<p><strong>ಯಲ್ಲಾಪುರ:</strong> ತಾಲ್ಲೂಕಿನ ಅರೆಬೈಲ್ ಘಟ್ಟದ ಮಾರುತಿ ದೇವಸ್ಥಾನದ ಸಮೀಪ ಶನಿವಾರ ಬೆಳಿಗ್ಗೆ ಎಥನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಬೆಂಕಿಗೆ ಸುಟ್ಟು ಕರಕಲಾಗಿದೆ.</p>.ನಾಲ್ಕು ದೇಗುಲಗಳಲ್ಲಿ ಸರಣಿ ಕಳವು: ಒಂದೇ ತಂಡದ ಕೃತ್ಯದ ಶಂಕೆ.<p>ರಾಷ್ಟ್ರೀಯ ಹೆದ್ದಾರಿ-63ರಲ್ಲಿನ ಘಟ್ಟದ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾದ ಟ್ಯಾಂಕರ್ ಬಿದ್ದ ರಭಸಕ್ಕೆ ಇಂಧನ ಟ್ಯಾಂಕ್ಗೆ ಹಾನಿಯಾಗಿದೆ. ಇದರಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದ್ದು, ಎಥನಾಲ್ ತುಂಬಿದ್ದರಿಂದ ಬೆಂಕಿ ವ್ಯಾಪಿಸಿ ಟ್ಯಾಂಕರ್ ಸುಟ್ಟು ಕರಕಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಟ್ಯಾಂಕರ್ ಚಾಲಕ ಸ್ಥಳದಿಂದ ದೂರ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯಿಂದ ಕೇರಳಕ್ಕೆ ಎಥನಾಲ್ ಸಾಗಿಸಲಾಗುತ್ತಿತ್ತು ಎಂದು ಯಲ್ಲಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಅನುಮಾನ.<p>ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆದ್ದಾರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ ಕೆಲವು ತಾಸು ಸಂಚಾರ ವ್ಯತ್ಯಯ ಉಂಟಾಗಿತ್ತು</p>.ಶಿರಸಿ, ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆ: ಸದ್ದಿಲ್ಲದೆ ಶಾಲೆ ವಿಲೀನ ಪಟ್ಟಿ ಸಿದ್ಧ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ:</strong> ತಾಲ್ಲೂಕಿನ ಅರೆಬೈಲ್ ಘಟ್ಟದ ಮಾರುತಿ ದೇವಸ್ಥಾನದ ಸಮೀಪ ಶನಿವಾರ ಬೆಳಿಗ್ಗೆ ಎಥನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ಬೆಂಕಿಗೆ ಸುಟ್ಟು ಕರಕಲಾಗಿದೆ.</p>.ನಾಲ್ಕು ದೇಗುಲಗಳಲ್ಲಿ ಸರಣಿ ಕಳವು: ಒಂದೇ ತಂಡದ ಕೃತ್ಯದ ಶಂಕೆ.<p>ರಾಷ್ಟ್ರೀಯ ಹೆದ್ದಾರಿ-63ರಲ್ಲಿನ ಘಟ್ಟದ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾದ ಟ್ಯಾಂಕರ್ ಬಿದ್ದ ರಭಸಕ್ಕೆ ಇಂಧನ ಟ್ಯಾಂಕ್ಗೆ ಹಾನಿಯಾಗಿದೆ. ಇದರಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದ್ದು, ಎಥನಾಲ್ ತುಂಬಿದ್ದರಿಂದ ಬೆಂಕಿ ವ್ಯಾಪಿಸಿ ಟ್ಯಾಂಕರ್ ಸುಟ್ಟು ಕರಕಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ಟ್ಯಾಂಕರ್ ಚಾಲಕ ಸ್ಥಳದಿಂದ ದೂರ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯಿಂದ ಕೇರಳಕ್ಕೆ ಎಥನಾಲ್ ಸಾಗಿಸಲಾಗುತ್ತಿತ್ತು ಎಂದು ಯಲ್ಲಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗ ಅನುಮಾನ.<p>ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆದ್ದಾರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ ಕೆಲವು ತಾಸು ಸಂಚಾರ ವ್ಯತ್ಯಯ ಉಂಟಾಗಿತ್ತು</p>.ಶಿರಸಿ, ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆ: ಸದ್ದಿಲ್ಲದೆ ಶಾಲೆ ವಿಲೀನ ಪಟ್ಟಿ ಸಿದ್ಧ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>