<p><strong>ಶಿರಸಿ:</strong> ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಯೊಬ್ಬರಿಗೆ ಇದೇ ಮೊದಲ ಬಾರಿಗೆ ವಿಧಾನಸಭೆ ಸ್ಪೀಕರ್ ಹುದ್ದೆ ದೊರೆತಿದೆ. ಈ ಹೊಣೆಗಾರಿಕೆ ವಹಿಸಿಕೊಂಡಿರುವ ಶಿರಸಿ–ಸಿದ್ದಾಪುರ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಆ.6ರ ಮಧ್ಯಾಹ್ನ 3.30ಕ್ಕೆ ತೋಟಗಾರರ ಕಲ್ಯಾಣ ಮಂಟಪದಲ್ಲಿ ನಾಗರಿಕ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ.ನಾಯ್ಕ ಹೇಳಿದರು.</p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಜ್ಜನ ಹಾಗೂ ಪ್ರಾಮಾಣಿಕ ರಾಜಕಾರಣಿಯಾದ ಕಾಗೇರಿಯವರಿಗೆ ವಿಶೇಷ ರಾಜಕೀಯ ಸ್ಥಾನಮಾನ ಲಭಿಸಿದೆ. ಸ್ಪೀಕರ್ ಆಗುವ ಮೂಲಕ ಜಿಲ್ಲೆಯ ಗೌರವ ಹೆಚ್ಚಿಸಿದ್ದಾರೆ. ಪಕ್ಷಾತೀತವಾಗಿ ಅವರಿಗೆ ನಾಗರಿಕ ಸನ್ಮಾನ ಸಲ್ಲಿಸಲಾಗುವುದು’ ಎಂದರು.</p>.<p>ಪ್ರಸ್ತುತ ರಾಜಕೀಯ ವಿದ್ಯಮಾನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಯಲ್ಲಾಪುರದ ಶಿವರಾಮ ಹೆಬ್ಬಾರ್ ಅವರು ಈ ಹಿಂದೆ ಎರಡು ಅವಧಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದವರು. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ವರಿಷ್ಠರು ಸೂಚಿಸಿದರೆ, ಸೇರಸಿಕೊಳ್ಳಲಾಗುತ್ತದೆ. ಯಲ್ಲಾಪುರ ಕ್ಷೇತ್ರದ ಉಪಚುನಾವಣೆಗೆ ಹೈಕಮಾಂಡ್ ಆಯ್ಕೆ ಮಾಡುವ ಅಭ್ಯರ್ಥಿಪರ ಪಕ್ಷದ ಕಾರ್ಯಕರ್ತರು ಕೆಲಸ ಮಾಡುತ್ತಾರೆ’ ಎಂದರು.</p>.<p>2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ವಿ.ಎಸ್.ಪಾಟೀಲರ ವಿರುದ್ಧ ಕೆಲಸ ಮಾಡಿದವರ ಮೇಲೆ ಕ್ರಮವಹಿಸುವಂತೆ ರಾಜ್ಯ ನಾಯಕರಿಗೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಈ ಹಿಂದೆ ನಡೆದ ಹಲವು ಹೋರಾಟಗಳಲ್ಲಿ ಪಾಲ್ಗೊಂಡಿದ್ದ ಅಮಾಯಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಗಳನ್ನು ಅಂತ್ಯಗೊಳಿಸುವಂತೆ ಸರ್ಕಾರವನ್ನು ವಿನಂತಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪ್ರಮುಖರಾದ ಆರ್.ಡಿ.ಹೆಗಡೆ, ಆರ್.ವಿ.ಹೆಗಡೆ, ಗಣಪತಿ ನಾಯ್ಕ, ನಾಗರಾಜ ನಾಯ್ಕ, ಜಿ.ಕೆ.ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಯೊಬ್ಬರಿಗೆ ಇದೇ ಮೊದಲ ಬಾರಿಗೆ ವಿಧಾನಸಭೆ ಸ್ಪೀಕರ್ ಹುದ್ದೆ ದೊರೆತಿದೆ. ಈ ಹೊಣೆಗಾರಿಕೆ ವಹಿಸಿಕೊಂಡಿರುವ ಶಿರಸಿ–ಸಿದ್ದಾಪುರ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಆ.6ರ ಮಧ್ಯಾಹ್ನ 3.30ಕ್ಕೆ ತೋಟಗಾರರ ಕಲ್ಯಾಣ ಮಂಟಪದಲ್ಲಿ ನಾಗರಿಕ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ.ನಾಯ್ಕ ಹೇಳಿದರು.</p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಜ್ಜನ ಹಾಗೂ ಪ್ರಾಮಾಣಿಕ ರಾಜಕಾರಣಿಯಾದ ಕಾಗೇರಿಯವರಿಗೆ ವಿಶೇಷ ರಾಜಕೀಯ ಸ್ಥಾನಮಾನ ಲಭಿಸಿದೆ. ಸ್ಪೀಕರ್ ಆಗುವ ಮೂಲಕ ಜಿಲ್ಲೆಯ ಗೌರವ ಹೆಚ್ಚಿಸಿದ್ದಾರೆ. ಪಕ್ಷಾತೀತವಾಗಿ ಅವರಿಗೆ ನಾಗರಿಕ ಸನ್ಮಾನ ಸಲ್ಲಿಸಲಾಗುವುದು’ ಎಂದರು.</p>.<p>ಪ್ರಸ್ತುತ ರಾಜಕೀಯ ವಿದ್ಯಮಾನದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಯಲ್ಲಾಪುರದ ಶಿವರಾಮ ಹೆಬ್ಬಾರ್ ಅವರು ಈ ಹಿಂದೆ ಎರಡು ಅವಧಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದವರು. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ವರಿಷ್ಠರು ಸೂಚಿಸಿದರೆ, ಸೇರಸಿಕೊಳ್ಳಲಾಗುತ್ತದೆ. ಯಲ್ಲಾಪುರ ಕ್ಷೇತ್ರದ ಉಪಚುನಾವಣೆಗೆ ಹೈಕಮಾಂಡ್ ಆಯ್ಕೆ ಮಾಡುವ ಅಭ್ಯರ್ಥಿಪರ ಪಕ್ಷದ ಕಾರ್ಯಕರ್ತರು ಕೆಲಸ ಮಾಡುತ್ತಾರೆ’ ಎಂದರು.</p>.<p>2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ವಿ.ಎಸ್.ಪಾಟೀಲರ ವಿರುದ್ಧ ಕೆಲಸ ಮಾಡಿದವರ ಮೇಲೆ ಕ್ರಮವಹಿಸುವಂತೆ ರಾಜ್ಯ ನಾಯಕರಿಗೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ ಈ ಹಿಂದೆ ನಡೆದ ಹಲವು ಹೋರಾಟಗಳಲ್ಲಿ ಪಾಲ್ಗೊಂಡಿದ್ದ ಅಮಾಯಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಗಳನ್ನು ಅಂತ್ಯಗೊಳಿಸುವಂತೆ ಸರ್ಕಾರವನ್ನು ವಿನಂತಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪ್ರಮುಖರಾದ ಆರ್.ಡಿ.ಹೆಗಡೆ, ಆರ್.ವಿ.ಹೆಗಡೆ, ಗಣಪತಿ ನಾಯ್ಕ, ನಾಗರಾಜ ನಾಯ್ಕ, ಜಿ.ಕೆ.ಹೆಗಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>