ವಾಹನ ನಿಲುಗಡೆ: ಸಮರ್ಪಕ ವ್ಯವಸ್ಥೆಗೆ ಮನವಿ
‘ಓಂ ಕಡಲ ತೀರದಲ್ಲಿ ವಾಹನ ನಿಲುಗಡೆಗೆ ಅರಣ್ಯ ಇಲಾಖೆಯ ಗ್ರಾಮ ಅರಣ್ಯ ಸಮಿತಿಯಿಂದ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಆದರೆ, ವಾಹನ ನಿಲುಗಡೆಗೆ ಸರಿಯಾದ ವ್ಯವಸ್ಥೆ ಮಾಡಿಲ್ಲ. ಪ್ರಸ್ತುತ ಅಧಿಕ ಜನರು ಬಂದಾಗ ಎಲ್ಲೆಂದರಲ್ಲಿ ವಾಹನ ನಿಲುಗಡೆಗೊಳಿಸುತ್ತಿದ್ದು, ಇದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಕ್ರಮವಹಿಸಬೇಕು. ಪ್ರವಾಸೋದ್ಯಮ ಇಲಾಖೆಯಿಂದ ಮಾರ್ಗಸೂಚಿ ಫಲಕ ಅಳವಡಿಸಬೇಕು’ ಎಂದು ಗೋಕರ್ಣ ಪೊಲೀಸ್ ನಿರೀಕ್ಷಕ ಶ್ರೀಧರ ಎಸ್.ಆರ್. ಕೋರಿದರು. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯವರು ಸೂಕ್ತ ಕ್ರಮ ಕೈಗೊಳ್ಳುವಂತೆ ಉಪ ವಿಭಾಗಾಧಿಕಾರಿ ಸಭೆಯಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಸೂಚಿಸಿದರು.