<p><strong>ಕಾರವಾರ:</strong> ‘ಪ್ರಾಮಾಣಿಕತೆಗೆ ಮಹಾತ್ಮ ಗಾಂಧೀಜಿ, ಸರಳ ಜೀವನಕ್ಕೆ ಲಾಲ್ ಬಹದ್ದೂರ್ ಶಾಸ್ತ್ರಿ ಆದರ್ಶಪ್ರಾಯ. ಮಹಾನ್ ನಾಯಕರನ್ನು ಸಮಾಜ ಎಂದಿಗೂ ಮರೆಯಲಾಗದು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಹೇಳಿದರು.</p>.<p>ಇಲ್ಲಿನ ಮಹಾತ್ಮ ಗಾಂಧಿ ಉದ್ಯಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಹಿಂಸೆಯ ಮೂಲಕ ಏನು ಬೇಕಾದರು ಸಾಧಿಸಬಹುದು ಎಂದು ಇಡೀ ಜಗತ್ತಿಗೆ ಅವರು ತಿಳಿಸಿಕೊಟ್ಟರು. ಸಮಾಜದಲ್ಲಿ ಬದಲಾವಣೆ ತರಲು ಸಣ್ಣ ಕಾರ್ಯಗಳೂ ಪ್ರೇರಣೆಯಾಗುತ್ತವೆ ಎಂಬುದನ್ನು ಗಾಂಧೀಜಿ, ಶಾಸ್ತ್ರೀಜಿ ತಿಳಿಸಿಕೊಟ್ಟರು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಮಾತನಾಡಿ, ‘ಗಾಂಧೀಜಿ ಅವರು ನನ್ನ ಜೀವನವೇ ನನ್ನ ಸಂದೇಶ ಎಂಬುದಕ್ಕೆ ಪೂರಕವಾಗಿ ಅವರ ತತ್ವಗಳನ್ನು ಜೀವನ ಪರ್ಯಾಂತ ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಸರಳ ವ್ಯಕ್ತಿತ್ವದ ನಾಯಕ’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಲಿಪ್ ಎಂ.ಎನ್., ‘ಗಾಂಧೀಜಿ ವಿಚಾರಗಳು ಎಲ್ಲ ಕಾಲ ಘಟ್ಟಗಳಿಗೂ ಪ್ರಸ್ತುತ’ ಎಂದರು.</p>.<p>ನಗರಸಭೆ ಅಧ್ಯಕ್ಷ ರವಿರಾಜ್ ಅಕೋಲೇಕರ ಅಧ್ಯಕ್ಷತೆ ವಹಿಸಿದ್ದರು. ಗಾಂಧೀಜಿ ಅವರ ಜೀವನ ಚರಿತ್ರೆ ಕುರಿತು ಸಾಹಿತಿ ಮೋಹನ ಹಬ್ಬು ಉಪನ್ಯಾಸ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ನರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಪೌರಾಯುಕ್ತ ಜಗದೀಶ ಹುಲಗೆಜ್ಜಿ, ವಾರ್ತಾಧಿಕಾರಿ ಬಿ.ಶಿವಕುಮಾರ್, ಇತರರು ಪಾಲ್ಗೊಂಡಿದ್ದರು.</p>.<p>ಗಾಂಧಿ ಭಜನೆ, ಸ್ವಚ್ಛತೆ ಶ್ರಮದಾನ ನಡೆಯಿತು. ವಾರ್ತಾ ಇಲಾಖೆಯಿಂದ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.</p><p><strong>ಗಾಂಧೀಜಿ ಕೊಡುಗೆಗಳ ಸ್ಮರಣೆ</strong></p><p>ಭಟ್ಕಳ : ತಾಲ್ಲೂಕಿನ ಆಡಳಿತ ಸೌಧದಲ್ಲಿ ಗುರುವಾರ ಗಾಂಧಿ ಜಯಂತಿ ಆಚರಿಸಲಾಯಿತು.</p><p>ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದ ಭಟ್ಕಳ ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ, ಗಾಂಧೀಜಿಯವರ ಕೊಡುಗೆಗಳನ್ನು ಸ್ಮರಿಸಿ, ಗಾಂಧೀಜಿಯವರ ಸತ್ಯ, ಅಹಿಂಸೆ, ಇತ್ಯಾದಿ ಉದಾತ್ತ ಗುಣಗಳನ್ನು ಕೊಂಡಾಡಿದರು. </p><p>ದೇಶದ ಎರಡನೇ ಪ್ರಧಾನಿಯಾಗಿದ್ದ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಕೊಡುಗೆಗಳನ್ನು ನೆನಪಿಸಿಕೊಂಡರು.</p><p>ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್, ತಾಲ್ಲೂಕಿನ ವಿವಿಧ ಇಲಾಖೆಗಳ ಮುಖ್ಯಸ್ಥರು, ಸಿಬ್ಬಂದಿ ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೇಲ್ವಿಚಾರಕರು ಸಂಪನ್ಮೂಲ ವ್ಯಕ್ತಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ‘ಪ್ರಾಮಾಣಿಕತೆಗೆ ಮಹಾತ್ಮ ಗಾಂಧೀಜಿ, ಸರಳ ಜೀವನಕ್ಕೆ ಲಾಲ್ ಬಹದ್ದೂರ್ ಶಾಸ್ತ್ರಿ ಆದರ್ಶಪ್ರಾಯ. ಮಹಾನ್ ನಾಯಕರನ್ನು ಸಮಾಜ ಎಂದಿಗೂ ಮರೆಯಲಾಗದು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಹೇಳಿದರು.</p>.<p>ಇಲ್ಲಿನ ಮಹಾತ್ಮ ಗಾಂಧಿ ಉದ್ಯಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಹಿಂಸೆಯ ಮೂಲಕ ಏನು ಬೇಕಾದರು ಸಾಧಿಸಬಹುದು ಎಂದು ಇಡೀ ಜಗತ್ತಿಗೆ ಅವರು ತಿಳಿಸಿಕೊಟ್ಟರು. ಸಮಾಜದಲ್ಲಿ ಬದಲಾವಣೆ ತರಲು ಸಣ್ಣ ಕಾರ್ಯಗಳೂ ಪ್ರೇರಣೆಯಾಗುತ್ತವೆ ಎಂಬುದನ್ನು ಗಾಂಧೀಜಿ, ಶಾಸ್ತ್ರೀಜಿ ತಿಳಿಸಿಕೊಟ್ಟರು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಮಾತನಾಡಿ, ‘ಗಾಂಧೀಜಿ ಅವರು ನನ್ನ ಜೀವನವೇ ನನ್ನ ಸಂದೇಶ ಎಂಬುದಕ್ಕೆ ಪೂರಕವಾಗಿ ಅವರ ತತ್ವಗಳನ್ನು ಜೀವನ ಪರ್ಯಾಂತ ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಸರಳ ವ್ಯಕ್ತಿತ್ವದ ನಾಯಕ’ ಎಂದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಲಿಪ್ ಎಂ.ಎನ್., ‘ಗಾಂಧೀಜಿ ವಿಚಾರಗಳು ಎಲ್ಲ ಕಾಲ ಘಟ್ಟಗಳಿಗೂ ಪ್ರಸ್ತುತ’ ಎಂದರು.</p>.<p>ನಗರಸಭೆ ಅಧ್ಯಕ್ಷ ರವಿರಾಜ್ ಅಕೋಲೇಕರ ಅಧ್ಯಕ್ಷತೆ ವಹಿಸಿದ್ದರು. ಗಾಂಧೀಜಿ ಅವರ ಜೀವನ ಚರಿತ್ರೆ ಕುರಿತು ಸಾಹಿತಿ ಮೋಹನ ಹಬ್ಬು ಉಪನ್ಯಾಸ ನೀಡಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ನರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಪೌರಾಯುಕ್ತ ಜಗದೀಶ ಹುಲಗೆಜ್ಜಿ, ವಾರ್ತಾಧಿಕಾರಿ ಬಿ.ಶಿವಕುಮಾರ್, ಇತರರು ಪಾಲ್ಗೊಂಡಿದ್ದರು.</p>.<p>ಗಾಂಧಿ ಭಜನೆ, ಸ್ವಚ್ಛತೆ ಶ್ರಮದಾನ ನಡೆಯಿತು. ವಾರ್ತಾ ಇಲಾಖೆಯಿಂದ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.</p><p><strong>ಗಾಂಧೀಜಿ ಕೊಡುಗೆಗಳ ಸ್ಮರಣೆ</strong></p><p>ಭಟ್ಕಳ : ತಾಲ್ಲೂಕಿನ ಆಡಳಿತ ಸೌಧದಲ್ಲಿ ಗುರುವಾರ ಗಾಂಧಿ ಜಯಂತಿ ಆಚರಿಸಲಾಯಿತು.</p><p>ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದ ಭಟ್ಕಳ ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ, ಗಾಂಧೀಜಿಯವರ ಕೊಡುಗೆಗಳನ್ನು ಸ್ಮರಿಸಿ, ಗಾಂಧೀಜಿಯವರ ಸತ್ಯ, ಅಹಿಂಸೆ, ಇತ್ಯಾದಿ ಉದಾತ್ತ ಗುಣಗಳನ್ನು ಕೊಂಡಾಡಿದರು. </p><p>ದೇಶದ ಎರಡನೇ ಪ್ರಧಾನಿಯಾಗಿದ್ದ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಕೊಡುಗೆಗಳನ್ನು ನೆನಪಿಸಿಕೊಂಡರು.</p><p>ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್, ತಾಲ್ಲೂಕಿನ ವಿವಿಧ ಇಲಾಖೆಗಳ ಮುಖ್ಯಸ್ಥರು, ಸಿಬ್ಬಂದಿ ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೇಲ್ವಿಚಾರಕರು ಸಂಪನ್ಮೂಲ ವ್ಯಕ್ತಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>