<p><strong>ಕಾರವಾರ:</strong> ‘ಕಾಂಗ್ರೆಸ್ಗೆ ಮಹಾತ್ಮ ಗಾಂಧೀಜಿ ಅವರ ಬಗ್ಗೆ ನೈಜ ಕಾಳಜಿ ಇಲ್ಲ. ಅವರಿಗೆ ಕೇವಲ ಕಾಂಗ್ರೆಸ್ನ ಗಾಂಧಿ ಕುಟುಂಬದ ಹೆಸರು ಉಳಿಸುವಂತೆ ನೋಡಿಕೊಳ್ಳುವುದು ಮುಖ್ಯ. ಈ ಕಾರಣಕ್ಕೆ ಜಿ ರಾಮ್ ಜಿ ಯೋಜನೆ ವಿರೋಧಿಸುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಟೀಕಿಸಿದರು.</p>.<p>ಇಲ್ಲಿನ ಪಂಚತಾರಾ ಸಭಾಂಗಣದಲ್ಲಿ ಗುರುವಾರ ಬಿಜೆಪಿ ಗ್ರಾಮೀಣ ಮಂಡಲದಿಂದ ಜಿ ರಾಮ್ ಜಿ ಯೋಜನೆ ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಕಾಂಗ್ರೆಸ್ ಅನಗತ್ಯವಾಗಿ ಜಿ ರಾಮ್ ಜಿ ಯೋಜನೆ ವಿರೋಧಿಸುತ್ತಿದೆ. ವಿಶೇಷ ಅಧಿವೇಶನವನ್ನೇ ನಡೆಸಿ ಯೋಜನೆ ವಿರುದ್ಧ ಮಾತನಾಡುವ ಕೆಲಸ ಮಾಡಿದ್ದಾರೆ. ಅವಿವೇಕತನದ ಮಾತುಗಳನ್ನು ಸದನದಲ್ಲಿ ಆ ಪಕ್ಷದ ನಾಯಕರು ಮಾತನಾಡಿದ್ದಾರೆ’ ಎಂದರು.</p>.<p>‘ದೇಶದ ಅಭಿವೃದ್ಧಿಗೆ ಜಿ ರಾಮ್ ಜಿ ಯೋಜನೆ ಅಗತ್ಯವಿದೆ. ಗ್ರಾಮೀಣ ಪ್ರದೇಶದ ಜನರಲ್ಲಿ ಆರ್ಥಿಕ ಶಕ್ತಿ ತುಂಬುವ ಅಂಶಗಳನ್ನು ಯೋಜನೆ ಒಳಗೊಂಡಿದೆ. ನರೇಗಾ ಯೋಜನೆಯಂತೆ ಭ್ರಷ್ಟಾಚಾರಕ್ಕೆ ಆಸ್ಪದ ಇಲ್ಲ’ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ‘ವಿಕೇಂದ್ರೀಕರಣ ವ್ಯವಸ್ಥೆಗೆ ಬಲತುಂಬಲು ಜಿ ರಾಮ್ ಜಿ ನೆರವಾಗಲಿದೆ. ರಾಜ್ಯಪಾಲರಿಗೆ ಅಗೌರವ ತೋರುವುದು, ಇಡೀ ರಾಜ್ಯ ಸರ್ಕಾರವೇ ಮುಂದೆ ನಿಂತು ಮಹಾತ್ವಾಕಾಂಕ್ಷಿ ಯೋಜನೆ ವಿರೋಧಿಸುವುದು ಗ್ರಾಮೀಣ ಜನರಿಗೆ ಮಾಡಿದ ದ್ರೋಹ’ ಎಂದರು.</p>.<p>ಜಿ ರಾಮ್ ಜಿ ಯೋಜನೆ ಜಾಗೃತಿಗೆ ಅಮದಳ್ಳಿಯ ಬಂಟದೇವ ಯುವ ಸಂಘದ ಕಲಾವಿದರು ಕಿರು ನಾಟಕ ಪ್ರದರ್ಶಿಸಿ, ಜಾಗೃತಿ ಗೀತೆ ಹಾಡಿದರು.</p>.<p>ಗಜಾನನ ಗುನಗಾ, ಸುನೀಲ ನಾಯ್ಕ ಸೋನಿ, ಸಂಜಯ ಸಾಳುಂಕೆ, ಸೂರಜ್ ದೇಸಾಯಿ, ಸುಭಾಷ ಗುನಗಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಕಾಂಗ್ರೆಸ್ಗೆ ಮಹಾತ್ಮ ಗಾಂಧೀಜಿ ಅವರ ಬಗ್ಗೆ ನೈಜ ಕಾಳಜಿ ಇಲ್ಲ. ಅವರಿಗೆ ಕೇವಲ ಕಾಂಗ್ರೆಸ್ನ ಗಾಂಧಿ ಕುಟುಂಬದ ಹೆಸರು ಉಳಿಸುವಂತೆ ನೋಡಿಕೊಳ್ಳುವುದು ಮುಖ್ಯ. ಈ ಕಾರಣಕ್ಕೆ ಜಿ ರಾಮ್ ಜಿ ಯೋಜನೆ ವಿರೋಧಿಸುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಟೀಕಿಸಿದರು.</p>.<p>ಇಲ್ಲಿನ ಪಂಚತಾರಾ ಸಭಾಂಗಣದಲ್ಲಿ ಗುರುವಾರ ಬಿಜೆಪಿ ಗ್ರಾಮೀಣ ಮಂಡಲದಿಂದ ಜಿ ರಾಮ್ ಜಿ ಯೋಜನೆ ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>‘ಕಾಂಗ್ರೆಸ್ ಅನಗತ್ಯವಾಗಿ ಜಿ ರಾಮ್ ಜಿ ಯೋಜನೆ ವಿರೋಧಿಸುತ್ತಿದೆ. ವಿಶೇಷ ಅಧಿವೇಶನವನ್ನೇ ನಡೆಸಿ ಯೋಜನೆ ವಿರುದ್ಧ ಮಾತನಾಡುವ ಕೆಲಸ ಮಾಡಿದ್ದಾರೆ. ಅವಿವೇಕತನದ ಮಾತುಗಳನ್ನು ಸದನದಲ್ಲಿ ಆ ಪಕ್ಷದ ನಾಯಕರು ಮಾತನಾಡಿದ್ದಾರೆ’ ಎಂದರು.</p>.<p>‘ದೇಶದ ಅಭಿವೃದ್ಧಿಗೆ ಜಿ ರಾಮ್ ಜಿ ಯೋಜನೆ ಅಗತ್ಯವಿದೆ. ಗ್ರಾಮೀಣ ಪ್ರದೇಶದ ಜನರಲ್ಲಿ ಆರ್ಥಿಕ ಶಕ್ತಿ ತುಂಬುವ ಅಂಶಗಳನ್ನು ಯೋಜನೆ ಒಳಗೊಂಡಿದೆ. ನರೇಗಾ ಯೋಜನೆಯಂತೆ ಭ್ರಷ್ಟಾಚಾರಕ್ಕೆ ಆಸ್ಪದ ಇಲ್ಲ’ ಎಂದರು.</p>.<p>ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ‘ವಿಕೇಂದ್ರೀಕರಣ ವ್ಯವಸ್ಥೆಗೆ ಬಲತುಂಬಲು ಜಿ ರಾಮ್ ಜಿ ನೆರವಾಗಲಿದೆ. ರಾಜ್ಯಪಾಲರಿಗೆ ಅಗೌರವ ತೋರುವುದು, ಇಡೀ ರಾಜ್ಯ ಸರ್ಕಾರವೇ ಮುಂದೆ ನಿಂತು ಮಹಾತ್ವಾಕಾಂಕ್ಷಿ ಯೋಜನೆ ವಿರೋಧಿಸುವುದು ಗ್ರಾಮೀಣ ಜನರಿಗೆ ಮಾಡಿದ ದ್ರೋಹ’ ಎಂದರು.</p>.<p>ಜಿ ರಾಮ್ ಜಿ ಯೋಜನೆ ಜಾಗೃತಿಗೆ ಅಮದಳ್ಳಿಯ ಬಂಟದೇವ ಯುವ ಸಂಘದ ಕಲಾವಿದರು ಕಿರು ನಾಟಕ ಪ್ರದರ್ಶಿಸಿ, ಜಾಗೃತಿ ಗೀತೆ ಹಾಡಿದರು.</p>.<p>ಗಜಾನನ ಗುನಗಾ, ಸುನೀಲ ನಾಯ್ಕ ಸೋನಿ, ಸಂಜಯ ಸಾಳುಂಕೆ, ಸೂರಜ್ ದೇಸಾಯಿ, ಸುಭಾಷ ಗುನಗಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>