<p><strong>ಅಂಕೋಲಾ:</strong> ‘ಗಾಂಧಿ ಹತ್ಯೆ ಮಾಡಿದ ಗೋಡ್ಸೆಗೆ ಇಂದು ದೇವಸ್ಥಾನ ಕಟ್ಟಿ ಪೂಜಿಸುವ ಮಟ್ಟಕ್ಕೆ ಬಂದಿದ್ದೇವೆ. ದೇಶ ಹೇಗೆ ಅಧಪತನದತ್ತ ಸಾಗುತ್ತಿದೆ ಎಂಬ ಚಿಂತೆ ಕಾಡುತ್ತಿದೆ’ ಎಂದು ಹಿರಿಯ ಸಾಹಿತಿ ಶಾಂತಾರಾಮ ನಾಯಕ ಹಿಚಕಡ ಹೇಳಿದರು.</p>.<p>ಪಟ್ಟಣದ ಸತ್ಯಾಗ್ರಹ ಸ್ಮಾರಕ ಸಭಾಭವನದಲ್ಲಿ ಶುಕ್ರವಾರ ಹುತಾತ್ಮರ ದಿನವನ್ನು ಸೌಹಾರ್ದ ಸಂಕಲ್ಪ ದಿನವಾಗಿ ಆಚರಿಸಿದ ನಿಮಿತ್ತ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.</p>.<p>ಸಾಹಿತಿ ಮೋಹನ ಹಬ್ಬು ಮಾತನಾಡಿ, ಗಾಂಧೀಜಿ ಅವರ ಹೆಸರನ್ನು ಕೆಡಿಸುವ ಹುನ್ನಾರ ನಡೆಯುತ್ತಿದೆ. ಗಾಂಧೀಜಿ ಅವರ ತತ್ವ ವಿಚಾರಗಳನ್ನು ಅರಿಯದೇ ಯಾರೋ ಹೇಳಿದ ಮಾತ್ರಕ್ಕೆ ಯುವ ಜನತೆ ಕೂಡ ಬಲಿಯಾಗುತ್ತಿರುವುದು ಆಘಾತಕಾರಿ ಎಂದರು.</p>.<p>ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ ಮಾತನಾಡಿದರು.</p>.<p>ಕವಿ ಕೃಷ್ಣಾ ನಾಯಕ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಗೋಪಾಲಕೃಷ್ಣ ನಾಯಕ, ಹೋರಾಟಗಾರ್ತಿ ಯಮುನಾ ಗಾಂವಕರ ಮಾತನಾಡಿದರು. ಸಾಹಿತಿ ಡಾ.ಆರ್.ಜಿ.ಗುಂದಿ, ಜೆ.ಪ್ರೇಮಾನಂದ, ಗೌರೀಶ ನಾಯಕ, ಜಗದೀಶ ನಾಯಕ, ಸಂತೋಷ ನಾಯ್ಕ, ಉದಯ ನಾಯ್ಕ, ಗೀತಾ ಗೌಡ , ಪೂರ್ಣಿಮಾ ನಾಯ್ಕ, ವಿನೋದ ನಾಯ್ಕ, ಎಚ್.ಬಿ.ನಾಯಕ, ರಾಜಗೋಪಾಲ್ ಶೇಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ:</strong> ‘ಗಾಂಧಿ ಹತ್ಯೆ ಮಾಡಿದ ಗೋಡ್ಸೆಗೆ ಇಂದು ದೇವಸ್ಥಾನ ಕಟ್ಟಿ ಪೂಜಿಸುವ ಮಟ್ಟಕ್ಕೆ ಬಂದಿದ್ದೇವೆ. ದೇಶ ಹೇಗೆ ಅಧಪತನದತ್ತ ಸಾಗುತ್ತಿದೆ ಎಂಬ ಚಿಂತೆ ಕಾಡುತ್ತಿದೆ’ ಎಂದು ಹಿರಿಯ ಸಾಹಿತಿ ಶಾಂತಾರಾಮ ನಾಯಕ ಹಿಚಕಡ ಹೇಳಿದರು.</p>.<p>ಪಟ್ಟಣದ ಸತ್ಯಾಗ್ರಹ ಸ್ಮಾರಕ ಸಭಾಭವನದಲ್ಲಿ ಶುಕ್ರವಾರ ಹುತಾತ್ಮರ ದಿನವನ್ನು ಸೌಹಾರ್ದ ಸಂಕಲ್ಪ ದಿನವಾಗಿ ಆಚರಿಸಿದ ನಿಮಿತ್ತ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.</p>.<p>ಸಾಹಿತಿ ಮೋಹನ ಹಬ್ಬು ಮಾತನಾಡಿ, ಗಾಂಧೀಜಿ ಅವರ ಹೆಸರನ್ನು ಕೆಡಿಸುವ ಹುನ್ನಾರ ನಡೆಯುತ್ತಿದೆ. ಗಾಂಧೀಜಿ ಅವರ ತತ್ವ ವಿಚಾರಗಳನ್ನು ಅರಿಯದೇ ಯಾರೋ ಹೇಳಿದ ಮಾತ್ರಕ್ಕೆ ಯುವ ಜನತೆ ಕೂಡ ಬಲಿಯಾಗುತ್ತಿರುವುದು ಆಘಾತಕಾರಿ ಎಂದರು.</p>.<p>ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ ಮಾತನಾಡಿದರು.</p>.<p>ಕವಿ ಕೃಷ್ಣಾ ನಾಯಕ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಗೋಪಾಲಕೃಷ್ಣ ನಾಯಕ, ಹೋರಾಟಗಾರ್ತಿ ಯಮುನಾ ಗಾಂವಕರ ಮಾತನಾಡಿದರು. ಸಾಹಿತಿ ಡಾ.ಆರ್.ಜಿ.ಗುಂದಿ, ಜೆ.ಪ್ರೇಮಾನಂದ, ಗೌರೀಶ ನಾಯಕ, ಜಗದೀಶ ನಾಯಕ, ಸಂತೋಷ ನಾಯ್ಕ, ಉದಯ ನಾಯ್ಕ, ಗೀತಾ ಗೌಡ , ಪೂರ್ಣಿಮಾ ನಾಯ್ಕ, ವಿನೋದ ನಾಯ್ಕ, ಎಚ್.ಬಿ.ನಾಯಕ, ರಾಜಗೋಪಾಲ್ ಶೇಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>