<p>ಗೋಕರ್ಣ: ಇಲ್ಲಿಯ ಅಜ್ಜಿಹಕ್ಕಲ ಗ್ರಾಮದ ಗುಂಬಳಿ ಎಂಬಲ್ಲಿ ಪುರಾತನ ಕಾಲದಿಂದಲೂ ಇದ್ದ ಭೀಮಕುಂಡ ಸಾರ್ವಜನಿಕ ಕೆರೆಯಲ್ಲಿ ಬಿದ್ದಿದ್ದ ಬೃಹತ್ ಗಾತ್ರದ ಮರವನ್ನು ಶುಕ್ರವಾರ ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಉಪಸ್ಥಿತಿಯಲ್ಲಿ ಗ್ರಾಮ ಪಂಚಾಯಿತಿ ಸ್ವಚ್ಛತಾ ಸಿಬ್ಬಂದಿ ತೆರವುಗೊಳಿಸಿದರು.</p>.<p>ಈ ಕೆರೆ ಎತ್ತರದ ಪ್ರದೇಶದಲ್ಲಿದ್ದು, ಸುಮಾರು 20 ಮನೆಗೆ ನೀರಾವರಿಯ ಮೂಲವಾಗಿದೆ. ಪುರಾತನ ಕಾಲದಿಂದಲೂ ಪಾಳಿಯ ಪದ್ಧತಿಯಲ್ಲಿ ಒಂದು ಮನೆಯಿಂದ ಮತ್ತೊಂದು ಮನೆಗೆ ನೀರನ್ನು ಬಿಡುವ ರೂಢಿ ನಡೆದುಕೊಂಡು ಬಂದಿದೆ. ಸಾಕಷ್ಟು ಜಲ ಮೂಲವಿರುವ ಗುಂಬಳೆಯ ಈ ಸರ್ಕಾರಿ ಕೆರೆಯಲ್ಲಿ ಕೆಲವು ದಿನಗಳ ಹಿಂದೆ ಬೃಹತ್ ಮರ ಬಿದ್ದಿತ್ತು. ನೀರಿನ ಹರಿವಿಗೆ ಅಡ್ಡಿ ಉಂಟಾಗಿತ್ತು. ಕೆರೆಯ ಸ್ವಚ್ಛತೆ ಬಗ್ಗೆ ಸ್ಥಳೀಯರು ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು.</p>.<p>ಆದರೆ ಕೆರೆ ಪಕ್ಕದ ಖಾಸಗಿ ಜಾಗದವರು ಬಿದ್ದ ಮರದ ತೆರವಿನ ಕಾರ್ಯಕ್ಕೆ ಅಡ್ಡಿಪಡಿಸುತ್ತಿದ್ದರು. ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಕುರಿತು ಕುಮಟಾ ತಹಶೀಲ್ದಾರ್ಗೆ ಸಾರ್ವಜನಿಕರು ಮನವಿ ಮಾಡಿದ್ದರು. ಅದರಂತೆ ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್ ಶುಕ್ರವಾರ ಖುದ್ದು ಸ್ಥಳಕ್ಕೆ ಆಗಮಿಸಿ ಮರ ತೆಗೆದು ಸ್ವಚ್ಛಗೊಳಿಸಲು ಸ್ಥಳೀಯ ಆಡಳಿತಕ್ಕೆ ಸೂಚಿಸಿದರು.</p>.<p>ತಹಶೀಲ್ದಾರ್ ಸೂಚನೆಯಂತೆ ಗ್ರಾಮ ಪಂಚಾಯಿತಿ ಸ್ವಚ್ಛತಾ ಸಿಬ್ಬಂದಿ ಕೆರೆಯಲ್ಲಿ ಬಿದ್ದಿದ್ದ ಮರವನ್ನು ತೆರವಿಗೊಳಿಸಿದರು.</p>.<p>ಪೊಲೀಸ್ ನಿರೀಕ್ಷಕ ಶ್ರೀಧರ ಎಸ್.ಆರ್. ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-20-1964907890</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಕರ್ಣ: ಇಲ್ಲಿಯ ಅಜ್ಜಿಹಕ್ಕಲ ಗ್ರಾಮದ ಗುಂಬಳಿ ಎಂಬಲ್ಲಿ ಪುರಾತನ ಕಾಲದಿಂದಲೂ ಇದ್ದ ಭೀಮಕುಂಡ ಸಾರ್ವಜನಿಕ ಕೆರೆಯಲ್ಲಿ ಬಿದ್ದಿದ್ದ ಬೃಹತ್ ಗಾತ್ರದ ಮರವನ್ನು ಶುಕ್ರವಾರ ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಉಪಸ್ಥಿತಿಯಲ್ಲಿ ಗ್ರಾಮ ಪಂಚಾಯಿತಿ ಸ್ವಚ್ಛತಾ ಸಿಬ್ಬಂದಿ ತೆರವುಗೊಳಿಸಿದರು.</p>.<p>ಈ ಕೆರೆ ಎತ್ತರದ ಪ್ರದೇಶದಲ್ಲಿದ್ದು, ಸುಮಾರು 20 ಮನೆಗೆ ನೀರಾವರಿಯ ಮೂಲವಾಗಿದೆ. ಪುರಾತನ ಕಾಲದಿಂದಲೂ ಪಾಳಿಯ ಪದ್ಧತಿಯಲ್ಲಿ ಒಂದು ಮನೆಯಿಂದ ಮತ್ತೊಂದು ಮನೆಗೆ ನೀರನ್ನು ಬಿಡುವ ರೂಢಿ ನಡೆದುಕೊಂಡು ಬಂದಿದೆ. ಸಾಕಷ್ಟು ಜಲ ಮೂಲವಿರುವ ಗುಂಬಳೆಯ ಈ ಸರ್ಕಾರಿ ಕೆರೆಯಲ್ಲಿ ಕೆಲವು ದಿನಗಳ ಹಿಂದೆ ಬೃಹತ್ ಮರ ಬಿದ್ದಿತ್ತು. ನೀರಿನ ಹರಿವಿಗೆ ಅಡ್ಡಿ ಉಂಟಾಗಿತ್ತು. ಕೆರೆಯ ಸ್ವಚ್ಛತೆ ಬಗ್ಗೆ ಸ್ಥಳೀಯರು ಗ್ರಾಮ ಪಂಚಾಯಿತಿಗೆ ಮನವಿ ಮಾಡಿದ್ದರು.</p>.<p>ಆದರೆ ಕೆರೆ ಪಕ್ಕದ ಖಾಸಗಿ ಜಾಗದವರು ಬಿದ್ದ ಮರದ ತೆರವಿನ ಕಾರ್ಯಕ್ಕೆ ಅಡ್ಡಿಪಡಿಸುತ್ತಿದ್ದರು. ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಕುರಿತು ಕುಮಟಾ ತಹಶೀಲ್ದಾರ್ಗೆ ಸಾರ್ವಜನಿಕರು ಮನವಿ ಮಾಡಿದ್ದರು. ಅದರಂತೆ ಕುಮಟಾ ತಹಶೀಲ್ದಾರ್ ಶ್ರೀಕೃಷ್ಣ ಕಾಮಕರ್ ಶುಕ್ರವಾರ ಖುದ್ದು ಸ್ಥಳಕ್ಕೆ ಆಗಮಿಸಿ ಮರ ತೆಗೆದು ಸ್ವಚ್ಛಗೊಳಿಸಲು ಸ್ಥಳೀಯ ಆಡಳಿತಕ್ಕೆ ಸೂಚಿಸಿದರು.</p>.<p>ತಹಶೀಲ್ದಾರ್ ಸೂಚನೆಯಂತೆ ಗ್ರಾಮ ಪಂಚಾಯಿತಿ ಸ್ವಚ್ಛತಾ ಸಿಬ್ಬಂದಿ ಕೆರೆಯಲ್ಲಿ ಬಿದ್ದಿದ್ದ ಮರವನ್ನು ತೆರವಿಗೊಳಿಸಿದರು.</p>.<p>ಪೊಲೀಸ್ ನಿರೀಕ್ಷಕ ಶ್ರೀಧರ ಎಸ್.ಆರ್. ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-20-1964907890</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>