ಕೆಲವು ದಿನಗಳ ಹಿಂದೆ ಗುಜರಾತಿನ ಬರೋಡಾದಲ್ಲಿ ನಡೆದ ಯಜ್ನದಲ್ಲಿ ಭಾಗವಹಿಸಿದ್ದ ಇವರು ಅಲ್ಲಿಯೇ ಅನಾರೋಗ್ಯಕ್ಕೆ ತುತ್ತಾದರು. ನಂತರ ಅವರ ಶಿಷ್ಯವೃಂದ ಅಲ್ಲಿಂದ ಅವರನ್ನು ಮಹಾರಾಷ್ಟ್ರದ ನಾಸಿಕಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದರು. ಮೃತರ ಪಾರ್ಥೀವ ಶರೀರವನ್ನು ಗುರುವಾರ ಗೋಕರ್ಣಕ್ಕೆ ತಂದು ಅಂತಿಮ ವಿಧಿ, ವಿಧಾನಗಳನ್ನು ಪೂರೈಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.