<p><strong>ಮುಂಡಗೋಡ:</strong> ಲೋಕಾಯುಕ್ತ ದಾಳಿಗೊಳಗಾದ ಅಧಿಕಾರಿಯಿಂದ ₹ 50 ಸಾವಿರ ಹಾಕಿಸಿಕೊಂಡು, ವಂಚಿಸಿದ ಆರೋಪದ ಮೇಲೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಸ್ವೀಪರ್ ಕೆಲಸ ಮಾಡುವ ಸಿಬ್ಬಂದಿ ರಾಜು ಕೃಷ್ಣಪ್ಪ ಅರಮನಿ ಎಂಬಾತನಿಗೆ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯ ಶನಿವಾರ ಎರಡು ವರ್ಷ ಕಾರಾಗೃಹ ವಾಸ ಹಾಗೂ ₹ 10 ಸಾವಿರ ದಂಡ ವಿಧಿಸಿ ಆದೇಶಿಸಿದೆ.</p>.<p>2014ರಲ್ಲಿ ಇಲ್ಲಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಗಿ ಕೆಲಸ ಮಾಡುತ್ತಿದ್ದ ಅಶೋಕ ಭಟ್ಟ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಈ ಪ್ರಕರಣವನ್ನು ದುರುಪಯೋಗಪಡಿಸಿಕೊಂಡು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಆಗಿದ್ದ ಮುರುಗೇಶ ಕುಂಬಾರ, ತಾನೇ ಲೋಕಾಯುಕ್ತ ಅಧಿಕಾರಿ ಎಂದು ಎಸಿಎಫ್ ಅಶೋಕ ಭಟ್ಟ ಅವರಿಗೆ ಸುಳ್ಳು ಹೇಳಿ, ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಲು ₹ 50 ಸಾವಿರ ಬೇಡಿಕೆ ಇಟ್ಟು, ಹಣ ಪಡೆದುಕೊಂಡಿದ್ದ. ಈ ಕಾನೂನುಬಾಹಿರ ಕೃತ್ಯಕ್ಕೆ ಕೇಂದ್ರ ಕಾರಾಗೃಹದ ಸ್ವೀಪರ್ ಕೆಲಸದ ಸಿಬ್ಬಂದಿ ರಾಜು ಕೃಷ್ಣಪ್ಪ ಅರಮನಿ ಅಗತ್ಯ ಸಹಾಯ ಮಾಡಿರುವ ಆರೋಪ ಸಾಬೀತು ಆಗಿರುವುದರಿಂದ, ನ್ಯಾಯಾಧೀಶ ವಿನೋದ ಎಲ್. ಬಾಳಾನಾಯಕ ಅವರು ಆರೋಪಿಗೆ ಎರಡು ವರ್ಷ ಕಾರಾಗೃಹ ವಾಸ ಹಾಗೂ ₹10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.</p>.<p>ಆಗಿನ ಸಿಪಿಐ ಹುಸೇನಖಾನ ಪಠಾಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಸಲ್ಲಿಸಿದ್ದರು. ಸಹಾಯಕ ಸರ್ಕಾರಿ ಅಭಿಯೋಜಕ ಪ್ರಸಾದ ರಮೇಶ ಹೆಗಡೆ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡಗೋಡ:</strong> ಲೋಕಾಯುಕ್ತ ದಾಳಿಗೊಳಗಾದ ಅಧಿಕಾರಿಯಿಂದ ₹ 50 ಸಾವಿರ ಹಾಕಿಸಿಕೊಂಡು, ವಂಚಿಸಿದ ಆರೋಪದ ಮೇಲೆ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಸ್ವೀಪರ್ ಕೆಲಸ ಮಾಡುವ ಸಿಬ್ಬಂದಿ ರಾಜು ಕೃಷ್ಣಪ್ಪ ಅರಮನಿ ಎಂಬಾತನಿಗೆ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯ ಶನಿವಾರ ಎರಡು ವರ್ಷ ಕಾರಾಗೃಹ ವಾಸ ಹಾಗೂ ₹ 10 ಸಾವಿರ ದಂಡ ವಿಧಿಸಿ ಆದೇಶಿಸಿದೆ.</p>.<p>2014ರಲ್ಲಿ ಇಲ್ಲಿಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಗಿ ಕೆಲಸ ಮಾಡುತ್ತಿದ್ದ ಅಶೋಕ ಭಟ್ಟ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಈ ಪ್ರಕರಣವನ್ನು ದುರುಪಯೋಗಪಡಿಸಿಕೊಂಡು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಆಗಿದ್ದ ಮುರುಗೇಶ ಕುಂಬಾರ, ತಾನೇ ಲೋಕಾಯುಕ್ತ ಅಧಿಕಾರಿ ಎಂದು ಎಸಿಎಫ್ ಅಶೋಕ ಭಟ್ಟ ಅವರಿಗೆ ಸುಳ್ಳು ಹೇಳಿ, ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಲು ₹ 50 ಸಾವಿರ ಬೇಡಿಕೆ ಇಟ್ಟು, ಹಣ ಪಡೆದುಕೊಂಡಿದ್ದ. ಈ ಕಾನೂನುಬಾಹಿರ ಕೃತ್ಯಕ್ಕೆ ಕೇಂದ್ರ ಕಾರಾಗೃಹದ ಸ್ವೀಪರ್ ಕೆಲಸದ ಸಿಬ್ಬಂದಿ ರಾಜು ಕೃಷ್ಣಪ್ಪ ಅರಮನಿ ಅಗತ್ಯ ಸಹಾಯ ಮಾಡಿರುವ ಆರೋಪ ಸಾಬೀತು ಆಗಿರುವುದರಿಂದ, ನ್ಯಾಯಾಧೀಶ ವಿನೋದ ಎಲ್. ಬಾಳಾನಾಯಕ ಅವರು ಆರೋಪಿಗೆ ಎರಡು ವರ್ಷ ಕಾರಾಗೃಹ ವಾಸ ಹಾಗೂ ₹10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.</p>.<p>ಆಗಿನ ಸಿಪಿಐ ಹುಸೇನಖಾನ ಪಠಾಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಸಲ್ಲಿಸಿದ್ದರು. ಸಹಾಯಕ ಸರ್ಕಾರಿ ಅಭಿಯೋಜಕ ಪ್ರಸಾದ ರಮೇಶ ಹೆಗಡೆ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>