<p><strong>ಭಟ್ಕಳ</strong>: ತಾಲ್ಲೂಕಿನ ಹೆಬಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆಂಗಿನಗುಂಡಿ ಬೀಚ್ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅನುಮತಿ ಪಡೆಯದೆ ಸಂಸದ ಅನಂತಕುಮಾರ ಹೆಗಡೆ ನೇತೃತ್ವದಲ್ಲಿ ಸೋಮವಾರ ಹನುಮಧ್ವಜ ಹಾರಿಸಲಾಯಿತು. ‘ವೀರ ಸಾವರ್ಕರ್ ಬೀಚ್’ ಎಂಬ ತಾತ್ಕಾಲಿಕ ಫಲಕವನ್ನು ಬಿಜೆಪಿ ಮುಖಂಡರು ಅಳವಡಿಸಿದರು.</p>.<p>ಅನುಮತಿ ಪಡೆಯದೆ ಅಳವಡಿಸಿದ್ದ ನಾಮಫಲಕವನ್ನು ಜನವರಿ 27ರಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ತೆರವುಗೊಳಿಸಿದ್ದರು. ಘಟನೆಗೆ ಸಂಬಂಧಿಸಿ ಆಗ ಸ್ಥಳೀಯ ಬಿಜೆಪಿ ಮುಖಂಡರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು. ಅದೇ ಸ್ಥಳದಲ್ಲಿ ಹನುಮಧ್ವಜ ಹಾರಿಸಿ, ನಾಮಫಲಕ ಅಳವಡಿಸಲಾಗಿದೆ.</p>.<p>ಈ ವೇಳೆ ಸಂಸದ ಅನಂತಕುಮಾರ ಹೆಗಡೆ ಮಾತನಾಡಿ, ‘ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ಸರ್ಕಾರ ಮುಸ್ಲಿಂ ತುಷ್ಟೀಕರಣದಲ್ಲಿ ತೊಡಗಿದೆ. ಅವರು ಸಿದ್ದರಾಮಯ್ಯ ಅಲ್ಲ ಸಿದ್ರಾಮುಲ್ಲ ಖಾನ್’ ಎಂದರು.</p>.<p>‘ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆಯದೆ ಹನುಮಧ್ವಜ ಹಾರಿಸುವುದರ ಜೊತೆಗೆ ವೀರ ಸಾವರ್ಕರ್ ಹೆಸರಿನಲ್ಲಿ ನಾಮಫಲಕ ಅಳವಡಿಸಿದ್ದಾರೆ. ಇದನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಅವರ ನಿರ್ದೇಶನ ಪಾಲಿಸಲಾಗುವುದು’ ಎಂದು ಹೆಬಳೆ ಗ್ರಾಮ ಪಂಚಾಯಿತಿ ಪಿಡಿಒ ಮಂಜುನಾಥ ಗೊಂಡ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಟ್ಕಳ</strong>: ತಾಲ್ಲೂಕಿನ ಹೆಬಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆಂಗಿನಗುಂಡಿ ಬೀಚ್ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅನುಮತಿ ಪಡೆಯದೆ ಸಂಸದ ಅನಂತಕುಮಾರ ಹೆಗಡೆ ನೇತೃತ್ವದಲ್ಲಿ ಸೋಮವಾರ ಹನುಮಧ್ವಜ ಹಾರಿಸಲಾಯಿತು. ‘ವೀರ ಸಾವರ್ಕರ್ ಬೀಚ್’ ಎಂಬ ತಾತ್ಕಾಲಿಕ ಫಲಕವನ್ನು ಬಿಜೆಪಿ ಮುಖಂಡರು ಅಳವಡಿಸಿದರು.</p>.<p>ಅನುಮತಿ ಪಡೆಯದೆ ಅಳವಡಿಸಿದ್ದ ನಾಮಫಲಕವನ್ನು ಜನವರಿ 27ರಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ತೆರವುಗೊಳಿಸಿದ್ದರು. ಘಟನೆಗೆ ಸಂಬಂಧಿಸಿ ಆಗ ಸ್ಥಳೀಯ ಬಿಜೆಪಿ ಮುಖಂಡರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯನ್ನೂ ನಡೆಸಿದ್ದರು. ಅದೇ ಸ್ಥಳದಲ್ಲಿ ಹನುಮಧ್ವಜ ಹಾರಿಸಿ, ನಾಮಫಲಕ ಅಳವಡಿಸಲಾಗಿದೆ.</p>.<p>ಈ ವೇಳೆ ಸಂಸದ ಅನಂತಕುಮಾರ ಹೆಗಡೆ ಮಾತನಾಡಿ, ‘ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ಸರ್ಕಾರ ಮುಸ್ಲಿಂ ತುಷ್ಟೀಕರಣದಲ್ಲಿ ತೊಡಗಿದೆ. ಅವರು ಸಿದ್ದರಾಮಯ್ಯ ಅಲ್ಲ ಸಿದ್ರಾಮುಲ್ಲ ಖಾನ್’ ಎಂದರು.</p>.<p>‘ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆಯದೆ ಹನುಮಧ್ವಜ ಹಾರಿಸುವುದರ ಜೊತೆಗೆ ವೀರ ಸಾವರ್ಕರ್ ಹೆಸರಿನಲ್ಲಿ ನಾಮಫಲಕ ಅಳವಡಿಸಿದ್ದಾರೆ. ಇದನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಅವರ ನಿರ್ದೇಶನ ಪಾಲಿಸಲಾಗುವುದು’ ಎಂದು ಹೆಬಳೆ ಗ್ರಾಮ ಪಂಚಾಯಿತಿ ಪಿಡಿಒ ಮಂಜುನಾಥ ಗೊಂಡ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>