ತಾಲ್ಲೂಕಿನ ಹಂದಿಗೋಣದಲ್ಲಿ ಭಾನುವಾರ, ಮಂಗಳೂರಿನಿಂದ ಬಂದ ವಲಸೆ ಕಾರ್ಮಿಕರು ವಿಶ್ರಾಂತಿ ಪಡೆಯುತ್ತಿರುವ ಮಾಹಿತಿ ಅಜಿತ್ ಅವರಿಗೆ ಲಭಿಸಿತ್ತು. ಈ ಬಗ್ಗೆಪರಿಶೀಲಿಸಲು ಪುರಸಭೆ ಮುಖ್ಯಾಧಿಕಾರಿ ಎಂ.ಕೆ.ಸುರೇಶ ಅವರಿಗೆ ಸೂಚಿಸಿದರು. ತಕ್ಷಣ ಅಲ್ಲಿಗೆ ಧಾವಿಸಿದ ಸುರೇಶ, 12 ಜನ ಕಾರ್ಮಿಕರನ್ನು ಮಾತನಾಡಿಸಿ ವಿಶ್ವಾಸಕ್ಕೆ ತೆಗೆದುಕೊಂಡರು.