ಈ ವರ್ಷ ಮಳೆಗಾಲದಲ್ಲಿ ಕ್ಯಾಸಲ್ರಾಕ್ ಸಮೀಪದ ಅರಣ್ಯದ ನಡುವೆ ಹಳಿಗಳ ಮೇಲೆ ಗುಡ್ಡದ ಮಣ್ಣು ಕುಸಿದಿತ್ತು. ಇದರಿಂದ ಪ್ರಯಾಣಿಕರ ರೈಲೊಂದು ಹಳಿ ತಪ್ಪಿತ್ತು. ಪಶ್ಚಿಮ ಘಟ್ಟದ ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಇಲ್ಲಿ, ಹಳಿ ದ್ವಿಪಥ ಕಾಮಗಾರಿಗಾಗಿ ಮತ್ತಷ್ಟು ಗುಡ್ಡ ಕೊರೆಯಬೇಕು. ಮರಗಳನ್ನು ಕಡಿಯಬೇಕು. ಏಳು ದೊಡ್ಡ, 74 ಸಣ್ಣ ಸೇತುವೆಗಳನ್ನು ಹಾಗೂ 23 ಸುರಂಗಗಳನ್ನು ಮಾಡಬೇಕಾಗುತ್ತದೆ. ಇದರಿಂದ ಪರಿಸರ ಸಮತೋಲನದ ಮೇಲೆ ದೊಡ್ಡ ವ್ಯತಿರಿಕ್ತ ಪರಿಣಾಮ ಆಗಲಿದೆ ಎಂದು ಸಂಘಟನೆಯು ಪ್ರಕಟಣೆಯಲ್ಲಿ ಆತಂಕ ವ್ಯಕ್ತಪಡಿಸಿದೆ.