<p><strong>ಕಾರವಾರ:</strong> ‘ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಹಕ್ಕುಪತ್ರ ಒದಗಿಸಲು ಉನ್ನತಮಟ್ಟದ ಸಭೆ ನಡೆಸಲು ಸರ್ಕಾರ ನಿರ್ಧರಿಸಬೇಕು’ ಎಂದು ಒತ್ತಾಯಿಸಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ನೇತೃತ್ವದಲ್ಲಿ ಶನಿವಾರ ಸಮಾವೇಶ ನಡೆಯಿತು.</p>.<p>‘ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲದ ಚಳಿಗಾಲ ಅಧಿವೇಶನದಲ್ಲಿ ಈ ಕುರಿತು ಚರ್ಚೆಯಾಗಬೇಕು’ ಎಂದು ಆಗ್ರಹಿಸಲಾಯಿತು. </p>.<p>ಸಾವಿರಾರು ಜನರು ನಗರದ ಮುಖ್ಯರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಬುಡಕಟ್ಟು ಸಮುದಾಯಗಳ ಜನರು, ಅರಣ್ಯವಾಸಿಗಳು ಪಾಲ್ಗೊಂಡಿದ್ದರು. ಇಲ್ಲಿನ ಮಾಲಾದೇವಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ 6 ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು.</p>.<p>ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಮಾತನಾಡಿ, ‘ಗದಗನಲ್ಲಿ ಎಚ್.ಕೆ.ಪಾಟೀಲ, ಉತ್ತರ ಕನ್ನಡದಲ್ಲಿ ಆರ್.ವಿ.ದೇಶಪಾಂಡೆ ಈ ಹಿಂದೆ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದ ಕೆಲ ಕುಟುಂಬಗಳಿಗೆ ಹಕ್ಕುಪತ್ರ ಕೊಡಿಸಿದ್ದರು. ಅದೇ ಮಾದರಿ ಅನುಸರಿಸಿ ಹಕ್ಕುಪತ್ರ ಒದಗಿಸಲು ಸರ್ಕಾರ ನಿರ್ಣಯಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಹಕ್ಕುಪತ್ರ ಒದಗಿಸಲು ಉನ್ನತಮಟ್ಟದ ಸಭೆ ನಡೆಸಲು ಸರ್ಕಾರ ನಿರ್ಧರಿಸಬೇಕು’ ಎಂದು ಒತ್ತಾಯಿಸಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ನೇತೃತ್ವದಲ್ಲಿ ಶನಿವಾರ ಸಮಾವೇಶ ನಡೆಯಿತು.</p>.<p>‘ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲದ ಚಳಿಗಾಲ ಅಧಿವೇಶನದಲ್ಲಿ ಈ ಕುರಿತು ಚರ್ಚೆಯಾಗಬೇಕು’ ಎಂದು ಆಗ್ರಹಿಸಲಾಯಿತು. </p>.<p>ಸಾವಿರಾರು ಜನರು ನಗರದ ಮುಖ್ಯರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಬುಡಕಟ್ಟು ಸಮುದಾಯಗಳ ಜನರು, ಅರಣ್ಯವಾಸಿಗಳು ಪಾಲ್ಗೊಂಡಿದ್ದರು. ಇಲ್ಲಿನ ಮಾಲಾದೇವಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ 6 ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು.</p>.<p>ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಮಾತನಾಡಿ, ‘ಗದಗನಲ್ಲಿ ಎಚ್.ಕೆ.ಪಾಟೀಲ, ಉತ್ತರ ಕನ್ನಡದಲ್ಲಿ ಆರ್.ವಿ.ದೇಶಪಾಂಡೆ ಈ ಹಿಂದೆ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದ ಕೆಲ ಕುಟುಂಬಗಳಿಗೆ ಹಕ್ಕುಪತ್ರ ಕೊಡಿಸಿದ್ದರು. ಅದೇ ಮಾದರಿ ಅನುಸರಿಸಿ ಹಕ್ಕುಪತ್ರ ಒದಗಿಸಲು ಸರ್ಕಾರ ನಿರ್ಣಯಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>