<p><strong>ದಾಂಡೇಲಿ</strong>: ಗಿಡವನ್ನು ನೆಟ್ಟರೆ ಸಾಲದು, ಅದರ ಸಂರಕ್ಷಣೆಯ ಜವಾಬ್ದಾರಿಯನ್ನು ಹೊರಬೇಕು. ದಿನೇ ದಿನೇ ಪರಿಸರದ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಜೀವ ಸಂಕುಲದ ಉಳಿವು ಜರೂರಾಗಿ ಆಗಬೇಕಿದೆ’ ಎಂದು ದಾಂಡೇಲಿ ಉಪ ವಲಯ ಅರಣ್ಯಾಧಿಕಾರಿ ಸಂದೀಪ್ ನಾಯಕ ಹೇಳಿದರು.</p>.<p>ಹಳೇ ದಾಂಡೇಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>‘ಅರಣ್ಯ ಇಲಾಖೆ ಪ್ರತಿ ವರ್ಷ ಅರಣ್ಯ ರಕ್ಷಣೆ ಹಾಗೂ ಅರಣ್ಯ ಬೆಳೆಸಲು ತನ್ನ ಶಕ್ತಿ ಮೀರಿ ಕೆಲಸ ಮಾಡುತ್ತಿದೆ. ಇಂತಹ ಕೆಲಸಗಳಿಗೆ ಸಾರ್ವಜನಿಕರ ಸಹಭಾಗಿತ್ವವು ಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಪರಿಸರ ಪ್ರಜ್ಞೆ ಬೆಳೆದಷ್ಟು ಪರಿಸರ ಸಂರಕ್ಷಣೆಯಲ್ಲಿ ತೊಡಗಿಕೊಳ್ಳಬೇಕು’ ಎಂದರು.</p>.<p>ರಸಾಯನಶಾಸ್ತ್ರ ವಿಷಯದ ಉಪನ್ಯಾಸಕಿ ಪೂರ್ಣಿಮಾ ಬೆಳವಡಿ ಪ್ಲಾಸ್ಟಿಕ್ ಬಳಕೆಯಿಂದಾಗಿ ಪರಿಸರ ಮೇಲೆ ಆಗುತ್ತಿರುವ ದುಷ್ಪರಿಣಾಮ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ಕಾಲೇಜಿನ ಪ್ರಾಚಾರ್ಯೆ ನಾಗರೇಖಾ ಗಾಂವ್ಕರ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಪರಿಸರದ ಮೇಲೆ ಮಾನವ ಕುಕೃತ್ಯದಿಂದಾಗುವ ದುಷ್ಪರಿಣಾಮ ಬಗ್ಗೆ ತಿಳಿ ಹೇಳಿದರು.</p>.<p>ಈ ಸಂದರ್ಭದಲ್ಲಿ ನಗರಸಭೆ ಸದಸ್ಯೆ ಸಪೂರಾಬಿ ಯರಗಟ್ಟಿ, ಉಪನ್ಯಾಸಕರಾದ ಸುಮಂಗಲಾ ನಾಯಕ, ಮಂಜುಳಾ ಭಾವಿಕಟ್ಟಿ, ಅನುಷಾ ಅಂಕೋಲೆಕರ, ವಿದ್ಯಾ ಉಪ್ಪಾರ, ಉಷಾ ಸರಗಾಂವಕರ, ಅರಣ್ಯ ವೀಕ್ಷಕರಾದ ಚಂದ್ರಕಾಂತ ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಂಡೇಲಿ</strong>: ಗಿಡವನ್ನು ನೆಟ್ಟರೆ ಸಾಲದು, ಅದರ ಸಂರಕ್ಷಣೆಯ ಜವಾಬ್ದಾರಿಯನ್ನು ಹೊರಬೇಕು. ದಿನೇ ದಿನೇ ಪರಿಸರದ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಜೀವ ಸಂಕುಲದ ಉಳಿವು ಜರೂರಾಗಿ ಆಗಬೇಕಿದೆ’ ಎಂದು ದಾಂಡೇಲಿ ಉಪ ವಲಯ ಅರಣ್ಯಾಧಿಕಾರಿ ಸಂದೀಪ್ ನಾಯಕ ಹೇಳಿದರು.</p>.<p>ಹಳೇ ದಾಂಡೇಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>‘ಅರಣ್ಯ ಇಲಾಖೆ ಪ್ರತಿ ವರ್ಷ ಅರಣ್ಯ ರಕ್ಷಣೆ ಹಾಗೂ ಅರಣ್ಯ ಬೆಳೆಸಲು ತನ್ನ ಶಕ್ತಿ ಮೀರಿ ಕೆಲಸ ಮಾಡುತ್ತಿದೆ. ಇಂತಹ ಕೆಲಸಗಳಿಗೆ ಸಾರ್ವಜನಿಕರ ಸಹಭಾಗಿತ್ವವು ಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಪರಿಸರ ಪ್ರಜ್ಞೆ ಬೆಳೆದಷ್ಟು ಪರಿಸರ ಸಂರಕ್ಷಣೆಯಲ್ಲಿ ತೊಡಗಿಕೊಳ್ಳಬೇಕು’ ಎಂದರು.</p>.<p>ರಸಾಯನಶಾಸ್ತ್ರ ವಿಷಯದ ಉಪನ್ಯಾಸಕಿ ಪೂರ್ಣಿಮಾ ಬೆಳವಡಿ ಪ್ಲಾಸ್ಟಿಕ್ ಬಳಕೆಯಿಂದಾಗಿ ಪರಿಸರ ಮೇಲೆ ಆಗುತ್ತಿರುವ ದುಷ್ಪರಿಣಾಮ ಕುರಿತು ವಿಶೇಷ ಉಪನ್ಯಾಸ ನೀಡಿದರು.</p>.<p>ಕಾಲೇಜಿನ ಪ್ರಾಚಾರ್ಯೆ ನಾಗರೇಖಾ ಗಾಂವ್ಕರ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಪರಿಸರದ ಮೇಲೆ ಮಾನವ ಕುಕೃತ್ಯದಿಂದಾಗುವ ದುಷ್ಪರಿಣಾಮ ಬಗ್ಗೆ ತಿಳಿ ಹೇಳಿದರು.</p>.<p>ಈ ಸಂದರ್ಭದಲ್ಲಿ ನಗರಸಭೆ ಸದಸ್ಯೆ ಸಪೂರಾಬಿ ಯರಗಟ್ಟಿ, ಉಪನ್ಯಾಸಕರಾದ ಸುಮಂಗಲಾ ನಾಯಕ, ಮಂಜುಳಾ ಭಾವಿಕಟ್ಟಿ, ಅನುಷಾ ಅಂಕೋಲೆಕರ, ವಿದ್ಯಾ ಉಪ್ಪಾರ, ಉಷಾ ಸರಗಾಂವಕರ, ಅರಣ್ಯ ವೀಕ್ಷಕರಾದ ಚಂದ್ರಕಾಂತ ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>