<p><strong>ಕಾರವಾರ</strong>: ‘ಅರಣ್ಯವಾಸಿಗಳ ಅರ್ಜಿಯನ್ನು ಪುನರ್ ಪರಿಶೀಲಿಸದೆ, ತಿರಸ್ಕರಿಸಿದ್ದರ ವಿರುದ್ಧ ಮೇಲ್ಮನವಿ ಸಲ್ಲಿಸಲು ಅ.4ರಂದು ಶಿರಸಿಯಲ್ಲಿ ಅಭಿಯಾನ ಆರಂಭಿಸಲಿದ್ದೇವೆ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.</p>.<p>‘ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ಮುನ್ನ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಂಬಂಧಿಸಿದ ಇಲಾಖೆಯ ಸಚಿವರ ಗಮನಕ್ಕೂ ತಂದಿಲ್ಲ’ ಎಂದೂ ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಅರ್ಜಿ ಪುನರ್ ಪರಿಶೀಲಿಸಬೇಕೆಂಬ ಅರಣ್ಯ ಹಕ್ಕು ಕಾಯ್ದೆ ನಿಯಮವನ್ನು ಅನುಸರಿಸಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನ ಮತ್ತು ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಿಲ್ಲ. ವರದಿ ಪ್ರಕಾರ, ರಾಜ್ಯದಲ್ಲಿ 2,53,269 ಅರಣ್ಯವಾಸಿಗಳ ಅರ್ಜಿ ತಿರಸ್ಕರಿಸಲಾಗಿದೆ’ ಎಂದರು.</p>.<p>‘ರಾಜ್ಯದಲ್ಲಿ ಒಟ್ಟು ಅರ್ಜಿಗಳಲ್ಲಿ ಶೇ 87.77 ಅರಣ್ಯವಾಸಿಗಳ ಅರ್ಜಿಗಳು ತಿರಸ್ಕೃತವಾಗಿವೆ. ಶೇ 3.2ರಷ್ಟು ಅರ್ಜಿದಾರರಿಗಷ್ಟೇ ಸಾಗುವಳಿ ಹಕ್ಕು ಸಿಕ್ಕಿದೆ. ಅರ್ಜಿ ತಿರಸ್ಕಾರದ ವಿರುದ್ಧ ಕಾನೂನಾತ್ಮಕ ಹೋರಾಟವೂ ನಡೆಯಲಿದೆ’ ಎಂದರು.</p>.<div><blockquote>ಅ.14 ರಂದು ಅರಣ್ಯವಾಸಿಗಳ ಭವಿಷ್ಯದ ಕುರಿತ ಪ್ರಕರಣದ ಅಂತಿಮ ಹಂತದ ವಿಚಾರಣೆ ನಡೆಯಲಿದೆ. ಹೀಗಾಗಿ ರಾಜ್ಯವ್ಯಾಪಿ ಆಂದೋಲನ ನಡೆಸಲಾಗುತ್ತಿದೆ </blockquote><span class="attribution">– ರವೀಂದ್ರ ನಾಯ್ಕ, ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ‘ಅರಣ್ಯವಾಸಿಗಳ ಅರ್ಜಿಯನ್ನು ಪುನರ್ ಪರಿಶೀಲಿಸದೆ, ತಿರಸ್ಕರಿಸಿದ್ದರ ವಿರುದ್ಧ ಮೇಲ್ಮನವಿ ಸಲ್ಲಿಸಲು ಅ.4ರಂದು ಶಿರಸಿಯಲ್ಲಿ ಅಭಿಯಾನ ಆರಂಭಿಸಲಿದ್ದೇವೆ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.</p>.<p>‘ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ಮುನ್ನ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಂಬಂಧಿಸಿದ ಇಲಾಖೆಯ ಸಚಿವರ ಗಮನಕ್ಕೂ ತಂದಿಲ್ಲ’ ಎಂದೂ ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಅರ್ಜಿ ಪುನರ್ ಪರಿಶೀಲಿಸಬೇಕೆಂಬ ಅರಣ್ಯ ಹಕ್ಕು ಕಾಯ್ದೆ ನಿಯಮವನ್ನು ಅನುಸರಿಸಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನ ಮತ್ತು ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲಿಸಿಲ್ಲ. ವರದಿ ಪ್ರಕಾರ, ರಾಜ್ಯದಲ್ಲಿ 2,53,269 ಅರಣ್ಯವಾಸಿಗಳ ಅರ್ಜಿ ತಿರಸ್ಕರಿಸಲಾಗಿದೆ’ ಎಂದರು.</p>.<p>‘ರಾಜ್ಯದಲ್ಲಿ ಒಟ್ಟು ಅರ್ಜಿಗಳಲ್ಲಿ ಶೇ 87.77 ಅರಣ್ಯವಾಸಿಗಳ ಅರ್ಜಿಗಳು ತಿರಸ್ಕೃತವಾಗಿವೆ. ಶೇ 3.2ರಷ್ಟು ಅರ್ಜಿದಾರರಿಗಷ್ಟೇ ಸಾಗುವಳಿ ಹಕ್ಕು ಸಿಕ್ಕಿದೆ. ಅರ್ಜಿ ತಿರಸ್ಕಾರದ ವಿರುದ್ಧ ಕಾನೂನಾತ್ಮಕ ಹೋರಾಟವೂ ನಡೆಯಲಿದೆ’ ಎಂದರು.</p>.<div><blockquote>ಅ.14 ರಂದು ಅರಣ್ಯವಾಸಿಗಳ ಭವಿಷ್ಯದ ಕುರಿತ ಪ್ರಕರಣದ ಅಂತಿಮ ಹಂತದ ವಿಚಾರಣೆ ನಡೆಯಲಿದೆ. ಹೀಗಾಗಿ ರಾಜ್ಯವ್ಯಾಪಿ ಆಂದೋಲನ ನಡೆಸಲಾಗುತ್ತಿದೆ </blockquote><span class="attribution">– ರವೀಂದ್ರ ನಾಯ್ಕ, ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>