ಆರ್ಪಿಎಫ್ನ ಶಿಶುಪಾಲ್ ಸಿಂಗ್ ಹಾಗೂ ಹೇರಂಬ ನಾಯ್ಕ ಅವರು ಕಾರವಾರದಿಂದ ಭಟ್ಕಳಕ್ಕೆ ಬರುತ್ತಿದ್ದ ರೈಲು ತಪಾಸಣೆ ನಡೆಸುತ್ತಿದ್ದ ಸಂದಭದಲ್ಲಿ ಸಾಮಾನ್ಯ ದರ್ಜೆಯ ಬೋಗಿಯಲ್ಲಿ ನಾಲ್ಕು ಗೋಣಿ ಚೀಲದಲ್ಲಿ ತುಂಬಿ ಸಾಗಿಸುತ್ತಿದ್ದ ಗೋವಾ ರಾಜ್ಯದ ಸುಮಾರು ₨39 ಸಾವಿರ ಮೌಲ್ಯದ 312 ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ. ಮದ್ಯ ಸಾಗಿಸುತ್ತಿದ್ದ ಆರೋಪಿಗಳ ಪತ್ತೆಯಾಗಿಲ್ಲ. ಮದ್ಯದ ಬಾಟಲಿಗಳನ್ನು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ.