<p><strong>ಕಾರವಾರ</strong>: ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನವು ಅ.5ರಿಂದ ಭಕ್ತರಿಗೆ ತೆರೆದುಕೊಳ್ಳಲಿದೆ. ಸಾರ್ವಜನಿಕರು ಎಂದಿನಂತೆ ಆತ್ಮಲಿಂಗದ ದರ್ಶನ ಪಡೆಯಬಹುದು ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.</p>.<p>ಅಂದಿನಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸೇರಿದಂತೆ ಎಲ್ಲ ಸೇವಾವಕಾಶಗಳು ಇರುತ್ತವೆ. ಕೊರೊನಾ ವೈರಸ್ ಸಂಬಂಧ ದೇಶದಲ್ಲಿ ಲಾಕ್ಡೌನ್ ಘೋಷಣೆಯಾದ ಬಳಿಕ ದೇಗುಲಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿತ್ತು. ದೇಗುಲವು ಆರು ತಿಂಗಳಿನ ಬಳಿಕ ಸಾಮಾನ್ಯ ಭಕ್ತರಿಗೆ ತೆರೆದುಕೊಳ್ಳುತ್ತಿದೆ.</p>.<p>ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಕಟ್ಟುನಿಟ್ಟಾಗಿ ಅಂತರ ಕಾಯ್ದುಕೊಳ್ಳಬೇಕು. ಮುಖಗವಸು ಧರಿಸುವುದು, ನೈರ್ಮಲ್ಯ ಕಾಪಾಡುವುದು ಸೇರಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಆಡಳಿತ ಮಂಡಳಿ ಅಧ್ಯಕ್ಷ ಜಿ.ಕೆ.ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ತಿಳಿಸಿದ್ದಾರೆ.</p>.<p>ದೇವಸ್ಥಾನಕ್ಕೆ ಬರುವ ಪುರುಷರಿಗೆ ಧೋತಿ ಮತ್ತು ಶಲ್ಯ, ಹೆಂಗಸರಿಗೆ ಸೀರೆ ಅಥವಾ ಚೂಡಿದಾರ ಧರಿಸುವುದು ಕಡ್ಡಾಯ ಮಾಡಲಾಗಿದೆ. ಬರ್ಮುಡಾ ಪ್ಯಾಂಟ್, ಜೀನ್ಸ್ ಪ್ಯಾಂಟ್ ಧರಿಸಿ ಬಂದವರಿಗೆ ದೇವಸ್ಥಾನ ಪ್ರವೇಶವನ್ನು ನಿರ್ಬಂಧಿಸಿ ಪರಿಷ್ಕೃತ ವಸ್ತ್ರಸಂಹಿತೆಯನ್ನು ಈಗಾಗಲೇ ಜಾರಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನವು ಅ.5ರಿಂದ ಭಕ್ತರಿಗೆ ತೆರೆದುಕೊಳ್ಳಲಿದೆ. ಸಾರ್ವಜನಿಕರು ಎಂದಿನಂತೆ ಆತ್ಮಲಿಂಗದ ದರ್ಶನ ಪಡೆಯಬಹುದು ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.</p>.<p>ಅಂದಿನಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸೇರಿದಂತೆ ಎಲ್ಲ ಸೇವಾವಕಾಶಗಳು ಇರುತ್ತವೆ. ಕೊರೊನಾ ವೈರಸ್ ಸಂಬಂಧ ದೇಶದಲ್ಲಿ ಲಾಕ್ಡೌನ್ ಘೋಷಣೆಯಾದ ಬಳಿಕ ದೇಗುಲಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿತ್ತು. ದೇಗುಲವು ಆರು ತಿಂಗಳಿನ ಬಳಿಕ ಸಾಮಾನ್ಯ ಭಕ್ತರಿಗೆ ತೆರೆದುಕೊಳ್ಳುತ್ತಿದೆ.</p>.<p>ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಕಟ್ಟುನಿಟ್ಟಾಗಿ ಅಂತರ ಕಾಯ್ದುಕೊಳ್ಳಬೇಕು. ಮುಖಗವಸು ಧರಿಸುವುದು, ನೈರ್ಮಲ್ಯ ಕಾಪಾಡುವುದು ಸೇರಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಆಡಳಿತ ಮಂಡಳಿ ಅಧ್ಯಕ್ಷ ಜಿ.ಕೆ.ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ತಿಳಿಸಿದ್ದಾರೆ.</p>.<p>ದೇವಸ್ಥಾನಕ್ಕೆ ಬರುವ ಪುರುಷರಿಗೆ ಧೋತಿ ಮತ್ತು ಶಲ್ಯ, ಹೆಂಗಸರಿಗೆ ಸೀರೆ ಅಥವಾ ಚೂಡಿದಾರ ಧರಿಸುವುದು ಕಡ್ಡಾಯ ಮಾಡಲಾಗಿದೆ. ಬರ್ಮುಡಾ ಪ್ಯಾಂಟ್, ಜೀನ್ಸ್ ಪ್ಯಾಂಟ್ ಧರಿಸಿ ಬಂದವರಿಗೆ ದೇವಸ್ಥಾನ ಪ್ರವೇಶವನ್ನು ನಿರ್ಬಂಧಿಸಿ ಪರಿಷ್ಕೃತ ವಸ್ತ್ರಸಂಹಿತೆಯನ್ನು ಈಗಾಗಲೇ ಜಾರಿ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>