<p><strong>ಅಂಕೋಲಾ</strong>: ‘ಇತ್ತೀಚಿನ ದಿನಗಳಲ್ಲಿ ಮೊಬೈಲ್, ಟಿವಿ ಮುಂತಾದ ಮಾಧ್ಯಮಗಳ ಅತಿಯಾದ ಬಳಕೆಯಿಂದ ದೃಷ್ಟಿ ದೋಷ ಹೆಚ್ಚುತ್ತಿದ್ದು, ಅವುಗಳ ಬಳಕೆಯ ಬಗ್ಗೆ ಕಾಳಜಿ ವಹಿಸುವ ಜೊತೆಯಲ್ಲಿ ನೇತ್ರದಾನದ ಬಗ್ಗೆಯೂ ಜಾಗೃತಿ ಮೂಡಿಸಬೇಕು. ರಾಜ್ಕುಮಾರ್ ಅವರು ತಮ್ಮ ಕಣ್ಣನ್ನು ದಾನ ಮಾಡಿರುವುದರಿಂದ ಇಂದಿಗೂ ಅಜರಾಮರಾಗಿದ್ದಾರೆ. ಸಂಘಟನೆಗಳು ಈ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ’ ಎಂದು ಡಾ.ಕರುಣಾಕರ್ ನಾಯ್ಕ ಹೇಳಿದರು.</p>.<p>ಪಟ್ಟಣದ ಕೆಎಲ್ಇ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಒನ್ ಸೈಟ್ ಎಕ್ಸಿಲಾರ ಫೌಂಡೇಶನ್, ಸ್ಪಂದನ ಸೇವಾ ಟ್ರಸ್ಟ್ ಹಾಗೂ ಸಂಗಮ ಸೇವಾ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾದ ಕಣ್ಣಿನ ಉಚಿತ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪನ್ಯಾಸಕ ಮಂಜುನಾಥ ಇಟಗಿ, ‘ದಾನಗಳಲ್ಲಿ ನೇತ್ರದಾನ ಶ್ರೇಷ್ಠವಾದದ್ದು ಅದರ ಜಾಗೃತಿ ಮೂಲಕ ಸಮಾಜದಲ್ಲಿ ಆರೋಗ್ಯದ ಸ್ವಾಸ್ಥ್ಯ ಕಾಪಾಡಬೇಕು. ಆ ಮೂಲಕ ಆರ್ಥಿಕ ಸಮಸ್ಯೆಯಿಂದ ಕಣ್ಣಿನ ಆರೈಕೆ ಮಾಡಲಾಗದ ಜನರಿಗೆ ಇಂತಹ ಉಚಿತ ಕಾರ್ಯಕ್ರಮ ಅತ್ಯಂತ ಉಪಯುಕ್ತವಾಗಿದೆ’ ಎಂದರು.</p>.<p>ಸ್ಪಂದನ ಸೇವಾ ಟ್ರಸ್ಟ್ನ ಖಜಾಂಚಿ ಪ್ರಕಾಶ್ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಡಾ.ವಿನಾಯಕ ಹೆಗಡೆ, ಕೌಟುಂಬಿಕ ಸಲಹಾ ಕೇಂದ್ರದ ಮುಖ್ಯಸ್ಥ ತಿಮ್ಮಣ್ಣ ಭಟ್, ಹೊನಲು ನಾಯಕ, ಕರಿಯಮ್ಮ ಗೌಡರ್, ಮೋನಿಕಾ ಸಾಗರಕರ್, ಸ್ಮಿತಾ ನಾಯ್ಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ</strong>: ‘ಇತ್ತೀಚಿನ ದಿನಗಳಲ್ಲಿ ಮೊಬೈಲ್, ಟಿವಿ ಮುಂತಾದ ಮಾಧ್ಯಮಗಳ ಅತಿಯಾದ ಬಳಕೆಯಿಂದ ದೃಷ್ಟಿ ದೋಷ ಹೆಚ್ಚುತ್ತಿದ್ದು, ಅವುಗಳ ಬಳಕೆಯ ಬಗ್ಗೆ ಕಾಳಜಿ ವಹಿಸುವ ಜೊತೆಯಲ್ಲಿ ನೇತ್ರದಾನದ ಬಗ್ಗೆಯೂ ಜಾಗೃತಿ ಮೂಡಿಸಬೇಕು. ರಾಜ್ಕುಮಾರ್ ಅವರು ತಮ್ಮ ಕಣ್ಣನ್ನು ದಾನ ಮಾಡಿರುವುದರಿಂದ ಇಂದಿಗೂ ಅಜರಾಮರಾಗಿದ್ದಾರೆ. ಸಂಘಟನೆಗಳು ಈ ಕುರಿತು ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ’ ಎಂದು ಡಾ.ಕರುಣಾಕರ್ ನಾಯ್ಕ ಹೇಳಿದರು.</p>.<p>ಪಟ್ಟಣದ ಕೆಎಲ್ಇ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಒನ್ ಸೈಟ್ ಎಕ್ಸಿಲಾರ ಫೌಂಡೇಶನ್, ಸ್ಪಂದನ ಸೇವಾ ಟ್ರಸ್ಟ್ ಹಾಗೂ ಸಂಗಮ ಸೇವಾ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾದ ಕಣ್ಣಿನ ಉಚಿತ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪನ್ಯಾಸಕ ಮಂಜುನಾಥ ಇಟಗಿ, ‘ದಾನಗಳಲ್ಲಿ ನೇತ್ರದಾನ ಶ್ರೇಷ್ಠವಾದದ್ದು ಅದರ ಜಾಗೃತಿ ಮೂಲಕ ಸಮಾಜದಲ್ಲಿ ಆರೋಗ್ಯದ ಸ್ವಾಸ್ಥ್ಯ ಕಾಪಾಡಬೇಕು. ಆ ಮೂಲಕ ಆರ್ಥಿಕ ಸಮಸ್ಯೆಯಿಂದ ಕಣ್ಣಿನ ಆರೈಕೆ ಮಾಡಲಾಗದ ಜನರಿಗೆ ಇಂತಹ ಉಚಿತ ಕಾರ್ಯಕ್ರಮ ಅತ್ಯಂತ ಉಪಯುಕ್ತವಾಗಿದೆ’ ಎಂದರು.</p>.<p>ಸ್ಪಂದನ ಸೇವಾ ಟ್ರಸ್ಟ್ನ ಖಜಾಂಚಿ ಪ್ರಕಾಶ್ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಚಾರ್ಯ ಡಾ.ವಿನಾಯಕ ಹೆಗಡೆ, ಕೌಟುಂಬಿಕ ಸಲಹಾ ಕೇಂದ್ರದ ಮುಖ್ಯಸ್ಥ ತಿಮ್ಮಣ್ಣ ಭಟ್, ಹೊನಲು ನಾಯಕ, ಕರಿಯಮ್ಮ ಗೌಡರ್, ಮೋನಿಕಾ ಸಾಗರಕರ್, ಸ್ಮಿತಾ ನಾಯ್ಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>