿಆರ್ ವನ್ಯಜೀವಿ ಸಂಶೋಧನಾ ಕೇಂದ್ರದ ಇಮ್ರಾನ್, ಸಿಪಿಐ ಬಿ.ಎಸ್.ಲೊಕಾಪುರ, ಗ್ರಾಮೀಣ ಠಾಣೆಯ ಪಿಎಸ್ಐ ಕೃಷ್ಣಗೌಡ ಅರಿಕೆರ ಸಿಬ್ಬಂದಿ ಇದ್ದರು.