<p><strong>ಶಿರಸಿ:</strong> ತುಂತುರು ಮಳೆ, ಕಡಿಮೆ ಉಷ್ಣಾಂಶ ಮತ್ತು ಅಧಿಕ ತೇವಾಂಶದಂಥ ವಾತಾವರಣದ ಕಾರಣ ಶುಂಠಿ ಬೆಳೆಯಲ್ಲಿ ಎಲೆಚುಕ್ಕಿ ರೋಗ ವ್ಯಾಪಿಸುತ್ತಿದ್ದು, ಸೋಮವಾರ ವಿಜ್ಞಾನಿಗಳು ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ತಂಡ ಶುಂಠಿ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸಿತು. </p>.<p>ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬನವಾಸಿ ಹೋಬಳಿ ಮತ್ತು ಮುಂಡಗೋಡ ಪ್ರದೇಶದ ವ್ಯಾಪ್ತಿಯಲ್ಲಿ ಶುಂಠಿಯನ್ನು ಹೆಚ್ಚಿನ ಪ್ರದೇಶದಲ್ಲಿ ಬೆಳೆಯುತ್ತಿದ್ದು, ಈ ಸಾಲಿನಲ್ಲಿ ಎಲೆಚುಕ್ಕಿ ರೋಗ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈ ಕಾರಣ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವಿಜ್ಞಾನಿಗಳು ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ತಂಡ ಬನವಾಸಿ ಭಾಗದ ತಿಗಣಿ, ಅಜ್ಜರಣಿ, ಗುಡ್ನಾಪುರ ಮತ್ತು ನವಣಗೇರಿ ಗ್ರಾಮಗಳ ಶುಂಠಿ ಪ್ರದೇಶಕ್ಕೆ ಭೇಟಿಕೊಟ್ಟು ಪರಿಶೀಲಿಸಿತು.</p>.<p>ಕೊಲೆಟೊಟ್ರೈಕಮ್, ಪಿಲ್ಲೊಸ್ಟಿಕ್ಟಾ ಮತ್ತು ಫೈರಿಕ್ಯುಲೇರಿಯಾ ರೋಗಾಣುಗಳು ಕಂಡುಬಂದಿದ್ದು, ಈ ರೋಗವು ಗಾಳಿಯಲ್ಲಿ ವೇಗವಾಗಿ ಹರಡುವುದರಿಂದ ಸಮಗ್ರ ರೋಗ ನಿರ್ವಹಣೆಯನ್ನು ಕೈಗೊಳ್ಳಲು ರೈತರಿಗೆ ತಿಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ತುಂತುರು ಮಳೆ, ಕಡಿಮೆ ಉಷ್ಣಾಂಶ ಮತ್ತು ಅಧಿಕ ತೇವಾಂಶದಂಥ ವಾತಾವರಣದ ಕಾರಣ ಶುಂಠಿ ಬೆಳೆಯಲ್ಲಿ ಎಲೆಚುಕ್ಕಿ ರೋಗ ವ್ಯಾಪಿಸುತ್ತಿದ್ದು, ಸೋಮವಾರ ವಿಜ್ಞಾನಿಗಳು ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ತಂಡ ಶುಂಠಿ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸಿತು. </p>.<p>ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬನವಾಸಿ ಹೋಬಳಿ ಮತ್ತು ಮುಂಡಗೋಡ ಪ್ರದೇಶದ ವ್ಯಾಪ್ತಿಯಲ್ಲಿ ಶುಂಠಿಯನ್ನು ಹೆಚ್ಚಿನ ಪ್ರದೇಶದಲ್ಲಿ ಬೆಳೆಯುತ್ತಿದ್ದು, ಈ ಸಾಲಿನಲ್ಲಿ ಎಲೆಚುಕ್ಕಿ ರೋಗ ವ್ಯಾಪಕವಾಗಿ ಹಬ್ಬುತ್ತಿರುವುದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈ ಕಾರಣ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವಿಜ್ಞಾನಿಗಳು ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ತಂಡ ಬನವಾಸಿ ಭಾಗದ ತಿಗಣಿ, ಅಜ್ಜರಣಿ, ಗುಡ್ನಾಪುರ ಮತ್ತು ನವಣಗೇರಿ ಗ್ರಾಮಗಳ ಶುಂಠಿ ಪ್ರದೇಶಕ್ಕೆ ಭೇಟಿಕೊಟ್ಟು ಪರಿಶೀಲಿಸಿತು.</p>.<p>ಕೊಲೆಟೊಟ್ರೈಕಮ್, ಪಿಲ್ಲೊಸ್ಟಿಕ್ಟಾ ಮತ್ತು ಫೈರಿಕ್ಯುಲೇರಿಯಾ ರೋಗಾಣುಗಳು ಕಂಡುಬಂದಿದ್ದು, ಈ ರೋಗವು ಗಾಳಿಯಲ್ಲಿ ವೇಗವಾಗಿ ಹರಡುವುದರಿಂದ ಸಮಗ್ರ ರೋಗ ನಿರ್ವಹಣೆಯನ್ನು ಕೈಗೊಳ್ಳಲು ರೈತರಿಗೆ ತಿಳಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>