<p><strong>ಗೋಕರ್ಣ:</strong> ಮಹಾಶಿವರಾತ್ರಿಯ ಅಂಗವಾಗಿ ಇಲ್ಲಿನ ಮಹಾಬಲೇಶ್ವರ ದೇವಸ್ಥಾನದಲ್ಲಿ ಗುರುವಾರ ಬ್ರಹ್ಮರಥೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ಸಾವಿರಾರು ಭಕ್ತರು ತೇರೆಳೆದು ಭಕ್ತಿ ಸಮರ್ಪಿಸಿದರು.</p>.<p>ರಥಬೀದಿಯಲ್ಲಿ ಸಾಗಿದ ರಥದಲ್ಲಿ ಮುಖ್ಯ ದೇವರಾದ ಮಹಾಬಲೇಶ್ವರನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ವೆಂಕಟ್ರಮಣ ದೇವಸ್ಥಾನದವರೆಗೆ ಸಾಗಿದ ರಥವನ್ನು ತಿರುಗಿ ಮೂಲಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ಎತ್ತರದ ರಥ ಎಂದೇ ಪ್ರಸಿದ್ಧಿಯಾಗಿರುವ, ಅತಿ ಪುರಾತನ ರಥವನ್ನು ಬಣ್ಣ– ಬಣ್ಣದ ಬಾವುಟಗಳಿಂದ, ತಳಿರು–ತೋರಣಗಳಿಂದ, ಹೂವಿನಿಂದ ಆಕರ್ಷಕವಾಗಿ ಶೃಂಗರಿಸಲಾಗಿತ್ತು.</p>.<p>ಸ್ಥಳೀಯರೇ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ನೂರಾರು ವಿದೇಶಿಯರೂ ಕುಣಿದು ಸಂಭ್ರಮಿಸಿದರು. ರಥೋತ್ಸವ ಸಾಗಿದ ದಾರಿಯುದ್ದಕ್ಕೂ‘ಹರ ಹರ ಮಹಾದೇವ’ ಎಂಬ ಶಿವಸ್ತುತಿಗಳನ್ನು ಭಕ್ತರು ಪಠಿಸಿದರು.</p>.<p>ರಸ್ತೆಯ ಎರಡೂ ಪಕ್ಕದಲ್ಲಿ ಮನೆಗಳ ಮಹಡಿಗಳ ಮೇಲೆ ನಿಂತಿದ್ದಭಕ್ತರು ಫೋಟೊ ತೆಗೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಈ ಬಾರಿ ಪ್ರತಿ ವರ್ಷಕ್ಕಿಂತ ಮೊದಲೇ ರಥೋತ್ಸವಸಂಪನ್ನಗೊಂಡಕಾರಣ ಅನೇಕಭಕ್ತರು ರಥೋತ್ಸವದ ಕ್ಷಣಗಳಿಂದ ವಂಚಿತರಾದರು.</p>.<p>ಕಂದಾಯ ಇಲಾಖೆ, ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ಆಗದಂತೆ ನೋಡಿಕೊಂಡರು. ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿ ಶಾಂತ ರೀತಿಯಲ್ಲಿ ರಥೋತ್ಸವ ನಡೆಯುವಂತೆ ನೋಡಿಕೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋಕರ್ಣ:</strong> ಮಹಾಶಿವರಾತ್ರಿಯ ಅಂಗವಾಗಿ ಇಲ್ಲಿನ ಮಹಾಬಲೇಶ್ವರ ದೇವಸ್ಥಾನದಲ್ಲಿ ಗುರುವಾರ ಬ್ರಹ್ಮರಥೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ಸಾವಿರಾರು ಭಕ್ತರು ತೇರೆಳೆದು ಭಕ್ತಿ ಸಮರ್ಪಿಸಿದರು.</p>.<p>ರಥಬೀದಿಯಲ್ಲಿ ಸಾಗಿದ ರಥದಲ್ಲಿ ಮುಖ್ಯ ದೇವರಾದ ಮಹಾಬಲೇಶ್ವರನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ವೆಂಕಟ್ರಮಣ ದೇವಸ್ಥಾನದವರೆಗೆ ಸಾಗಿದ ರಥವನ್ನು ತಿರುಗಿ ಮೂಲಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ಎತ್ತರದ ರಥ ಎಂದೇ ಪ್ರಸಿದ್ಧಿಯಾಗಿರುವ, ಅತಿ ಪುರಾತನ ರಥವನ್ನು ಬಣ್ಣ– ಬಣ್ಣದ ಬಾವುಟಗಳಿಂದ, ತಳಿರು–ತೋರಣಗಳಿಂದ, ಹೂವಿನಿಂದ ಆಕರ್ಷಕವಾಗಿ ಶೃಂಗರಿಸಲಾಗಿತ್ತು.</p>.<p>ಸ್ಥಳೀಯರೇ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ನೂರಾರು ವಿದೇಶಿಯರೂ ಕುಣಿದು ಸಂಭ್ರಮಿಸಿದರು. ರಥೋತ್ಸವ ಸಾಗಿದ ದಾರಿಯುದ್ದಕ್ಕೂ‘ಹರ ಹರ ಮಹಾದೇವ’ ಎಂಬ ಶಿವಸ್ತುತಿಗಳನ್ನು ಭಕ್ತರು ಪಠಿಸಿದರು.</p>.<p>ರಸ್ತೆಯ ಎರಡೂ ಪಕ್ಕದಲ್ಲಿ ಮನೆಗಳ ಮಹಡಿಗಳ ಮೇಲೆ ನಿಂತಿದ್ದಭಕ್ತರು ಫೋಟೊ ತೆಗೆಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಈ ಬಾರಿ ಪ್ರತಿ ವರ್ಷಕ್ಕಿಂತ ಮೊದಲೇ ರಥೋತ್ಸವಸಂಪನ್ನಗೊಂಡಕಾರಣ ಅನೇಕಭಕ್ತರು ರಥೋತ್ಸವದ ಕ್ಷಣಗಳಿಂದ ವಂಚಿತರಾದರು.</p>.<p>ಕಂದಾಯ ಇಲಾಖೆ, ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ಆಗದಂತೆ ನೋಡಿಕೊಂಡರು. ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿ ಶಾಂತ ರೀತಿಯಲ್ಲಿ ರಥೋತ್ಸವ ನಡೆಯುವಂತೆ ನೋಡಿಕೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>