<p><strong>ದಾಂಡೇಲಿ:</strong> ಕಾಂಗ್ರೆಸ್ ತನ್ನ ಅಧಿಕಾರದ ದಾಹಕ್ಕೆ ದೇಶದ ಹಿತಾಸಕ್ತಿ ಬಲಿಕೊಟ್ಟು ಸ್ವಾರ್ಥದ ರಾಜಕಾರಣ ಮಾಡಿದ್ದು ಇತಿಹಾಸದಲ್ಲೇ ನಡೆದ ಅತಿದೊಡ್ಡ ದುರಂತ ಎಂದು ಮಾಜಿ ಶಾಸಕ ಸುನೀಲ ಹೆಗಡೆ ಹೇಳಿದರು.</p>.<p>ನಗರದ ಮರಾಠ ಸಮಾಜ ಕಾರ್ಯಾಲಯದಲ್ಲಿ ಶನಿವಾರ ನಡೆದ ತುರ್ತು ಪರಿಸ್ಥಿತಿಯ ಕರಾಳ ಇತಿಹಾಸಕ್ಕೆ 50 ವರ್ಷ ಭಾರತೀಯ ಪ್ರಜಾಪ್ರಭುತ್ವದ ಕರಾಳ ಅಧ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಕರಾಳ ದಿನಗಳಲ್ಲಿ ಹಲವಾರು ರಾಜಕೀಯ ನಾಯಕರನ್ನು ಜೈಲಿಗೆ ಹಾಕಿ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುವ ಮೂಲಕ ಪ್ರಜೆಗಳಿಗೆ ಅನ್ಯಾಯ ಮಾಡಿದ್ದಾರೆ. ಈ ತುರ್ತು ಪರಿಸ್ಥಿತಿಯಲ್ಲಿ ಸಂವಿಧಾನದ ಎಲ್ಲ ಆಯಾಮಗಳನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದು ದುರಂತ ಎಂದರು.</p>.<p>ಉತ್ತರ ಕನ್ನಡ ಜಿಲ್ಲಾ ನಿಕಟ ಪೂರ್ವ ಜಿಲ್ಲಾ ಘಟಕದ ಅಧ್ಯಕ್ಷ ಕುಮಟಾದ ವೆಂಕಟೇಶ್ ನಾಯಕ ಮಾತನಾಡಿದರು.</p>.<p>ಮಂಡಲ ಅಧ್ಯಕ್ಷ ಬದುವಂತಗೌಡ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶಿವಾಜಿ ನರಸನಿ ಮಾತನಾಡಿದರು.</p>.<p>ಹಳಿಯಾಳ ಮಂಡಲ ಪ್ರಧಾನ ಕಾರ್ಯದರ್ಶಿ ಸಂತೋಷ್ ಘಟಕಾಂಬಳೆ, ಹಳಿಯಾಳ ಮಂಡಲ ಅಧ್ಯಕ್ಷ ವಿಠ್ಠಲ್ ಸಿದ್ದಣ್ಣವರ, ಪ್ರಶಾಂತ ದೇಶಪಾಂಡೆ , ಮಿಥುನ ನಾಯಕ, ಗಿರೀಶ್ ಟೋಸುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಂಡೇಲಿ:</strong> ಕಾಂಗ್ರೆಸ್ ತನ್ನ ಅಧಿಕಾರದ ದಾಹಕ್ಕೆ ದೇಶದ ಹಿತಾಸಕ್ತಿ ಬಲಿಕೊಟ್ಟು ಸ್ವಾರ್ಥದ ರಾಜಕಾರಣ ಮಾಡಿದ್ದು ಇತಿಹಾಸದಲ್ಲೇ ನಡೆದ ಅತಿದೊಡ್ಡ ದುರಂತ ಎಂದು ಮಾಜಿ ಶಾಸಕ ಸುನೀಲ ಹೆಗಡೆ ಹೇಳಿದರು.</p>.<p>ನಗರದ ಮರಾಠ ಸಮಾಜ ಕಾರ್ಯಾಲಯದಲ್ಲಿ ಶನಿವಾರ ನಡೆದ ತುರ್ತು ಪರಿಸ್ಥಿತಿಯ ಕರಾಳ ಇತಿಹಾಸಕ್ಕೆ 50 ವರ್ಷ ಭಾರತೀಯ ಪ್ರಜಾಪ್ರಭುತ್ವದ ಕರಾಳ ಅಧ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಕರಾಳ ದಿನಗಳಲ್ಲಿ ಹಲವಾರು ರಾಜಕೀಯ ನಾಯಕರನ್ನು ಜೈಲಿಗೆ ಹಾಕಿ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುವ ಮೂಲಕ ಪ್ರಜೆಗಳಿಗೆ ಅನ್ಯಾಯ ಮಾಡಿದ್ದಾರೆ. ಈ ತುರ್ತು ಪರಿಸ್ಥಿತಿಯಲ್ಲಿ ಸಂವಿಧಾನದ ಎಲ್ಲ ಆಯಾಮಗಳನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದು ದುರಂತ ಎಂದರು.</p>.<p>ಉತ್ತರ ಕನ್ನಡ ಜಿಲ್ಲಾ ನಿಕಟ ಪೂರ್ವ ಜಿಲ್ಲಾ ಘಟಕದ ಅಧ್ಯಕ್ಷ ಕುಮಟಾದ ವೆಂಕಟೇಶ್ ನಾಯಕ ಮಾತನಾಡಿದರು.</p>.<p>ಮಂಡಲ ಅಧ್ಯಕ್ಷ ಬದುವಂತಗೌಡ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಶಿವಾಜಿ ನರಸನಿ ಮಾತನಾಡಿದರು.</p>.<p>ಹಳಿಯಾಳ ಮಂಡಲ ಪ್ರಧಾನ ಕಾರ್ಯದರ್ಶಿ ಸಂತೋಷ್ ಘಟಕಾಂಬಳೆ, ಹಳಿಯಾಳ ಮಂಡಲ ಅಧ್ಯಕ್ಷ ವಿಠ್ಠಲ್ ಸಿದ್ದಣ್ಣವರ, ಪ್ರಶಾಂತ ದೇಶಪಾಂಡೆ , ಮಿಥುನ ನಾಯಕ, ಗಿರೀಶ್ ಟೋಸುರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>