<p><strong>ಕಾರವಾರ:</strong> ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲಿಸದೆ ತಿರಸ್ಕರಿಸಿದ ಪ್ರಕ್ರಿಯೆ ವಿರುದ್ಧ ಮೇಲ್ಮನವಿ ಸಲ್ಲಿಸುವ ಅಭಿಯಾನವನ್ನು ಅ.4 ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.</p><p>ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ಮುನ್ನ ಮುಖ್ಯ ಕಾರ್ಯದರ್ಶಿ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಬಂಧಿಸಿದ ಸಚಿವರ ಗಮನಕ್ಕೆ ತಂದಿಲ್ಲ ಎಂದು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಆರೋಪಿಸಿದರು.</p><p>ಅರಣ್ಯವಾಸಿಗಳು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಮಟ್ಟದ ಅರಣ್ಯ ಹಕ್ಕು ಉಸ್ತುವಾರಿ ಸಮಿತಿಗೆ ಕಾನೂನಾತ್ಮಕ ಆಕ್ಷೇಪಣಾ ಪತ್ರದ ಮೇಲ್ಮನವಿಯನ್ನು ಸಲ್ಲಿಸುವ ಅಭಿಯಾನಕ್ಕೆ ಅಂದು ಶಿರಸಿಯ ವೇದಿಕೆ ಕಚೇರಿಯಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.</p><p>ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಆರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲಿಸಬೇಕೆಂಬ ನಿಯಮ ಅನುಸರಿಸಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಮತ್ತು ಕೇಂದ್ರ ಸರ್ಕಾರದ ಮಾರ್ಗದರ್ಶನ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದರು.</p><p>ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ರಾಜ್ಯದಲ್ಲಿ 2,53,269 ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲಿಸದೇ ತಿರಸ್ಕರಿಸಿದೆ ಎಂದು ಉಲ್ಲೇಖಿಸಿದ್ದಾರೆ ಎಂದರು. </p><p>ಉತ್ತರ ಕನ್ನಡ ಜಿಲ್ಲೆಯಲ್ಲಿ 73,206 ಅರ್ಜಿ ತಿರಸ್ಕರಿಸಿದ ಅಂಶ ಪ್ರಸ್ತಾಪಿಸಲಾಗಿದೆ. ಪುನರ್ ಪರಿಶೀಲಿಸದೆ, ಕಾನೂನು ಬಾಹಿರವಾಗಿ ಅರ್ಜಿ ತಿರಸ್ಕರಿಸಿರುವ ಹಿನ್ನಲೆಯಲ್ಲಿ ಆದೇಶಕ್ಕೆ ರಾಜ್ಯಾದ್ಯಂತ ಅರಣ್ಯವಾಸಿಗಳಿಂದ ರಾಜ್ಯ ಸರ್ಕಾರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದರು.</p><p>ಆಕ್ಷೇಪಣಾ ಪತ್ರದಲ್ಲಿ ರಾಜ್ಯದಲ್ಲಿ ಒಟ್ಟು ಅರ್ಜಿಗಳಲ್ಲಿ ಶೇ 87.77 ಅರಣ್ಯವಾಸಿಗಳ ಅರ್ಜಿಗಳು ತಿರಸ್ಕೃತವಾಗಿವೆ. ಕೇವಲ ಶೇ 3.2 ರಷ್ಟು ಅರ್ಜಿಗಳಿಗೆ ಸಾಗುವಳಿ ಹಕ್ಕು ಸಿಕ್ಕಿದೆ ಎಂದರು.</p><p>ಅರಣ್ಯ ಭೂಮಿ ಹಕ್ಕಿಗಾಗಿ ಅರಣ್ಯವಾಸಿಗಳು ಸುಪ್ರಿಂ ಕೋರ್ಟ್ ನಲ್ಲಿ ಪುನರ್ ಪರಿಶೀಲಿಸದೇ, ತಿರಸ್ಕರಿಸಿರುವ ಕುರಿತು ನ್ಯಾಯಾಂಗ ನಿಂದನೆ ಅರ್ಜಿ ಮೂಲಕ ಕಾನೂನಾತ್ಮಕ ಹೋರಾಟವನ್ನ ಮುಂದುವರೆಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲಿಸದೆ ತಿರಸ್ಕರಿಸಿದ ಪ್ರಕ್ರಿಯೆ ವಿರುದ್ಧ ಮೇಲ್ಮನವಿ ಸಲ್ಲಿಸುವ ಅಭಿಯಾನವನ್ನು ಅ.4 ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.</p><p>ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವ ಮುನ್ನ ಮುಖ್ಯ ಕಾರ್ಯದರ್ಶಿ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಬಂಧಿಸಿದ ಸಚಿವರ ಗಮನಕ್ಕೆ ತಂದಿಲ್ಲ ಎಂದು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಆರೋಪಿಸಿದರು.</p><p>ಅರಣ್ಯವಾಸಿಗಳು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಮಟ್ಟದ ಅರಣ್ಯ ಹಕ್ಕು ಉಸ್ತುವಾರಿ ಸಮಿತಿಗೆ ಕಾನೂನಾತ್ಮಕ ಆಕ್ಷೇಪಣಾ ಪತ್ರದ ಮೇಲ್ಮನವಿಯನ್ನು ಸಲ್ಲಿಸುವ ಅಭಿಯಾನಕ್ಕೆ ಅಂದು ಶಿರಸಿಯ ವೇದಿಕೆ ಕಚೇರಿಯಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.</p><p>ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಆರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲಿಸಬೇಕೆಂಬ ನಿಯಮ ಅನುಸರಿಸಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಮತ್ತು ಕೇಂದ್ರ ಸರ್ಕಾರದ ಮಾರ್ಗದರ್ಶನ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದರು.</p><p>ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ರಾಜ್ಯದಲ್ಲಿ 2,53,269 ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲಿಸದೇ ತಿರಸ್ಕರಿಸಿದೆ ಎಂದು ಉಲ್ಲೇಖಿಸಿದ್ದಾರೆ ಎಂದರು. </p><p>ಉತ್ತರ ಕನ್ನಡ ಜಿಲ್ಲೆಯಲ್ಲಿ 73,206 ಅರ್ಜಿ ತಿರಸ್ಕರಿಸಿದ ಅಂಶ ಪ್ರಸ್ತಾಪಿಸಲಾಗಿದೆ. ಪುನರ್ ಪರಿಶೀಲಿಸದೆ, ಕಾನೂನು ಬಾಹಿರವಾಗಿ ಅರ್ಜಿ ತಿರಸ್ಕರಿಸಿರುವ ಹಿನ್ನಲೆಯಲ್ಲಿ ಆದೇಶಕ್ಕೆ ರಾಜ್ಯಾದ್ಯಂತ ಅರಣ್ಯವಾಸಿಗಳಿಂದ ರಾಜ್ಯ ಸರ್ಕಾರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದರು.</p><p>ಆಕ್ಷೇಪಣಾ ಪತ್ರದಲ್ಲಿ ರಾಜ್ಯದಲ್ಲಿ ಒಟ್ಟು ಅರ್ಜಿಗಳಲ್ಲಿ ಶೇ 87.77 ಅರಣ್ಯವಾಸಿಗಳ ಅರ್ಜಿಗಳು ತಿರಸ್ಕೃತವಾಗಿವೆ. ಕೇವಲ ಶೇ 3.2 ರಷ್ಟು ಅರ್ಜಿಗಳಿಗೆ ಸಾಗುವಳಿ ಹಕ್ಕು ಸಿಕ್ಕಿದೆ ಎಂದರು.</p><p>ಅರಣ್ಯ ಭೂಮಿ ಹಕ್ಕಿಗಾಗಿ ಅರಣ್ಯವಾಸಿಗಳು ಸುಪ್ರಿಂ ಕೋರ್ಟ್ ನಲ್ಲಿ ಪುನರ್ ಪರಿಶೀಲಿಸದೇ, ತಿರಸ್ಕರಿಸಿರುವ ಕುರಿತು ನ್ಯಾಯಾಂಗ ನಿಂದನೆ ಅರ್ಜಿ ಮೂಲಕ ಕಾನೂನಾತ್ಮಕ ಹೋರಾಟವನ್ನ ಮುಂದುವರೆಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>