<p><strong>ಕಾರವಾರ: ‘</strong>ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿರುವ ಹಿನ್ನೆಲೆಯಲ್ಲಿ ಫೆ.11ರಂದು ಹೊನ್ನಾವರದ ಗುಣವಂತೆಯ ಒಕ್ಕಲಿಗರ ಭವನದಲ್ಲಿ ಜಿಲ್ಲಾಮಟ್ಟದ ಸಂಭ್ರಮಾಚರಣೆ ಕಾರ್ಯಕ್ರಮ ಮತ್ತು ಕಾರ್ಯಾಗಾರ ಆಯೋಜಿಸಲಾಗುವುದು’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ತಿಳಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಮಟ್ಟದ ಕಾರ್ಯಾಗಾರ ಆಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿ ತಾಲ್ಲೂಕಿನಿಂದ ಫಲಾನುಭವಿಗಳು ಆಗಮಿಸಲು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಕಾರ್ಯಾಗಾರ ನಡೆಯುವ ಸ್ಥಳದಲ್ಲಿ ಕಡ್ಡಾಯವಾಗಿ ಎಲ್ಲಾ ಬಸ್ಗಳಿಗೆ ನಿಲುಗಡೆಗೆ ಅವಕಾಶ ಕಲ್ಪಿಸಬೇಕು’ ಎಂದು ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.</p>.<p>‘ಶಕ್ತಿ ಯೋಜನೆಯಡಿ 17.73 ಕೋಟಿ ಬಾರಿ ಉಚಿತ ಪ್ರಯಾಣದ ಅವಕಾಶದ ಲಾಭ ಪಡೆದಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 3.37 ಲಕ್ಷ ಫಲಾನುಭವಿಗಳ ಖಾತೆಗೆ ಈವರೆಗೆ ₹1,493 ಕೋಟಿ ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ₹510.98 ಕೋಟಿ ಮೊತ್ತದ ವಿದ್ಯುತ್ ಶುಲ್ಕ ವಿನಾಯಿತಿಯನ್ನು ಜನರು ಪಡೆದುಕೊಂಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ನೇರ ನಗದು ಪಾವತಿ ಮೂಲಕ ₹298.89 ಕೋಟಿ ಪಾವತಿಸಲಾಗಿದ್ದು, ಯುವನಿಧಿ ಯೋಜನೆಯಡಿ 8,303 ಮಂದಿ ಯುವ ಜನರು ₹17.80 ಕೋಟಿ ಲಾಭ ಪಡೆದಿದ್ದಾರೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಮಾತನಾಡಿ, ‘ಸಂಭ್ರಮಾಚರಣೆ ಮತ್ತು ಕಾರ್ಯಾಗಾರದ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು’ ಎಂದರು.</p>.<p>ಪ್ರಾಧಿಕಾರದ ಉಪಾಧ್ಯಕ್ಷರಾದ ನಾಗರಾಜ ಮುರ್ಡೇಶ್ವರ, ಜನಾರ್ಧನ ದೇವಾಡಿಗ, ಪುರುಷೋತ್ತಮ ನಾಯ್ಕ, ಸದಸ್ಯರಾದ ರಾಜೇಂದ್ರ ರಾಣೆ, ದೇವಿದಾಸ ಶಾನಭಾಗ, ಅಣ್ಣಪ್ಪ ನಾಯ್ಕ, ಪಾಂಡುರಂಗ ಗೌಡ, ರಿಯಾಜ್ ಬಾಬುಸಾಬ್, ಸುಮಾ ಉಗ್ರಾಣಕರ, ಅನಿಲ್ ದಂಡಗಲ್, ರಾಜಶೇಖರ ಹಿರೇಮಠ, ರಾಜು ನಾಯ್ಕ, ಅಶೋಕ ಗೌಡ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: ‘</strong>ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿರುವ ಹಿನ್ನೆಲೆಯಲ್ಲಿ ಫೆ.11ರಂದು ಹೊನ್ನಾವರದ ಗುಣವಂತೆಯ ಒಕ್ಕಲಿಗರ ಭವನದಲ್ಲಿ ಜಿಲ್ಲಾಮಟ್ಟದ ಸಂಭ್ರಮಾಚರಣೆ ಕಾರ್ಯಕ್ರಮ ಮತ್ತು ಕಾರ್ಯಾಗಾರ ಆಯೋಜಿಸಲಾಗುವುದು’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ತಿಳಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಮಟ್ಟದ ಕಾರ್ಯಾಗಾರ ಆಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿ ತಾಲ್ಲೂಕಿನಿಂದ ಫಲಾನುಭವಿಗಳು ಆಗಮಿಸಲು ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಕಾರ್ಯಾಗಾರ ನಡೆಯುವ ಸ್ಥಳದಲ್ಲಿ ಕಡ್ಡಾಯವಾಗಿ ಎಲ್ಲಾ ಬಸ್ಗಳಿಗೆ ನಿಲುಗಡೆಗೆ ಅವಕಾಶ ಕಲ್ಪಿಸಬೇಕು’ ಎಂದು ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.</p>.<p>‘ಶಕ್ತಿ ಯೋಜನೆಯಡಿ 17.73 ಕೋಟಿ ಬಾರಿ ಉಚಿತ ಪ್ರಯಾಣದ ಅವಕಾಶದ ಲಾಭ ಪಡೆದಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 3.37 ಲಕ್ಷ ಫಲಾನುಭವಿಗಳ ಖಾತೆಗೆ ಈವರೆಗೆ ₹1,493 ಕೋಟಿ ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ₹510.98 ಕೋಟಿ ಮೊತ್ತದ ವಿದ್ಯುತ್ ಶುಲ್ಕ ವಿನಾಯಿತಿಯನ್ನು ಜನರು ಪಡೆದುಕೊಂಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ನೇರ ನಗದು ಪಾವತಿ ಮೂಲಕ ₹298.89 ಕೋಟಿ ಪಾವತಿಸಲಾಗಿದ್ದು, ಯುವನಿಧಿ ಯೋಜನೆಯಡಿ 8,303 ಮಂದಿ ಯುವ ಜನರು ₹17.80 ಕೋಟಿ ಲಾಭ ಪಡೆದಿದ್ದಾರೆ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಡಾ.ದಿಲೀಷ್ ಶಶಿ ಮಾತನಾಡಿ, ‘ಸಂಭ್ರಮಾಚರಣೆ ಮತ್ತು ಕಾರ್ಯಾಗಾರದ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕು’ ಎಂದರು.</p>.<p>ಪ್ರಾಧಿಕಾರದ ಉಪಾಧ್ಯಕ್ಷರಾದ ನಾಗರಾಜ ಮುರ್ಡೇಶ್ವರ, ಜನಾರ್ಧನ ದೇವಾಡಿಗ, ಪುರುಷೋತ್ತಮ ನಾಯ್ಕ, ಸದಸ್ಯರಾದ ರಾಜೇಂದ್ರ ರಾಣೆ, ದೇವಿದಾಸ ಶಾನಭಾಗ, ಅಣ್ಣಪ್ಪ ನಾಯ್ಕ, ಪಾಂಡುರಂಗ ಗೌಡ, ರಿಯಾಜ್ ಬಾಬುಸಾಬ್, ಸುಮಾ ಉಗ್ರಾಣಕರ, ಅನಿಲ್ ದಂಡಗಲ್, ರಾಜಶೇಖರ ಹಿರೇಮಠ, ರಾಜು ನಾಯ್ಕ, ಅಶೋಕ ಗೌಡ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>