<p>ಗೋಕರ್ಣ: ಮಾನಸಿಕ ಖಿನ್ನತೆಗೆ ಒಳಗಾಗಿ ಗೋಕರ್ಣಕ್ಕೆ ಬಂದಿದ್ದ ದಾವಣಗೇರಿ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ದೇವನಾಯಕನಹಳ್ಳಿಯ ನಿವಾಸಿಯೊಬ್ಬರು ಭಾನುವಾರ ತಾವು ಉಳಿದುಕೊಂಡಿದ್ದ ವಸತಿಗೃಹದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.</p>.<p>ಮೃತರನ್ನು ಶಿವಕುಮಾರ ಮಾರಿಯಪ್ಪ (24) ಎಂದು ಗುರುತಿಸಲಾಗಿದೆ. ಮೇ 31ರಂದು ಗೋಕರ್ಣಕ್ಕೆ ಬಂದಿದ್ದ ಅವರು ಸಮದ್ರತೀರದ ವಸತಿ ಗೃಹವೊಂದರಲ್ಲಿ ವಾಸ್ತವ್ಯ ಮಾಡಿದ್ದರು. ಸಂಜೆಯಾದರೂ ಕೊಠಡಿಯಿಂದ ಹೊರಗೆ ಬಾರದ ಕಾರಣ ಸಂಶಯಗೊಂಡು ಕಿಟಕಿಯನ್ನು ತೆರೆದು ನೋಡಿದಾಗ ನೇಣುಹಾಕಿಕೊಂಡಿರುವುದು ಕಂಡು ಬಂತು.</p>.<p>ನಂತರ ಪೊಲೀಸರು ಸ್ಥಳಕ್ಕೆ ಬಂದು ರೂಮನ್ನು ಒಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಮೃತ ಶಿವಕುಮಾರರ ತಂದೆ ಪೊಲೀಸರಿಗೆ ದೂರು ನೀಡಿದ್ದು, ದೂರಿನಲ್ಲಿ ಮಗ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನ್ನು ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-20-699470373</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೋಕರ್ಣ: ಮಾನಸಿಕ ಖಿನ್ನತೆಗೆ ಒಳಗಾಗಿ ಗೋಕರ್ಣಕ್ಕೆ ಬಂದಿದ್ದ ದಾವಣಗೇರಿ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ದೇವನಾಯಕನಹಳ್ಳಿಯ ನಿವಾಸಿಯೊಬ್ಬರು ಭಾನುವಾರ ತಾವು ಉಳಿದುಕೊಂಡಿದ್ದ ವಸತಿಗೃಹದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.</p>.<p>ಮೃತರನ್ನು ಶಿವಕುಮಾರ ಮಾರಿಯಪ್ಪ (24) ಎಂದು ಗುರುತಿಸಲಾಗಿದೆ. ಮೇ 31ರಂದು ಗೋಕರ್ಣಕ್ಕೆ ಬಂದಿದ್ದ ಅವರು ಸಮದ್ರತೀರದ ವಸತಿ ಗೃಹವೊಂದರಲ್ಲಿ ವಾಸ್ತವ್ಯ ಮಾಡಿದ್ದರು. ಸಂಜೆಯಾದರೂ ಕೊಠಡಿಯಿಂದ ಹೊರಗೆ ಬಾರದ ಕಾರಣ ಸಂಶಯಗೊಂಡು ಕಿಟಕಿಯನ್ನು ತೆರೆದು ನೋಡಿದಾಗ ನೇಣುಹಾಕಿಕೊಂಡಿರುವುದು ಕಂಡು ಬಂತು.</p>.<p>ನಂತರ ಪೊಲೀಸರು ಸ್ಥಳಕ್ಕೆ ಬಂದು ರೂಮನ್ನು ಒಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಮೃತ ಶಿವಕುಮಾರರ ತಂದೆ ಪೊಲೀಸರಿಗೆ ದೂರು ನೀಡಿದ್ದು, ದೂರಿನಲ್ಲಿ ಮಗ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನ್ನು ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-20-699470373</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>