<p>ಕಾರವಾರ: ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಅಪಘಾತ ವಿಮೆಯ ₹15 ಲಕ್ಷ ಮೊತ್ತವನ್ನು ವಾರ್ಷಿಕ ಶೇ 10ರ ಬಡ್ಡಿಯೊಂದಿಗೆ ಪಾವತಿಸುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.</p>.<p>ಹೊನ್ನಾವರದ ನರಸಿಂಹ ಸುಬ್ಬಯ್ಯ ಶೆಟ್ಟಿ ಅವರ ಮಕ್ಕಳಾದ ಧರ್ಮೇಂದ್ರ, ಲೋಕೇಶ್ ಹಾಗೂ ರೇಖಾ ತಮ್ಮ ತಂದೆ ನರಂಸಿಹ ಶೆಟ್ಟಿ ದ್ವಿಚಕ್ರ ವಾಹನದಲ್ಲಿ ಅಪಘಾತಗೊಂಡು ಹಲವು ತಿಂಗಳ ಚಿಕಿತ್ಸೆ ಪಡೆದು ಸಾವನ್ನಪ್ಪಿದ್ದು, ವಾಹನದ ವಿಮೆಯ ಪ್ರಕಾರ ವೈಯಕ್ತಿಕ ಅಪಘಾತ ವಿಮೆ ₹15 ಲಕ್ಷ ಇದ್ದು, ಈ ಮೊತ್ತ ಪಾವತಿಸಲು ಯುನೈಟೆಡ್ ಇಂಡಿಯಾ ಇನ್ಸೂರನ್ಸ್ ಕಂಪನಿಗೆ ವಿನಂತಿಸಿದ್ದರು. ಕಂಪನಿ ವಿಮಾ ಮೊತ್ತ ನೀಡದಿದ್ದಾಗ ಮೃತರ ಮಕ್ಕಳು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಪ್ರಕರಣ ದಾಖಲಿಸಿದ್ದರು.</p>.<p>ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಮಂಜುನಾಥ ಬಮ್ಮನಕಟ್ಟಿ ಹಾಗೂ ಸದಸ್ಯೆ ನೈನಾ ಕಾಮಟೆ, ವಿಮಾ ಕಂಪನಿ ವಿರುದ್ಧ ಆದೇಶಿಸಿ, ವಿಮಾ ಮೊತ್ತ ₹15 ಲಕ್ಷ ಮೊತ್ತಕ್ಕೆ ವಾರ್ಷಿಕ ಶೇ 10ರ ಬಡ್ಡಿಯೊಂದಿಗೆ ಪಾವತಿಸಲು ಹಾಗೂ ದೂರುದಾರರಿಗೆ ಪರಿಹಾರವಾಗಿ ₹90 ಸಾವಿರ, ಖರ್ಚು ವೆಚ್ಚಕ್ಕಾಗಿ ₹10 ಸಾವಿರ ನೀಡುವಂತೆ ಆಯೋಗ ತನ್ನ ಆದೇಶದಲ್ಲಿ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಅಪಘಾತ ವಿಮೆಯ ₹15 ಲಕ್ಷ ಮೊತ್ತವನ್ನು ವಾರ್ಷಿಕ ಶೇ 10ರ ಬಡ್ಡಿಯೊಂದಿಗೆ ಪಾವತಿಸುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.</p>.<p>ಹೊನ್ನಾವರದ ನರಸಿಂಹ ಸುಬ್ಬಯ್ಯ ಶೆಟ್ಟಿ ಅವರ ಮಕ್ಕಳಾದ ಧರ್ಮೇಂದ್ರ, ಲೋಕೇಶ್ ಹಾಗೂ ರೇಖಾ ತಮ್ಮ ತಂದೆ ನರಂಸಿಹ ಶೆಟ್ಟಿ ದ್ವಿಚಕ್ರ ವಾಹನದಲ್ಲಿ ಅಪಘಾತಗೊಂಡು ಹಲವು ತಿಂಗಳ ಚಿಕಿತ್ಸೆ ಪಡೆದು ಸಾವನ್ನಪ್ಪಿದ್ದು, ವಾಹನದ ವಿಮೆಯ ಪ್ರಕಾರ ವೈಯಕ್ತಿಕ ಅಪಘಾತ ವಿಮೆ ₹15 ಲಕ್ಷ ಇದ್ದು, ಈ ಮೊತ್ತ ಪಾವತಿಸಲು ಯುನೈಟೆಡ್ ಇಂಡಿಯಾ ಇನ್ಸೂರನ್ಸ್ ಕಂಪನಿಗೆ ವಿನಂತಿಸಿದ್ದರು. ಕಂಪನಿ ವಿಮಾ ಮೊತ್ತ ನೀಡದಿದ್ದಾಗ ಮೃತರ ಮಕ್ಕಳು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಪ್ರಕರಣ ದಾಖಲಿಸಿದ್ದರು.</p>.<p>ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಮಂಜುನಾಥ ಬಮ್ಮನಕಟ್ಟಿ ಹಾಗೂ ಸದಸ್ಯೆ ನೈನಾ ಕಾಮಟೆ, ವಿಮಾ ಕಂಪನಿ ವಿರುದ್ಧ ಆದೇಶಿಸಿ, ವಿಮಾ ಮೊತ್ತ ₹15 ಲಕ್ಷ ಮೊತ್ತಕ್ಕೆ ವಾರ್ಷಿಕ ಶೇ 10ರ ಬಡ್ಡಿಯೊಂದಿಗೆ ಪಾವತಿಸಲು ಹಾಗೂ ದೂರುದಾರರಿಗೆ ಪರಿಹಾರವಾಗಿ ₹90 ಸಾವಿರ, ಖರ್ಚು ವೆಚ್ಚಕ್ಕಾಗಿ ₹10 ಸಾವಿರ ನೀಡುವಂತೆ ಆಯೋಗ ತನ್ನ ಆದೇಶದಲ್ಲಿ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>