‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ವೈದ್ಯಾಧಿಕಾರಿ ಡಾ.ಜಗದೀಶ ನಾಯ್ಕ, ‘ಗೋವಾ, ಬೆಂಗಳೂರಿಗೆ ಹೋಗುವ ವಿದೇಶಿ ಪ್ರಜೆಗಳು ಗಂಟಲು ದ್ರವ ಪರೀಕ್ಷೆಗೆ ಆರೋಗ್ಯ ಕೇಂದ್ರಕ್ಕೆ ಬರುತ್ತಿದ್ದಾರೆ. ಅವರು ಲಸಿಕೆಯನ್ನೂ ನೀಡುವಂತೆ ಕೇಳುತ್ತಿದ್ದಾರೆ. ಒಂದು ವಾರದ ಅವಧಿಯಲ್ಲಿ 15ಕ್ಕೂ ಹೆಚ್ಚು ವಿದೇಶಿಗರು ಬಂದು ಕೇಳಿದ್ದಾರೆ. ಆದರೆ, ನಮಗೆ ಸರ್ಕಾರದಿಂದ ಯಾವುದೇ ನಿರ್ದಿಷ್ಟ ಆದೇಶ ಬಂದಿಲ್ಲ’ ಎಂದರು.