<p><strong>ಅಂಕೋಲಾ</strong>: ತಾಲ್ಲೂಕಿನ ಮಾಸ್ತಿಕಟ್ಟೆ ಬಳಿ ಜಿಂಕೆಯ ತಲೆ ಬುರುಡೆ ಮತ್ತು ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ಕಲ್ಲೇಶ್ವರದ ವಂಡರ ಮನೆಯ ಸೂರಜ್ ಶ್ರೀಧರ ಭಂಡಾರಿ (32), ಸಂದೀಪ ದಯಾನಂದ ಭಂಡಾರಿ (25), ಕನಕನಳ್ಳಿಯ ಪ್ರಸಾದ ರಾಮ ದೇಸಾಯಿ (23) ಮತ್ತು ಹಳಿಯಾಳ ಜನಗಾದ ಶೌಕತ್ ಸಾಬ್ ಹುಸೇನ್ ಸಾಬ್ ಮುಜಾವರ(27) ಬಂಧಿತ ಆರೋಪಿಗಳು.</p>.<p>ಜಿಂಕೆಯ ತಲೆ ಬುರುಡೆ ಸಹಿತ ಇರುವ ಕೊಂಬುಗಳು ಮೂರು ವರ್ಷಗಳ ಹಿಂದೆ ಇಲ್ಲಿನ ರಾಮನಗುಳಿ ಅರಣ್ಯ ವ್ಯಾಪ್ತಿಯಲ್ಲಿ ಸಿಕ್ಕಿತ್ತು. ಅವುಗಳನ್ನು ಗೋಣಿಚೀಲದಲ್ಲಿ ಹಾಕಿಕೊಂಡು ಮಾರಾಟಕ್ಕೆ ತಂದಿದ್ದರು. ಕೃತ್ಯಕ್ಕೆ ಬಳಸಿದ ಎರ್ಟಿಗಾ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.</p>.<p>ಅಂಕೋಲಾ ಠಾಣೆಯ ಪಿ.ಎಸ್.ಐ ಪ್ರೇಮನಗೌಡ ಪಾಟೀಲ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ</strong>: ತಾಲ್ಲೂಕಿನ ಮಾಸ್ತಿಕಟ್ಟೆ ಬಳಿ ಜಿಂಕೆಯ ತಲೆ ಬುರುಡೆ ಮತ್ತು ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ಕಲ್ಲೇಶ್ವರದ ವಂಡರ ಮನೆಯ ಸೂರಜ್ ಶ್ರೀಧರ ಭಂಡಾರಿ (32), ಸಂದೀಪ ದಯಾನಂದ ಭಂಡಾರಿ (25), ಕನಕನಳ್ಳಿಯ ಪ್ರಸಾದ ರಾಮ ದೇಸಾಯಿ (23) ಮತ್ತು ಹಳಿಯಾಳ ಜನಗಾದ ಶೌಕತ್ ಸಾಬ್ ಹುಸೇನ್ ಸಾಬ್ ಮುಜಾವರ(27) ಬಂಧಿತ ಆರೋಪಿಗಳು.</p>.<p>ಜಿಂಕೆಯ ತಲೆ ಬುರುಡೆ ಸಹಿತ ಇರುವ ಕೊಂಬುಗಳು ಮೂರು ವರ್ಷಗಳ ಹಿಂದೆ ಇಲ್ಲಿನ ರಾಮನಗುಳಿ ಅರಣ್ಯ ವ್ಯಾಪ್ತಿಯಲ್ಲಿ ಸಿಕ್ಕಿತ್ತು. ಅವುಗಳನ್ನು ಗೋಣಿಚೀಲದಲ್ಲಿ ಹಾಕಿಕೊಂಡು ಮಾರಾಟಕ್ಕೆ ತಂದಿದ್ದರು. ಕೃತ್ಯಕ್ಕೆ ಬಳಸಿದ ಎರ್ಟಿಗಾ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.</p>.<p>ಅಂಕೋಲಾ ಠಾಣೆಯ ಪಿ.ಎಸ್.ಐ ಪ್ರೇಮನಗೌಡ ಪಾಟೀಲ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>