ಕಾರ್ಯಕ್ರಮಕ್ಕೆ ಅವರು ಬರುತ್ತಿದ್ದಂತೆ ಮಳೆ ಸುರಿಯಲಾರಂಭಿಸಿತು. ಇದರಿಂದಾಗಿ ಕುಳಿತಿದ್ದ ಜನರು ಚೆಲ್ಲಾಪಿಲ್ಲಿಯಾದರು. ಹೀಗಾಗಿ, ‘ಪ್ರಾರ್ಥನೆ, ಭಾಷಣಗಳು ಬೇಡ. ಫಲಾನುಭವಿಗಳಿಗೆ ಕಿಟ್ ವಿತರಣೆ ಮಾಡಿ ಬಿಡೋಣ’ ಎಂದು ಸಚಿವರು ಆಯೋಜಕರಿಗೆ ತಿಳಿಸಿದರು. ಅದರಂತೆ, ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿ ಸುಮಾರು 10 ಮಂದಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ವಿತರಣೆ ಮಾಡಿದರು. ಮಳೆ ಹೆಚ್ಚಾಗಿದ್ದರಿಂದ ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿ ಅಲ್ಲಿಂದ ತೆರಳಿದರು.