<p><strong>ಶಿರಸಿ</strong>: ಜಾನುವಾರುಗಳು ರೈತರ ಬದುಕಿಗೆ ಅನಿವಾರ್ಯ ಎಂಬುದನ್ನು ಅರಿತ ಸರ್ಕಾರ ಮಾರಕ ಕಾಲು ಮತ್ತು ಬಾಯಿ ರೋಗದ ನಿಯಂತ್ರಣಕ್ಕೆ ಮುಂದಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 7 ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಹಾಗೂ ದನಗಳಿಗೆ ಚರ್ಮಗಂಟು ರೋಗದ ಲಸಿಕಾ ಕಾರ್ಯಕ್ರಮಕ್ಕೆ ತಾಲ್ಲೂಕಿನ ತೆರಕನಹಳ್ಳಿಯಲ್ಲಿ ಶನಿವಾರ ಚಾಲನೆ ನೀಡಿ ಣವರು ಮಾತನಾಡಿದರು. ಏಪ್ರಿಲ್ 26 ರಿಂದ ಜೂನ್ 4 ರವರೆಗೆ ಬೆಳಿಗ್ಗೆ 7 ಗಂಟೆಯಿಂದ 10 ಗಂಟೆ ವರೆಗೆ ಪ್ರತಿ ಮನೆಗೆ ಭೇಟಿ ನೀಡಿ, ಎಫ್ಎಂಡಿ ಲಸಿಕೆ ನೀಡಲಾಗುತ್ತದೆ. ಚರ್ಮಗಂಟು ರೋಗ ನಿಯಂತ್ರಣದ ಎಲ್ಎಸ್ಡಿ ಲಸಿಕೆಯನ್ನೂ ನೀಡಲಾಗುತ್ತದೆ ಎಂದರು.</p>.<p>ಎಲ್ಲಾ ರೈತರು ತಮ್ಮ ತಮ್ಮ ಜಾನುವಾರುಗಳಿಗೆ ತಪ್ಪದೇ ಎರಡೂ ಲಸಿಕೆಗಳನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳುವುದು. ತಾಲೂಕಿನಲ್ಲಿ ಲಸಿಕೆದಾರರು ಎಲ್ಲಾ ಮನೆಗಳಿಗೆ ಭೇಟಿ ನೀಡಿ ಉಚಿತವಾಗಿ ಲಸಿಕೆ ಹಾಕಲಿದ್ದಾರೆ ಎಂದು ತಿಳಿಸಿದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ ಇತರರಿದ್ದರು.</p>.<p>ಇದೇ ರೀತಿ ಸ್ವರ್ಣವಲ್ಲಿ ಮಠದಲ್ಲಿ ಕಾಲು ಬಾಯಿ ರೋಗ ಲಸಿಕೆ ಹಾಗೂ ದನಗಳಿಗೆ ಚರ್ಮಗಂಟು ರೋಗದ ಲಸಿಕಾ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದ್ದು, ಕೆಎಂಎಫ್ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ</strong>: ಜಾನುವಾರುಗಳು ರೈತರ ಬದುಕಿಗೆ ಅನಿವಾರ್ಯ ಎಂಬುದನ್ನು ಅರಿತ ಸರ್ಕಾರ ಮಾರಕ ಕಾಲು ಮತ್ತು ಬಾಯಿ ರೋಗದ ನಿಯಂತ್ರಣಕ್ಕೆ ಮುಂದಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.</p>.<p>ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 7 ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಹಾಗೂ ದನಗಳಿಗೆ ಚರ್ಮಗಂಟು ರೋಗದ ಲಸಿಕಾ ಕಾರ್ಯಕ್ರಮಕ್ಕೆ ತಾಲ್ಲೂಕಿನ ತೆರಕನಹಳ್ಳಿಯಲ್ಲಿ ಶನಿವಾರ ಚಾಲನೆ ನೀಡಿ ಣವರು ಮಾತನಾಡಿದರು. ಏಪ್ರಿಲ್ 26 ರಿಂದ ಜೂನ್ 4 ರವರೆಗೆ ಬೆಳಿಗ್ಗೆ 7 ಗಂಟೆಯಿಂದ 10 ಗಂಟೆ ವರೆಗೆ ಪ್ರತಿ ಮನೆಗೆ ಭೇಟಿ ನೀಡಿ, ಎಫ್ಎಂಡಿ ಲಸಿಕೆ ನೀಡಲಾಗುತ್ತದೆ. ಚರ್ಮಗಂಟು ರೋಗ ನಿಯಂತ್ರಣದ ಎಲ್ಎಸ್ಡಿ ಲಸಿಕೆಯನ್ನೂ ನೀಡಲಾಗುತ್ತದೆ ಎಂದರು.</p>.<p>ಎಲ್ಲಾ ರೈತರು ತಮ್ಮ ತಮ್ಮ ಜಾನುವಾರುಗಳಿಗೆ ತಪ್ಪದೇ ಎರಡೂ ಲಸಿಕೆಗಳನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳುವುದು. ತಾಲೂಕಿನಲ್ಲಿ ಲಸಿಕೆದಾರರು ಎಲ್ಲಾ ಮನೆಗಳಿಗೆ ಭೇಟಿ ನೀಡಿ ಉಚಿತವಾಗಿ ಲಸಿಕೆ ಹಾಕಲಿದ್ದಾರೆ ಎಂದು ತಿಳಿಸಿದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ ಇತರರಿದ್ದರು.</p>.<p>ಇದೇ ರೀತಿ ಸ್ವರ್ಣವಲ್ಲಿ ಮಠದಲ್ಲಿ ಕಾಲು ಬಾಯಿ ರೋಗ ಲಸಿಕೆ ಹಾಗೂ ದನಗಳಿಗೆ ಚರ್ಮಗಂಟು ರೋಗದ ಲಸಿಕಾ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದ್ದು, ಕೆಎಂಎಫ್ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಚಾಲನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>