<p><strong>ಯಲ್ಲಾಪುರ</strong>: ತಾಲ್ಲೂಕಿನ ಕಿರವತ್ತಿ ಬಳಿ ಗುರುವಾರ ಸಂಜೆ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತವಾಗಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಹೊಸಳ್ಳಿ – ಗಾಂವಠಾಣಾಕ್ಕೆ ಹೋಗುವ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಅಪಘಾತ ನಡೆದಿದೆ. ಅಂಕೋಲಾ ಕಡೆಗೆ ತೆರಳುತ್ತಿದ್ದ ದೆಹಲಿ ನೋಂದಣಿ ಸಂಖ್ಯೆ ಹೊಂದಿದ್ದ ಕಾರು ಹಾಗೂ ಹುಬ್ಬಳ್ಳಿಯತ್ತ ಸಾಗುತ್ತಿದ್ದ ಮಹಾರಾಷ್ಟ್ರ ನೋಂದಣಿಯ ಲಾರಿ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತವಾಗಿದೆ.</p>.<p>ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಮೃತಪಟ್ಟವರು. ಕಾರು ಪುಷ್ಪಾ ನಾಯರ್ ಎಂಬುವವರ ಹೆಸರಿನಲ್ಲಿ ನೋಂದಣಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭಿಸಿದೆ. ಹೀಗಾಗಿ ಕಾರು ಕೇರಳಕ್ಕೆ ತೆರಳುತ್ತಿತ್ತು ಎಂದು ಶಂಕಿಸಲಾಗಿದೆ.<br />ಪೋಲಿಸರು ಸ್ಥಳಕ್ಕೆ ತೆರಳಿದ್ದು, ತನಿಖೆ ಕೈಗೊಂಡಿದ್ದಾರೆ.</p>.<p>ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಕ್ಕೆ ಯಲ್ಲಾಪುರದಿಂದ ತೆರಳುತ್ತಿದ್ದ ಕ್ರೇನ್ ಕೂಡ ಅಪಘಾತಕ್ಕೀಡಾಗಿದೆ. ಮಾವಳ್ಳಿ ಕ್ರಾಸ್ ಬಳಿ ಬೀಡಾಡಿ ದನಗಳು ಅಡ್ಡ ಬಂದು ಕ್ರೇನ್ ಪಲ್ಟಿಯಾಗಿದೆ. ಅದರ ಚಾಲಕನ ಕೈಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲ್ಲಾಪುರ</strong>: ತಾಲ್ಲೂಕಿನ ಕಿರವತ್ತಿ ಬಳಿ ಗುರುವಾರ ಸಂಜೆ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತವಾಗಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಹೊಸಳ್ಳಿ – ಗಾಂವಠಾಣಾಕ್ಕೆ ಹೋಗುವ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಅಪಘಾತ ನಡೆದಿದೆ. ಅಂಕೋಲಾ ಕಡೆಗೆ ತೆರಳುತ್ತಿದ್ದ ದೆಹಲಿ ನೋಂದಣಿ ಸಂಖ್ಯೆ ಹೊಂದಿದ್ದ ಕಾರು ಹಾಗೂ ಹುಬ್ಬಳ್ಳಿಯತ್ತ ಸಾಗುತ್ತಿದ್ದ ಮಹಾರಾಷ್ಟ್ರ ನೋಂದಣಿಯ ಲಾರಿ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತವಾಗಿದೆ.</p>.<p>ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಮೃತಪಟ್ಟವರು. ಕಾರು ಪುಷ್ಪಾ ನಾಯರ್ ಎಂಬುವವರ ಹೆಸರಿನಲ್ಲಿ ನೋಂದಣಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭಿಸಿದೆ. ಹೀಗಾಗಿ ಕಾರು ಕೇರಳಕ್ಕೆ ತೆರಳುತ್ತಿತ್ತು ಎಂದು ಶಂಕಿಸಲಾಗಿದೆ.<br />ಪೋಲಿಸರು ಸ್ಥಳಕ್ಕೆ ತೆರಳಿದ್ದು, ತನಿಖೆ ಕೈಗೊಂಡಿದ್ದಾರೆ.</p>.<p>ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಕ್ಕೆ ಯಲ್ಲಾಪುರದಿಂದ ತೆರಳುತ್ತಿದ್ದ ಕ್ರೇನ್ ಕೂಡ ಅಪಘಾತಕ್ಕೀಡಾಗಿದೆ. ಮಾವಳ್ಳಿ ಕ್ರಾಸ್ ಬಳಿ ಬೀಡಾಡಿ ದನಗಳು ಅಡ್ಡ ಬಂದು ಕ್ರೇನ್ ಪಲ್ಟಿಯಾಗಿದೆ. ಅದರ ಚಾಲಕನ ಕೈಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>