<p><strong>ಸಿದ್ದಾಪುರ:</strong> ತಾಲ್ಲೂಕಿನ ಬಿಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ದಿಢೀರ್ ಕಾರ್ಯಾಚರಣೆ ನಡೆಸಿದ್ದು, ರೈತರೊಬ್ಬರ ಸುಮಾರು 120ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದ ಘಟನೆ ಮಂಗಳವಾರ ನಡೆದಿದೆ.</p>.<p>ಕ್ಯಾದಗಿ ಅರಣ್ಯ ವಲಯದ ಬಿಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿಕೈ ನಿವಾಸಿ ಗಣೇಶ ವೆಂಕಟ್ರಮಣ ಹೆಗಡೆ ಎಂಬುವವರಿಗೆ ಸೇರಿದ ತೋಟದಲ್ಲಿ ಅರಣ್ಯ ಇಲಾಖೆ ಈ ತೆರವು ಕಾರ್ಯಾಚರಣೆ ನಡೆಸಿದೆ. ಸುಮಾರು 1980 ಕ್ಕಿಂತ ಮೊದಲಿನಿಂದಲೂ ಸಾಗುವಳಿ ಇದ್ದ ಅತಿಕ್ರಮಣ ಜಾಗದಲ್ಲಿ ಹಾಗೂ 30-35 ವರ್ಷಗಳಿಂದ ಪೋಷಿಸಿಕೊಂಡು ಬಂದಿದ್ದ ಅಡಿಕೆ ಮರಗಳನ್ನು ಕಡಿಯಲಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಮರ ಕಡಿಯುವ ಕಾರ್ಮಿಕರು 20 ರಿಂದ 25 ಮಂದಿ ಏಕಾಏಕಿ ಆಗಮಿಸಿ, ಫಲ ನೀಡುತ್ತಿದ್ದ ಸುಮಾರು 120ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕತ್ತರಿಸಿ ಹಾಕಿದ್ದಾರೆ.</p>.<p>ಈ ಜಮೀನಿನಲ್ಲಿ 1975ಕ್ಕೂ ಮೊದಲಿನಿಂದ, ಅಂದರೆ ತಮ್ಮ ಅಜ್ಜನ ಕಾಲದಿಂದಲೂ ಕೃಷಿ ಮಾಡಿಕೊಂಡು ಬರಲಾಗುತ್ತಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿದೆ. ಮೂರೂವರೆ ದಶಕಗಳಿಂದ ಅತ್ಯಂತ ಕಷ್ಟಪಟ್ಟು ಬೆಳೆಸಿದ್ದ, ಫಸಲು ನೀಡುತ್ತಿದ್ದ ಮರಗಳನ್ನು ಕಣ್ಣೆದುರೇ ಕಡಿದು ಹಾಕಿರುವುದು ರೈತ ಕುಟುಂಬವನ್ನು ಚಿಂತೆಗೀಡು ಮಾಡಿದೆ.</p>.<p>ಈ ಹಿಂದೆ ಅತಿಕ್ರಮಣ ತೆರವು ಗೊಳಿಸುವಂತೆ ನೋಟಿಸ್ ಕೂಡ ನೀಡಲಾಗಿತ್ತು ಎನ್ನಲಾಗಿದೆ. ಅರಣ್ಯ ಭೂಮಿ ಅತಿಕ್ರಮಣ ತೆರವು ಹೆಸರಿನಲ್ಲಿ ನಡೆದಿರುವ ಈ ಕಾರ್ಯಾಚರಣೆ ಬಗ್ಗೆ ಸ್ಥಳೀಯವಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ:</strong> ತಾಲ್ಲೂಕಿನ ಬಿಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ದಿಢೀರ್ ಕಾರ್ಯಾಚರಣೆ ನಡೆಸಿದ್ದು, ರೈತರೊಬ್ಬರ ಸುಮಾರು 120ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದ ಘಟನೆ ಮಂಗಳವಾರ ನಡೆದಿದೆ.</p>.<p>ಕ್ಯಾದಗಿ ಅರಣ್ಯ ವಲಯದ ಬಿಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿಕೈ ನಿವಾಸಿ ಗಣೇಶ ವೆಂಕಟ್ರಮಣ ಹೆಗಡೆ ಎಂಬುವವರಿಗೆ ಸೇರಿದ ತೋಟದಲ್ಲಿ ಅರಣ್ಯ ಇಲಾಖೆ ಈ ತೆರವು ಕಾರ್ಯಾಚರಣೆ ನಡೆಸಿದೆ. ಸುಮಾರು 1980 ಕ್ಕಿಂತ ಮೊದಲಿನಿಂದಲೂ ಸಾಗುವಳಿ ಇದ್ದ ಅತಿಕ್ರಮಣ ಜಾಗದಲ್ಲಿ ಹಾಗೂ 30-35 ವರ್ಷಗಳಿಂದ ಪೋಷಿಸಿಕೊಂಡು ಬಂದಿದ್ದ ಅಡಿಕೆ ಮರಗಳನ್ನು ಕಡಿಯಲಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಮರ ಕಡಿಯುವ ಕಾರ್ಮಿಕರು 20 ರಿಂದ 25 ಮಂದಿ ಏಕಾಏಕಿ ಆಗಮಿಸಿ, ಫಲ ನೀಡುತ್ತಿದ್ದ ಸುಮಾರು 120ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕತ್ತರಿಸಿ ಹಾಕಿದ್ದಾರೆ.</p>.<p>ಈ ಜಮೀನಿನಲ್ಲಿ 1975ಕ್ಕೂ ಮೊದಲಿನಿಂದ, ಅಂದರೆ ತಮ್ಮ ಅಜ್ಜನ ಕಾಲದಿಂದಲೂ ಕೃಷಿ ಮಾಡಿಕೊಂಡು ಬರಲಾಗುತ್ತಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿದೆ. ಮೂರೂವರೆ ದಶಕಗಳಿಂದ ಅತ್ಯಂತ ಕಷ್ಟಪಟ್ಟು ಬೆಳೆಸಿದ್ದ, ಫಸಲು ನೀಡುತ್ತಿದ್ದ ಮರಗಳನ್ನು ಕಣ್ಣೆದುರೇ ಕಡಿದು ಹಾಕಿರುವುದು ರೈತ ಕುಟುಂಬವನ್ನು ಚಿಂತೆಗೀಡು ಮಾಡಿದೆ.</p>.<p>ಈ ಹಿಂದೆ ಅತಿಕ್ರಮಣ ತೆರವು ಗೊಳಿಸುವಂತೆ ನೋಟಿಸ್ ಕೂಡ ನೀಡಲಾಗಿತ್ತು ಎನ್ನಲಾಗಿದೆ. ಅರಣ್ಯ ಭೂಮಿ ಅತಿಕ್ರಮಣ ತೆರವು ಹೆಸರಿನಲ್ಲಿ ನಡೆದಿರುವ ಈ ಕಾರ್ಯಾಚರಣೆ ಬಗ್ಗೆ ಸ್ಥಳೀಯವಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>