ಹಬ್ಬದ ಸಂದರ್ಭದಲ್ಲಿ ಇಲ್ಲಿನ ಶಾಲ್ಮಲಾನದಿಯಲ್ಲಿ ಪುಣ್ಯಸ್ನಾನ ಮಾಡಿ, ಶಿವಲಿಂಗಗಳಿಗೆ ಪೂಜೆ ಸಲ್ಲಿಸಲು ಭಕ್ತರ ದಂಡು ಹರಿದುಬರುತ್ತದೆ. ಹೊರಜಿಲ್ಲೆಗಳಿಂದಲೂ ಸಾಕಷ್ಟು ಜನರು ಬರುತ್ತಾರೆ. ಕೋವಿಡ್ ನಿಯಮಾವಳಿ ಪಾಲನೆ ಸಲುವಾಗಿ ಜನ ದಟ್ಟಣೆ ತಡೆಯಲು ನಿರ್ಬಂಧ ವಿಧಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷ ರಾಘವೇಂದ್ರ ನಾಯ್ಕ ತಿಳಿಸಿದ್ದಾರೆ.