ಕಾಲೇಜಿನ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳಿಂದ ನಿರ್ವಹಣೆ ಮಾಡುತ್ತಿರುವ ಔಷದಿ ಉದ್ಯಾನವನ.ಮತ್ತು ಮಳೆ ನೀರು ಕೊಯ್ಲು ವ್ಯವಸ್ಥೆ.
ವಿದ್ಯಾರ್ಥಿ ಭೌದ್ಧಿಕ ಹಾಗೂ ಸ್ಪರ್ಧಾತ್ಮಕ ಯುಗಕ್ಕೆ ಹೊಂದಿಕೊಳ್ಳುವಂತೆ ಶಿಕ್ಷಣ ನೀಡುವುದು ನಮ್ಮ ಕರ್ತವ್ಯ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉತ್ತಮ ಆಯ್ಕೆ
ಎಂ.ಡಿ. ಒಕ್ಕುಂದ ಪ್ರಾಚಾರ್ಯ ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ಕಾಲೇಜಿಗೆ ಇನ್ನೇನು ಬೇಕು?
‘ವಿಜ್ಞಾನ ವಿಭಾಗದಲ್ಲಿ ಕಂಪ್ಯೂಟರ್ ವಿಜ್ಞಾನ ಭೌತಶಾಸ್ತ್ರ ಗಣಿತಶಾಸ್ತ್ರ ವಿಷಯಗಳಿಗೆ ಪೂರ್ಣಾವಧಿ ಬೋಧಕರ ಅಗತ್ಯವಿದೆ. ಎಂ.ಎ. ಎಂ.ಕಾಂ ಎಂ.ಎಸ್ಸಿ ಕೋರ್ಸ್ಗಳನ್ನು ಆರಂಭಿಸಿದರೆ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಗೆ ಧಾರವಾಡಕ್ಕೆ ತೆರಳುವುದು ತಪ್ಪಲಿದೆ’ ಎನ್ನುತ್ತಾರೆ ವಿದ್ಯಾರ್ಥಿಗಳು ಮತ್ತು ಪಾಲಕರು. ‘ಬೆಳಿಗ್ಗೆಯಿಂದ ಕಾಲೇಜು ಪ್ರಾರಂಭವಾಗುವ ಕಾರಣಕ್ಕೆ ದೂರದ ಊರುಗಳಿಂದ ಬರುವ ವಿದ್ಯಾರ್ಥಿಗಳಿಗೆ ಉಪಾಹಾರಕ್ಕಾಗಿ ಕ್ಯಾಂಟೀನ್ ಸೌಲಭ್ಯ ಅಗತ್ಯವಿದೆ. ಕೇಂದ್ರ ಬಸ್ ನಿಲ್ದಾಣದಿಂದ ಕಾಲೇಜಿಗೆ ಬಸ್ ಸಂಚಾರ ಒದಗಿಸಬೇಕು. ಸುತ್ತಿ ಬಳಸಿ ಕಾಲೇಜಿಗೆ ಬರಬೇಕು ಮುಖ್ಯ ರಸ್ತೆಯಿಂದ ಒಂದು ಕಿ.ಮೀ ದೂರದಲ್ಲಿರುವ ಕಾರಣ ಮುಖ್ಯ ದ್ವಾರಕ್ಕೆ ನೇರ ಮಾರ್ಗವನ್ನು ಕಲ್ಪಿಸಬೇಕು’ ಎಂದೂ ಒತ್ತಾಯಿಸುತ್ತಾರೆ.