<p><strong>ಕಾರವಾರ:</strong> ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಆಮ್ಲಜನಕದ ಪೂರೈಸಲು ನಾಲ್ಕು ವಿಶೇಷ 'ಆಕ್ಸಿ ಬಸ್'ಗಳು ಜಿಲ್ಲೆಗೆ ಬಂದಿವೆ. ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯೊಂದು ಈ ಬಸ್ಗಳನ್ನು ನೀಡಿದ್ದು, ರಾಜ್ಯ ಸರ್ಕಾರದೊಂದಿಗೆ ಸಮನ್ವಯದಲ್ಲಿ ಬಳಕೆಯಾಗಲಿವೆ.</p>.<p>ಬೆಂಗಳೂರಿನ 'ಇಂಡಿ ವಿಲೇಜ್' ಎಂಬ ಸಂಸ್ಥೆಯೊಂದು ನೀಡಿದ್ದು, ಆಕ್ಸಿಜನ್ ಕಾನ್ಸಂಟ್ರೇಟರ್ಸ್ ಒಳಗೊಂಡಿವೆ. ಸೋಂಕಿತರು ಹೆಚ್ಚಿರುವ ಕೆಲವು ಜಿಲ್ಲೆಗಳಲ್ಲಿ ಆಮ್ಲಜನಕ ಸಹಿತ ಹಾಸಿಗೆಗಳು ಸಿಗದೆ ಸಮಸ್ಯೆಯಾಗಿದೆ. ಹಾಸಿಗೆ ಸಿಗುವ ತನಕ ಸೋಂಕಿತರು ವೈದ್ಯಕೀಯ ಆಮ್ಲಜನಕದ ಸಹಾಯದಲ್ಲಿ ಇರಲು ಈ ಬಸ್ಗಳು ಬಳಕೆಯಾಗುತ್ತವೆ.</p>.<p>ಈ ಬಗ್ಗೆ 'ಪ್ರಜಾವಾಣಿ'ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, 'ನಮ್ಮ ಜಿಲ್ಲೆಯಲ್ಲಿ ಈವರೆಗೆ ಹಾಸಿಗೆಯ ಕೊರತೆಯಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಆಕ್ಸಿಜನ್ ಕಾನ್ಸಂಟ್ರೇಟರ್ಗಳು ಇರುವ ಬಸ್ಗಳನ್ನು ಸರ್ಕಾರ ಕಳುಹಿಸಿಕೊಟ್ಟಿದೆ' ಎಂದರು.</p>.<p>'ಬಸ್ನಲ್ಲಿರುವ ಸಲಕರಣೆಗಳ ಮೂಲಕ ದೇಹದಲ್ಲಿ ಆಮ್ಲಜನಕದ ಮಟ್ಟವನ್ನು 95ಕ್ಕೆ ಏರಿಸಲು ಸಾಧ್ಯವಿದೆ. ಕಾರವಾರ, ಹೊನ್ನಾವರ, ಶಿರಸಿ ಮತ್ತು ದಾಂಡೇಲಿಯಲ್ಲಿ ಈ ಬಸ್ಗಳನ್ನು ನಿಲುಗಡೆ ಮಾಡಲಾಗುವುದು. ಅಲ್ಲಿಂದಲೇ ಅಗತ್ಯವಿರುವ ಕಡೆಗೆ ಕಳುಹಿಸಲಾಗುವುದು' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಆಮ್ಲಜನಕದ ಪೂರೈಸಲು ನಾಲ್ಕು ವಿಶೇಷ 'ಆಕ್ಸಿ ಬಸ್'ಗಳು ಜಿಲ್ಲೆಗೆ ಬಂದಿವೆ. ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯೊಂದು ಈ ಬಸ್ಗಳನ್ನು ನೀಡಿದ್ದು, ರಾಜ್ಯ ಸರ್ಕಾರದೊಂದಿಗೆ ಸಮನ್ವಯದಲ್ಲಿ ಬಳಕೆಯಾಗಲಿವೆ.</p>.<p>ಬೆಂಗಳೂರಿನ 'ಇಂಡಿ ವಿಲೇಜ್' ಎಂಬ ಸಂಸ್ಥೆಯೊಂದು ನೀಡಿದ್ದು, ಆಕ್ಸಿಜನ್ ಕಾನ್ಸಂಟ್ರೇಟರ್ಸ್ ಒಳಗೊಂಡಿವೆ. ಸೋಂಕಿತರು ಹೆಚ್ಚಿರುವ ಕೆಲವು ಜಿಲ್ಲೆಗಳಲ್ಲಿ ಆಮ್ಲಜನಕ ಸಹಿತ ಹಾಸಿಗೆಗಳು ಸಿಗದೆ ಸಮಸ್ಯೆಯಾಗಿದೆ. ಹಾಸಿಗೆ ಸಿಗುವ ತನಕ ಸೋಂಕಿತರು ವೈದ್ಯಕೀಯ ಆಮ್ಲಜನಕದ ಸಹಾಯದಲ್ಲಿ ಇರಲು ಈ ಬಸ್ಗಳು ಬಳಕೆಯಾಗುತ್ತವೆ.</p>.<p>ಈ ಬಗ್ಗೆ 'ಪ್ರಜಾವಾಣಿ'ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, 'ನಮ್ಮ ಜಿಲ್ಲೆಯಲ್ಲಿ ಈವರೆಗೆ ಹಾಸಿಗೆಯ ಕೊರತೆಯಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಆಕ್ಸಿಜನ್ ಕಾನ್ಸಂಟ್ರೇಟರ್ಗಳು ಇರುವ ಬಸ್ಗಳನ್ನು ಸರ್ಕಾರ ಕಳುಹಿಸಿಕೊಟ್ಟಿದೆ' ಎಂದರು.</p>.<p>'ಬಸ್ನಲ್ಲಿರುವ ಸಲಕರಣೆಗಳ ಮೂಲಕ ದೇಹದಲ್ಲಿ ಆಮ್ಲಜನಕದ ಮಟ್ಟವನ್ನು 95ಕ್ಕೆ ಏರಿಸಲು ಸಾಧ್ಯವಿದೆ. ಕಾರವಾರ, ಹೊನ್ನಾವರ, ಶಿರಸಿ ಮತ್ತು ದಾಂಡೇಲಿಯಲ್ಲಿ ಈ ಬಸ್ಗಳನ್ನು ನಿಲುಗಡೆ ಮಾಡಲಾಗುವುದು. ಅಲ್ಲಿಂದಲೇ ಅಗತ್ಯವಿರುವ ಕಡೆಗೆ ಕಳುಹಿಸಲಾಗುವುದು' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>